ಹಾಸನ | ಕಾಂಗ್ರೆಸ್ ಸರ್ಕಾರದ ಕೊಡುಗೆ, ಜೆಡಿಎಸ್‌ ಪ್ರಚಾರಕ್ಕೆ ಬಳಕೆ : ಎಂ ಎ ಗೋಪಾಲಸ್ವಾಮಿ

Date:

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಏತನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದರೆ, ಶ್ರವಣಬೆಳಗೊಳ ಶಾಸಕರು ತಮ್ಮ ಕೊಡುಗೆಯೆಂದು ಬಿಂಬಿಸಿಕೊಂಡು ಚುನಾವಣೆ ಲಾಭಕ್ಕೆ ಮುಂದಾಗಿದ್ದಾರೆ. ಅವರು ನಕಲಿ ಭಗೀರಥರು, ತಾಲೂಕಿಗೆ ಸಿದ್ಧರಾಮಯ್ಯ ಅವರು ನಿಜವಾದ ಭಗೀರಥರು ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ ಎ ಗೋಪಾಲಸ್ವಾಮಿ ಹೇಳಿದರು.

ಚನ್ನರಾಯಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೈಕ್‌ ರ‍್ಯಾಲಿ ಮತ್ತು ರೋಡ್ ಶೋ ವೇಳೆ ಮಾತನಾಡಿದ ಅವರು, “ತಾಲೂಕಿನಲ್ಲಿ ಪ್ರಥಮವಾಗಿ ನುಗ್ಗೇಹಳ್ಳಿ ಏತನೀರಾವರಿ ಯೋಜನೆ ಮೂಲಕ ಅಂಕುಶ ಇಟ್ಟವರು ಮಾಜಿ ಶಾಸಕ ಪುಟ್ಟೇಗೌಡರು. ನಾನು ಸಂಸದೀಯ ಕಾರ್ಯದರ್ಶಿ ಆಗಿದ್ದ ಕಾಲದಲ್ಲಿಯೇ ಎಚ್‌ ಸಿ ಶ್ರೀಕಂಠಯ್ಯ ಅವರು ಹಿಸಾವೆಗೆ ತೋಟ, ಕಲ್ಲೆಸೋಮನಹಳ್ಳಿ ಏತನೀರಾವರಿ ಯೋಜನೆಗಳನ್ನು ತಂದರು. ಮುಖ್ಯಮಂತ್ರಿಯಾಗಿದ್ದ ಸಿದ್ದಾರಾಮಯ್ಯ ಎಲ್ಲ ಯೋಜನೆಗಳಿಗೂ ಅನುದಾನ ನೀಡಿ ತಾಲೂಕಿನ ನೀರಾವರಿಗೆ ಒತ್ತುಕೊಟ್ಟರು. ಇಲ್ಲಿ ಶಾಸಕರಾಗಿದ್ದ ಬಾಲಕೃಷ್ಣ ಅವರು ತಾವೇ ಮಾಡಿಸಿದ್ದು ಎಂದು ಜನರನ್ನು ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ” ಎಂದು ಆರೋಪಿಸಿದರು.

ಅವರ ಕಾಲದಲ್ಲಿ ಅಭಿವೃದ್ಧಿಯಾಗಿರುವ ರಸ್ತೆಗಳೇ ಅಭಿವೃದ್ಧಿಯಾಗಿವೆ. ನರೇಗಾದಡಿ ಹಿಂಬಾಲಕರಿಗೆ ಗುತ್ತಿಗೆ ನೀಡಿದ್ದು ಅವರ ಸಾಧನೆ. ಇನ್ನೂ 125ಕ್ಕೂ ಹೆಚ್ಚು ಹಳ್ಳಿಗಳಲ್ಲಿ ರಸ್ತೆಗಳಿಲ್ಲ. ಇಲ್ಲಿಯ ಲೋಪಗಳನ್ನು ಸರಿಪಡಿಸುವುದಕ್ಕೆ ನನ್ನ ಮೊದಲ ಆದ್ಯತೆ. ಪಕ್ಷದ ಪ್ರಣಾಳಿಕೆಗಳು ನಮಗೆ ಬಲ ನೀಡಿವೆ. 400ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರಚಾರ ಕಾರ್ಯಮುಗಿಸಿದ್ದು, ಆರು ಮಂದಿ ನಾಯಕರು ಒಟ್ಟಾಗಿ ಗೆಲುವಿಗೆ ಶ್ರಮಿಸುತ್ತಿದ್ದಾರೆ. ತಟಸ್ಥರಾಗಿದ್ದ ಕಾರ್ಯಕರ್ತರೆಲ್ಲ ಕೆಲಸ ಮಾಡುತ್ತಿದ್ದು, ತಮ್ಮ ಗೆಲುವು ನಿಶ್ಚಿತ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ಹೊಳೆನರಸೀಪುರ ಕ್ಷೇತ್ರ | ಬದಲಾವಣೆ ಬಯಸುತ್ತಿದ್ದಾರೆಯೇ ಮತದಾರರು?

ಮಾಜಿ ಶಾಸಕ ಸಿ ಎಸ್ ಪುಟ್ಟೇಗೌಡ ಮಾತನಾಡಿ, “ರಾಜ್ಯ, ಜಿಲ್ಲೆ ನಾಯಕರಿಗೆ ಶ್ರವಣಬೆಳಗೊಳ ಮತ್ತು ಹೊಳೆನರಸೀಪುರ ಕ್ಷೇತ್ರಗಳ ಗೆಲುವಿನ ಮೇಲೆ ವಿಶ್ವಾಸವಿಲ್ಲ. ಬದಲಿಗೆ ನಮಗೆ ಭರವಸೆ ಇದೆ. ಇವೆರೆಡೂ ಕ್ಷೇತ್ರಗಳ ಗೆಲುವಿನ ಮೂಲಕ ಇಲ್ಲಿನ ಮತದಾರರು ರಾಜ್ಯಕ್ಕೆ ದೊಡ್ಡ ಸಂದೇಶ ನೀಡಲಿದ್ದಾರೆ. ಜನಕ್ಕೆ ಬದಲಾವಣೆ ಬೇಕಿದೆ. ಹಾಗಾಗಿ ಕಾಂಗ್ರೆಸ್‌ ಬೆಂಬಲಕ್ಕೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವ ಹಿನ್ನೆಲೆ ಇಲ್ಲಿನ ಅಭಿವೃದ್ಧಿಗಾಗಿ ಎಂ ಎ ಗೋಪಾಲಸ್ವಾಮಿ ಅವರನ್ನು ಆಯ್ಕೆ ಮಾಡಿ” ಎಂದು ಮನವಿ ಮಾಡಿದರು.

ಈ ವೇಳೆ ಮುಖಂಡರಾದ ಎಂ ಶಂಕರ್, ಎಂ ಕೆ ಮಂಜೇಗೌಡ‌, ಯುವರಾಜ್, ವಿನೋದ್, ಮೋಹನ್, ಕಾರ್ತಿಕ್, ಕೆ ಜೆ ಬಾಬು, ಜನಾರ್ಧನ್, ಪ್ರಕಾಶ್‌, ಮಂಜುನಾಥ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...