ಸಿದ್ದಾಪುರ | ವಿದ್ಯಾರ್ಥಿಗಳಿಂದ ಭತ್ತದ ಕೊಯ್ಲು: ಪ್ರಾಯೋಗಿಕ ಕೃಷಿ ಅಧ್ಯಯನಕ್ಕೆ ಸಾಕ್ಷಿಯಾದ ಹುಲ್ಕುತ್ರಿ ಶಾಲೆ

Date:

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹುಲ್ಕುತ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಶಾಲೆಯ ಇಕೋ ಕ್ಲಬ್ ಅಡಿಯಲ್ಲಿ ತಾವು ನಾಟಿ ಮಾಡಿದ್ದ ಭತ್ತದ ಗದ್ದೆಯನ್ನು ಯಶಸ್ವಿಯಾಗಿ ಕೊಯ್ಲು ಮಾಡುವ ಮೂಲಕ ಸಂಪೂರ್ಣ ಕೃಷಿ ಅಧ್ಯಯನ ನಡೆಸಿದರು.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ತಾವೇ ನಾಟಿ ಮಾಡಿದ್ದ ಭತ್ತದ ಸಸಿಯ ಕೊಯ್ಲು ಕಾರ್ಯವನ್ನು ಮಾಡಿ, ವಿದ್ಯಾರ್ಥಿಗಳು ಕೃಷಿ ಚಟುವಟಿಕೆಯ ಕೊನೆಯ ಹಂತದ ಅನುಭವವನ್ನು ಪಡೆದುಕೊಂಡರು. ಈ ಶಾಲೆಯು ಪ್ರತಿ ವರ್ಷವೂ ಕೃಷಿ ಅಧ್ಯಯನವನ್ನು ನಡೆಸುತ್ತಿದ್ದು, ಈ ಬಾರಿ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಕೊಡಗಿನ ಕೆ ಎಚ್ ಬಿ 11 (KHB 11) ಎಂಬ ಭತ್ತದ ತಳಿಯನ್ನು ನಾಟಿ ಮಾಡಲಾಗಿತ್ತು.

ವಂದಾನೆಯ ಪ್ರಗತಿಪರ ಕೃಷಿಕರಾದ ನಾಗರಾಜ ಶ್ರೀನಿವಾಸ ಶಾನಭಾಗ ಅವರು ಭತ್ತದ ಬೀಜವನ್ನು ನೀಡಿ ಮಕ್ಕಳ ಈ ಕಾರ್ಯಕ್ಕೆ ಪ್ರೋತ್ಸಾಹ ನೀಡಿದ್ದರು. ಬಿಳಗಿಯ ಪ್ರಗತಿಪರ ಕೃಷಿಕ ರವಿಲೋಚನ ಮಡಗಾಂವಕರ ಅವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಯ್ಲು ಮಾಡಿದ ಈ ತಳಿಯ ಭತ್ತವು ಸಣ್ಣಕ್ಕಿಯಾಗಿದ್ದು, ಪೈರು ಸರಾಸರಿ 98 ಸೆಂ.ಮೀ.ನಿಂದ 113 ಸೆಂ.ಮೀ. ವರೆಗೆ ಎತ್ತರವಾಗಿ ಬೆಳೆದು ಅಧಿಕ ಇಳುವರಿ ನೀಡುವ ಸಾಮರ್ಥ್ಯ ಹೊಂದಿದೆ. ಮಲೆನಾಡಿನ ಈ ಪ್ರದೇಶದ ಮಣ್ಣಿಗೆ ಈ ತಳಿಯು ಸರಿಯಾಗಿ ಹೊಂದಾಣಿಕೆ ಆಗುತ್ತದೆ. ಅಲ್ಲದೆ, ಇದರಿಂದ ಉತ್ತಮ ಗುಣಮಟ್ಟದ ಅಕ್ಕಿಯನ್ನು ಪಡೆಯಬಹುದಾಗಿದೆ.

ವಿದ್ಯಾರ್ಥಿಗಳು ನಾಟಿ ಮಾಡಿದ ಈ ಸಸಿಯ ಪೈರಿನಲ್ಲಿ ಸರಾಸರಿ 182 ಭತ್ತದ ಕಾಳುಗಳು ಕಂಡುಬಂದಿರುವುದು ವಿಶೇಷವಾಗಿತ್ತು. ಸುಮಾರು 4 ಗುಂಟೆ ಕ್ಷೇತ್ರದಲ್ಲಿ ಶಾಲೆಯ 5 ರಿಂದ 7ನೇ ತರಗತಿಯ ಒಟ್ಟು 17 ವಿದ್ಯಾರ್ಥಿಗಳು ಕೇವಲ ಒಂದೂವರೆ ತಾಸಿನಲ್ಲಿ ಕೊಯ್ಲು ಕಾರ್ಯವನ್ನು ತುಂಬಾ ಸಲೀಸಾಗಿ ಪೂರ್ಣಗೊಳಿಸಿ ತಮ್ಮ ಕೃಷಿ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಮೂಲಕ ವಿದ್ಯಾರ್ಥಿಗಳು ಈ ಭಾಗದ ರೈತರಿಗೆ ಕೊಡಗಿನ ಈ ಹೈಬ್ರೀಡ್ ಭತ್ತದ ತಳಿಯನ್ನು ಪರಿಚಯಿಸುತ್ತ, ಕೃಷಿಯನ್ನು ಪ್ರಾಯೋಗಿಕವಾಗಿ ಅಧ್ಯಯನ ಮಾಡಿದಂತಾಯಿತು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಲೋಕ ಅದಾಲತ್ ಮೂಲಕ 47,179 ಪ್ರಕರಣ ಇತ್ಯರ್ಥ; ₹ 82.62 ಕೋಟಿ ಹಣ ಸಂಗ್ರಹ

ಕೊಯ್ಲು ಕಾರ್ಯಕ್ಕೆ ಮುನ್ನ, ಹೆಮಜೆನಿಯ ಹಿರಿಯರಾದ ಲಕ್ಷ್ಮಣ ಭೈರ್ಯ ಗೌಡ ಅವರು ಕತ್ತಿ ಹಾಗೂ ಪೈರಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಲೋಕೇಶ ಪದ್ಮನಾಭ ಗೌಡ, ಜಗದೀಶ ಪದ್ಮನಾಭ ಗೌಡ ಹಾಗೂ ಮುಖ್ಯ ಶಿಕ್ಷಕ ದರ್ಶನ ಹರಿಕಾಂತ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...