ಸಿದ್ದಾಪುರ | ‘ಕೃಷಿ ಎಂದರೆ ವಿಜ್ಞಾನ’: ಪ್ರಗತಿಪರ ರೈತ ಮಡಗಾಂವಕರ ತೋಟಕ್ಕೆ ಶಾಲಾ ಮಕ್ಕಳ ಭೇಟಿ

Date:

ಸಿದ್ದಾಪುರ: ಇಂದಿನ ಆಧುನಿಕ ಯುಗದಲ್ಲಿ ಕೃಷಿ ಎಂದರೆ ಕೇವಲ ಮಣ್ಣಿನ ಕೆಲಸವಲ್ಲ, ಅದೊಂದು ವೈಜ್ಞಾನಿಕ ಕಲೆ ಎಂಬುದನ್ನು ತಾಲೂಕಿನ ಬಿಳಗಿ ಗ್ರಾಮದ ಪ್ರಗತಿಪರ ರೈತ ರವಿಲೋಚನ ಮಡಗಾಂವಕರ ಅವರು ನಿರೂಪಿಸಿದ್ದಾರೆ.

‘ಕೃಷಿಯ ಡಾಕ್ಟರ್’ ಎಂದೇ ಜನಪ್ರಿಯರಾಗಿರುವ ಇವರ ಕೃಷಿ ಸಾಧನೆಯನ್ನು ಕಣ್ಣಾರೆ ವೀಕ್ಷಿಸಲು ಶಾಲಾ ವಿದ್ಯಾರ್ಥಿಗಳು ಭೇಟಿ ನೀಡಿದ್ದರು. ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಾದ್ರಿಮನೆ ಕಿರಿಯ ಪ್ರಾಥಮಿಕ ಶಾಲೆಯ 23 ವಿದ್ಯಾರ್ಥಿಗಳು ಮಡಗಾಂವಕರ ಅವರ ತೋಟಕ್ಕೆ ಭೇಟಿ ನೀಡಿ, ಆಧುನಿಕ ಕೃಷಿ ತಂತ್ರಜ್ಞಾನಗಳ ಕುರಿತು ಪ್ರಾಯೋಗಿಕ ಮಾಹಿತಿ ಪಡೆದುಕೊಂಡರು.

ಮಡಗಾಂವಕರ ಅವರ 5 ಎಕರೆ ಕೃಷಿ ಭೂಮಿಯಲ್ಲಿ ಅಳವಡಿಸಿಕೊಂಡಿರುವ ಸಮಗ್ರ ಕೃಷಿ ಪದ್ಧತಿಯು ಮಕ್ಕಳಲ್ಲಿ ಕುತೂಹಲ ಮೂಡಿಸಿತು. ಪ್ರಮುಖ ಬೆಳೆಯಾದ ಅಡಿಕೆಯೊಂದಿಗೆ ವಿಜಯ, ಕರಿಮುಂಡ, ಪೆಣಿಯೂರು ತಳಿಯ ಕಾಳುಮೆಣಸುಗಳನ್ನು ಬೆಳೆಸಿರುವುದನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರೊಂದಿಗೆ ಮಾವು, ಗೇರು, ಹಲಸು, ಏಲಕ್ಕಿ, ನಿಂಬೆ ಹಾಗೂ ವಿಶೇಷ ಬೆಳೆಗಳಾದ ಅಗರ್ ವುಡ್, ಮಹಾಗನಿ ಮತ್ತು ಅವಕೆಡೊ ಬೆಳೆಗಳ ಬಗ್ಗೆಯೂ ರೈತರಿಂದ ಮಾಹಿತಿ ಸಂಗ್ರಹಿಸಿದರು. ಕನಿಷ್ಠ ವೆಚ್ಚದಲ್ಲಿ ಗರಿಷ್ಠ ಇಳುವರಿ ಪಡೆಯುವ ಸೂತ್ರಗಳನ್ನು ಮಡಗಾಂವಕರ ಅವರು ಮಕ್ಕಳಿಗೆ ಸರಳವಾಗಿ ವಿವರಿಸಿದರು.

ಮಣ್ಣಿನ ಸಾರ ರಕ್ಷಿಸಲು ಬಳಸುವ ಪ್ಲಾಸ್ಟಿಕ್ ಮಲ್ಚಿಂಗ್ ವಿಧಾನ, ಅಡಿಕೆ ತೋಟದ ಜೌಗು ತಡೆಯಲು ಅಳವಡಿಸಲಾದ ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ ಹಾಗೂ ಜಲ ಮರುಪೂರಣ ಕ್ರಮಗಳು ಮಕ್ಕಳ ಗಮನ ಸೆಳೆದವು.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಸತೀಶ್ ಸೈಲ್‌ಗೆ ಮತ್ತೆ ವೈದ್ಯಕೀಯ ಜಾಮೀನು ಮಂಜೂರು: ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಹೈಕೋರ್ಟ್ ಅನುಮತಿ

ಸಾವಯವ ಕೃಷಿಯ ಮಹತ್ವವನ್ನು ಅರಿತ ಮಕ್ಕಳು, ಬಯೋಡೈಜಸ್ಟರ್ ಮೂಲಕ ಗೊಬ್ಬರ ಉತ್ಪಾದನೆ, ಹನಿ ನೀರಾವರಿ ಪದ್ಧತಿಯಿಂದ ದ್ರವ ಗೊಬ್ಬರ ಬಳಕೆ ಹಾಗೂ ಜೀವಾಮೃತ ತಯಾರಿಕೆಯ ಬಗ್ಗೆ ಆಸಕ್ತಿಯಿಂದ ತಿಳಿದುಕೊಂಡರು. ಕೃಷಿಯಲ್ಲಿ ಯಾಂತ್ರೀಕರಣದ ಅವಶ್ಯಕತೆಯನ್ನು ಮನವರಿಕೆ ಮಾಡಿಕೊಟ್ಟ ರೈತರು,

ಬೀಜ ಬಿತ್ತುವ ಯಂತ್ರ, ಪವರ್ ಟಿಲ್ಲರ್, ಸೋಲಾರ್ ಡ್ರೆಯರ್ ಹಾಗೂ ಮೋಟೋಕಾರ್ಡ್‌ನಂತಹ ಆಧುನಿಕ ಉಪಕರಣಗಳ ಕಾರ್ಯವೈಖರಿಯನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.

ಕೃಷಿ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ರವಿಲೋಚನ ಮಡಗಾಂವಕರ ಅವರನ್ನು ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗೌರವಿಸಿ ಸನ್ಮಾನಿಸಿದರು.

ಈ ಕೃಷಿ ಅಧ್ಯಯನ ಪ್ರವಾಸದಲ್ಲಿ ಶಿಕ್ಷಕರಾದ ದರ್ಶನ ಹರಿಕಾಂತ, ಮೈತ್ರಿ ಹೆಗಡೆ, ಅತಿಥಿ ಶಿಕ್ಷಕಿ ಭಾರತಿ ಸುಭಾಶ್ಚಂದ್ರ ನಾಯ್ಕ ಹಾಗೂ ಪಾಲಕರಾದ ಜನಾರ್ಧನ ತಿಮ್ಮ ಗೌಡ, ಜಯಶೀಲ ನಾರಾಯಣ ಗೌಡ, ಕೃಷ್ಣ ಬೀರ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...