ಸಿದ್ದಾಪುರ | ಅರಣ್ಯವಾಸಿಗಳ ಹಕ್ಕುಗಳಿಗಾಗಿ ‘ಮನೆ ಮನೆಗೆ ಕಾನೂನು’ ಜಾಗೃತಿ ಅಭಿಯಾನಕ್ಕೆ ಚಾಲನೆ

Date:

ಸಿದ್ದಾಪುರ: ಅರಣ್ಯ ಭೂಮಿಯ ಹಕ್ಕನ್ನು ಪಡೆಯಲು ಅರಣ್ಯವಾಸಿಗಳಿಗೆ ಕಾನೂನಿನ ಅರಿವು ಅತ್ಯಗತ್ಯ. ಅರಣ್ಯವಾಸಿಗಳು ಕಾನೂನಿನ ಸಂಕೋಲೆಯಲ್ಲಿ ಸಿಲುಕಿರುವ ಇಂದಿನ ಸಂದರ್ಭದಲ್ಲಿ, ಕಾನೂನು ಜ್ಞಾನ ಪಡೆಯುವುದು ಅವರ ಮೂಲಭೂತ ಕರ್ತವ್ಯವಾಗಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಧಾನ ಸಂಚಾಲಕಿ ಹಾಗೂ ವಕೀಲೆ ಕು. ರಂಜಿತಾ ರವೀಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಸಿದ್ದಾಪುರ ತಾಲೂಕಿನ ಇಟಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಮೇಶ್ವರ ದೇವಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಅರಣ್ಯವಾಸಿಯ ಮನೆ ಮನೆಗೆ ಕಾನೂನು” ಎಂಬ ವಿನೂತನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸಾಮಾಜಿಕ ನ್ಯಾಯ ಒದಗಿಸುವ ಮತ್ತು ದೇಶದ ಆಹಾರೋತ್ಪನ್ನ ವೃದ್ಧಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ‘ಅರಣ್ಯ ಹಕ್ಕು ಕಾಯಿದೆ’ಯ ಅನುಷ್ಠಾನದಲ್ಲಿ ವೈಫಲ್ಯ ಉಂಟಾಗಿದೆ.

ಅರಣ್ಯ ಭೂಮಿಯ ಸಾಗುವಳಿಯನ್ನೇ ಅವಲಂಬಿಸಿರುವ ಅರಣ್ಯವಾಸಿಗಳಿಗೆ ಸಾಂದರ್ಭಿಕ ದಾಖಲೆಗಳ ಅಡಿಯಲ್ಲಿ ಸಾಗುವಳಿ ಹಕ್ಕನ್ನು ನೀಡಲು ಕಾನೂನಿನಲ್ಲಿ ಅವಕಾಶವಿದೆ. ಈ ಕುರಿತು ಅರಣ್ಯವಾಸಿಗಳಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದಾಪುರದಲ್ಲಿ 10,334 ಅರ್ಜಿಗಳ ತಿರಸ್ಕಾರ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಿದ್ದಾಪುರ ತಾಲೂಕಿನಾದ್ಯಂತ ಒಟ್ಟು 10,860 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 10,334 ಅರ್ಜಿಗಳು (ಅಂದರೆ ಶೇ. 95 ರಷ್ಟು) ತಿರಸ್ಕೃತಗೊಂಡಿವೆ. ಸಲ್ಲಿಕೆಯಾದ ಅರ್ಜಿಗಳಲ್ಲಿ 17 ಪಾರಂಪರಿಕ ಅರಣ್ಯವಾಸಿಗಳ ಅರ್ಜಿ ಸೇರಿದಂತೆ ಕೇವಲ 138 ಜನರಿಗೆ ಮಾತ್ರ ಸಾಗುವಳಿ ಹಕ್ಕು ನೀಡಲಾಗಿದೆ. ಅಂದರೆ ತಾಲೂಕಿನಲ್ಲಿ ಕೇವಲ ಶೇ. 1.27 ರಷ್ಟು ಅರಣ್ಯವಾಸಿಗಳಿಗೆ ಮಾತ್ರ ಹಕ್ಕು ದೊರೆತಂತಾಗಿದೆ ಎಂದು ಅವರು ಅಂಕಿಅಂಶಗಳ ಸಮೇತ ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಜಿಲ್ಲಾ ಸಂಚಾಲಕ ಮಾಬ್ಲೇಶ್ವರ ನಾಯ್ಕ ಬೇಡ್ಕಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಅರಣ್ಯವಾಸಿಗಳು ಸಾಗುವಳಿ ಹಕ್ಕಿನಿಂದ ವಂಚಿತರಾಗದಂತೆ ಕಾನೂನಿನ ಪ್ರಮುಖ ಅಂಶಗಳನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಗೋವಿಂದರಾಜ ಹೆಗಡೆ, ಅಶೋಕ ನಾಯ್ಕ, ಚಂದ್ರಕಾಂತ ನಾಯ್ಕ ಇಟಗಿ, ಸುನೀಲ್ ನಾಯ್ಕ ಸಂಪಖಂಡ ಮಾತನಾಡಿದರು. ಧನಂಜಯ್ ನಾಯ್ಕ ವಂದಿಸಿದರು. ಸಭೆಯಲ್ಲಿ ಶೇಖ್ ಸೈನ್ ಸಾಬ ಇಟಗಿ, ರಾಜು ಎಮ್. ನಾಯ್ಕ, ಬಿ. ಡಿ. ನಾಯ್ಕ, ಚಂದ್ರಶೇಖರ್ ನಾಯ್ಕ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...