ಉಡುಪಿ | ಡಾ.ಶಿವರಾಮ ಕಾರಂತರು ಯಕ್ಷಗಾನದ ಮೂಲಕ ವಿಶ್ವದ ಗಮನ ಸೆಳೆದವರು: ಡಾ.ಬಾಲಾಜಿ ಎಸ್

Date:

ಜಾನಪದಕ್ಕೆ ಯಾವುದೇ ಜಾತಿ, ಮತ, ಧರ್ಮಗಳ ಇತಿ ಮಿತಿಗಳಿಲ್ಲ. ಜಾನಪದವನ್ನು ಉಳಿಸಿ ಬೆಳೆಸುವುದು ಯುವ ಜನತೆಯ ಜವಾಬ್ದಾರಿ. ಡಾ. ಶಿವರಾಮ ಕಾರಂತರು ಸ್ವತಃ ಯಕ್ಷಗಾನವನ್ನು ಪ್ರದರ್ಶನ ಮಾಡುವ ಮೂಲಕ ವಿಶ್ವದ ಗಮನ ಸೆಳೆದವರು ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಬಾಲಾಜಿ ಎಸ್ ಹೇಳಿದರು.
ಅವರು ಗುರುವಾರ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-5 ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಡಾ. ಶಿವರಾಮ ಕಾರಂತರು ತಮ್ಮ ಬರಹಗಳ ಮೂಲಕ ಕರಾವಳಿಯ ಸಂಸ್ಕೃತಿ ಮಾತ್ರವಲ್ಲದೇ ಅದರೊಂದಿಗೆ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ಮೂಡಿಸುವ ಕಾರ್ಯದಲ್ಲಿ ತೊಡಗಿದವರು. ಕಾರಂತರ ಕುರಿತ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವುದೇ ಡಾ.ಶಿವರಾಮ ಕಾರಂತ ಟ್ರಸ್ಟಿನ ಮುಖ್ಯ ಉದ್ದೇಶವಾಗಿದೆ ಎಂದರು.

ಚಿಂತಕ ಮುಷ್ತಾಕ್ ಹೆನ್ನಾಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಡಾ. ಶಿವರಾಮ ಕಾರಂತರ ಬದುಕು, ಕೃತಿಗಳು ಮತ್ತು ಪರಿಸರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಡಾ. ಶಿವರಾಮ ಕಾರಂತರು ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಕುರಿತು ವಿಶೇಷ ಕಾಳಜಿ ಹೊಂದಿದ್ದರು. ಸಮಾಜವನ್ನು ಜಾಗೃತಿಗೊಳಿಸುವಲ್ಲಿ ಕಾರಂತರ ಪಾತ್ರ ಮಹತ್ತವಾಗಿದೆ ಎಂದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಖ್ಯಾತ ಜಾನಪದ ವಿದ್ವಾಂಸ ಪ್ರೊ. ಕನರಾಡಿ ವಾದಿರಾಜ್ ಭಟ್ ಜಲ ಜಾನಪದ ಪುಸ್ತಕ ಬಿಡುಗಡೆಗೊಳಿಸಿದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯೆ ಡಾ. ಭಾರತಿ ಮರವಂತೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ. ಪ್ರಸಾದ್ ರಾವ್, ಜಲ ಜಾನಪದ ಕೃತಿಯ ಸಂಪಾದಕ ಮಂಡಳಿಯ ಸದಸ್ಯರು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಕುಮಾರ್ ಶೆಟ್ಟಿ ನಿರೂಪಿಸಿ, ರೇಷ್ಮಾ ಶೆಟ್ಟಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...