ಮೈಸೂರು | ಸಿಜೆಐ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ; ಜಿಲ್ಲಾದ್ಯಂತ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

Date:

ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ ವತಿಯಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆತ ಖಂಡಿಸಿ ಪ್ರತಿಭಟನೆ ನಡೆಸಿದರು.

ಮೊಘಲರ ಕಾಲದಲ್ಲಿ ಭಗ್ನಗೊಂಡ ವಿಷ್ಣು ಮೂರ್ತಿ ಪುನರ್ ನವೀಕರಣಕ್ಕೆ ಆದೇಶ ನೀಡುವಂತೆ ಕೋರಿದ್ದರು. ನ್ಯಾಯಮೂರ್ತಿಗಳು ಸದರಿ ಪ್ರಕರಣ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ, ಆರ್ಕಲಾಜಿಕಲ್ ಸರ್ವೇ ಆಫ್ ಇಂಡಿಯಾ ಇಲಾಖೆಯಲ್ಲಿ ಪರಿಹರಿಸಿಕೊಳ್ಳುವಂತೆ ಸೂಚಿಸಿದರು. ಕೂಡಲೇ ಸನಾತನ ಪದ ಪ್ರಯೋಗದೊಂದಿಗೆ ಶೂ ಎಸೆತಕ್ಕೆ ಮುಂದಾದ ಘಟನೆಯನ್ನು ಒಕ್ಕೋರಲಿನಿಂದ ಖಂಡಿಸಿದರು. ಕೃತ್ಯ ಎಸಗಿರುವ ವಕೀಲನ ಮೇಲೆ ಕಾನೂನು ರೀತ್ಯಾ ಕ್ರಮವಹಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬೆಟ್ಟಯ್ಯಕೋಟೆ, ಅಲಗೂಡು ಶಿವಕುಮಾರ್, ಶಂಭುಲಿಂಗ ಸ್ವಾಮಿ, ಚೋರನಹಳ್ಳಿ ಶಿವಣ್ಣ, ಶಿವಬುದ್ದಿ, ಪಿ. ಮರಂಕಯ್ಯ, ಕಂದೇಗಾಲ ಶ್ರೀನಿವಾಸ್, ಮಹೇಶ್ ಮಲಾರ, ನಿಂಗರಾಜು ಹೆಗ್ಗನೂರು, ಅತ್ತಿಕುಪ್ಪೆ ರಾಮಕೃಷ್ಣ, ರಾಜು ಚಿಕ್ಕಹುಣಸೂರು, ರಾಜು ಕುಕ್ಕೂರು ಸೇರಿದಂತೆ ಹಲವರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂಜನಗೂಡು :

ಜನವಿರೋಧಿ, ಜೀವ ವಿರೋಧಿ ಮೌಲ್ಯಗಳನ್ನು ಒಳಗೊಂಡಿರುವ ಮನುಧರ್ಮ ಪ್ರತಿಪಾದಿಸುವ ಹಿಂದೂ ಪ್ಯಾಸಿಸ್ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಂವಿಧಾನದ ಮೇಲೆ ದಾಳಿ ನಡೆಸಿವೆ. ಅಂತಹದ್ದೇ ಘಟನೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯುವುದರ ಮೂಲಕ ತಮ್ಮ ಕೀಳು ಮನಸ್ಥಿತಿ ಜಗತ್ ಜಾಹೀರು ಮಾಡಿಕೊಂಡಿದೆ. ಇಂತಹ ಮನಸ್ಥಿತಿಯ ವ್ಯಕ್ತಿ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಯೋಜಕರಾದ ಕಾರ್ಯ ಬಸವಣ್ಣ, ತಾಲ್ಲೂಕು ಸಂಯೋಜಕ ಗಟ್ಟವಾಡಿ ಶಿವರಾಜು, ಹೆಜ್ಜಿಗೆ ಪ್ರಕಾಶ್, ಕಂದೇಗಾಲ ಶಿವಣ್ಣ, ಕಳಲೆ ಕುಮಾರ್, ಕಂದೇಗಾಲ ಕೃಷ್ಣಮೂರ್ತಿ, ಕೃಷ್ಣ ಮಲ್ಕುಂಡಿ, ರವಿ ಕೆರೆಹುಂಡಿ, ಸಿದ್ದರಾಜು ಕಳಲೆ, ಪುಟ್ಟಬುದ್ದಿ, ಸೋಮಣ್ಣ, ರಾಜಶೇಖರ್, ಜ್ಯೋತಿ, ಚಿಕ್ಕಣ್ಣ, ನಾಗರಾಜು, ಶಿವಣ್ಣ, ಮಹದೇವಯ್ಯ, ಮಹದೇವಸ್ವಾಮಿ, ಶ್ಯಾಮ್ ಸುಂದರ್, ಜಗದೀಶ್ ಸೇರಿದಂತೆ ಇನ್ನಿತರರು ಇದ್ದರು.

ಹುಣಸೂರು (ರತ್ನಾಪುರಿ) :

ತಾಲ್ಲೂಕಿನ ರತ್ನಾಪುರಿ ಮುಖ್ಯರಸ್ತೆಯ ಬಸ್ ನಿಲ್ದಾಣದ ಬಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಅಂಗಡಿ ಮುಂಗಟ್ಟುಗಳ ಮುಚ್ಚುವುದರ ಮೂಲಕ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣ ದೇಶದ ದುರಂತ. ದಲಿತರೆನ್ನುವ ಕಾರಣಕ್ಕೆ ವಕೀಲ ನಡೆದುಕೊಂಡಿರುವ ರೀತಿ ಖಂಡನಿಯ. ಇಂತಹ ದುರ್ಮಾರ್ಗಿಗಳು ಸಂವಿಧಾನ ವಿರೋಧಿ ಕೆಲಸದಲ್ಲಿ ನಿರತರಾಗಿದ್ದು, ಇದಕ್ಕೆಲ್ಲ ಮನುವಾದಿಗಳ ಕುತಂತ್ರ. ನೀಚ ಕೃತ್ಯವೆಸಗಿದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹಿರಿಯ ಮುಖಂಡರಾದ ಹರಿಹರ ಆನಂದಸ್ವಾಮಿ, ಪುಟ್ಟಸ್ವಾಮಿ, ಜಿ.ಪಂ. ಮಾಜಿ ಸದಸ್ಯ ಡಿ.ಕೆ. ಕುನ್ನೇಗೌಡ, ಅಜ್ಗರ್ ಪಾಷ, ನಾಗೇಶ ರಾವ್ ಮೆಗಾಣೆ, ವೆಳಂಗಿರಿ, ವಿಜೇಂದ್ರ ಕುಮಾರ್, ವಿಶ್ವನಾಥ್, ಪ್ರಸನ್ನ, ಸುದರ್ಶನ ಸಿಂಗ್, ಶಿವಕುಮಾರ್, ಸುರೇಶ್ ಸೇರಿದಂತೆ ಇನ್ನಿತರರು ಇದ್ದರು.

ಹುಣಸೂರು(ಪಟ್ಟಣ) :

ಸಮಾನ ಮನಸ್ಕ ಸಂಘಟನೆ ಹೋರಾಟಗಾರರು ಸಂವಿಧಾನ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಕೇಶ್ ಕಿಶೋರ್ ವಿರುದ್ಧ ಯುಎಪಿಎ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರ ಮೇಲೆ ಕಲಾಪದ ವೇಳೆ ಶೂ ಎಸೆದು ಘನ ನ್ಯಾಯಾಲಯಕ್ಕೆ ಅಪಮಾನ ಎಸಗಿದ ಸನಾತನಿ ವಕೀಲನನ್ನು ಬಂಧಿಸಿ, ದೇಶದ್ರೋಹಿ ಪ್ರಕರಣದಡಿ ಬಂಧಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜೆ. ಮಹದೇವ, ರೇಣುಕಾ, ಮಹಾದೇವಮ್ಮ, ವಾರದರಾಜು, ಕೊಳಗಟ್ಟಕೃಷ್ಣ, ಎಂ. ಆರ್.ಪ್ರಕಾಶ್, ವೇಣುಕುಮಾರ್, ಸಿ.ಪುಟ್ಟಮಲ್ಲು, ರತ್ನಾಪುರಿ ಡೇವಿಡ್, ಕಾಂತರಾಜು, ನಂಜುಂಡ, ಮುಂಜಾಮಿಲ್ ಸೇರಿದಂತೆ ಇನ್ನಿತರರು ಇದ್ದರು.

ಹೆಗ್ಗಡದೇವನ ಕೋಟೆ :

ಜೀವಿಕ ಸಂಘಟನೆ (ಸಂವಿಧಾನ ಸಂರಕ್ಷಣಾ ಪಡೆ) ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ದೇಶದ್ರೋಹಿ ರಾಕೇಶ್ ಕುಮಾರ್ ನನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಸೋಮವಾರಪೇಟೆ | ಲಂಚ ಪಡೆವಾಗ ಲೋಕಾಯುಕ್ತ ಬಲೆಗೆ ಗ್ರಾ.ಪಂ. ಅಧ್ಯಕ್ಷೆ

ಪ್ರತಿಭಟನೆಯಲ್ಲಿ ಜೀವಿಕ ಬಸವರಾಜ್, ಶಿವರಾಜ್ ಮುದ್ದು ಮಲ್ಲಯ್ಯ,ಮಲಾರ ಮಹದೇವ್, ಚಿಕ್ಕಣ್ಣ, ಕಾಡುಮನೆಪ್ರಸನ್ನ, ಮಲ್ಲಿಕಾರ್ಜುನ್, ಮಲ್ಲಿಗಮ್ಮ, ಶ್ರೀನಿವಾಸ್, ನಾಗರಾಜು, ಜಯಮ್ಮ, ಸವಿತಾ, ರುದ್ರಪ್ಪ, ನಯಾಜ್, ಗೋಪಾಲ್ ರಾಜ್, ಮಲ್ಲಿಕಾರ್ಜುನ್, ವೇಣುಗೋಪಾಲ್ಸೇರಿದಂತೆಇನ್ನಿತರರುಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...