ಸಿದ್ದಾಪುರ | ಶಾಲಾ ವಿದ್ಯಾರ್ಥಿಗಳಿಂದ ಭತ್ತದ ಸಸಿ ನಾಟಿ; ಕೃಷಿ ಕಲಿಕೆಗೆ ಪಾಠ

Date:

ಸಿದ್ದಾಪುರ ತಾಲ್ಲೂಕಿನ ಹುಲ್ಕುತ್ರಿಯ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಈ ಬಾರಿ ಸಹ ತಮ್ಮ ಕೃಷಿ ಅಧ್ಯಯನಕ್ಕೆ ಪ್ರಾಯೋಗಿಕ ರೂಪ ನೀಡಿದ್ದು, ಪರಿಸರ ಸ್ನೇಹಿ ಚಟುವಟಿಕೆಗಳನ್ನು ಉತ್ತೇಜಿಸುವ ಇಕೋ ಕ್ಲಬ್ ಅಡಿಯಲ್ಲಿ ಭತ್ತದ ಸಸಿ ನಾಟಿ ಕೈಗೊಂಡಿದ್ದಾರೆ. ಭಾನುವಾರದ ರಜಾದಿನದಲ್ಲಿಯೇ ಶಾಲೆಯ 11 ಮಂದಿ ವಿದ್ಯಾರ್ಥಿಗಳು ಹೆಮಜೆನಿ ಗ್ರಾಮದ ರೈತ ಲೋಕೇಶ ಪದ್ಮನಾಭ ಗೌಡ ಅವರ ಹೊಲದಲ್ಲಿ ಉತ್ಸಾಹದಿಂದ ನಾಟಿ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮವನ್ನು ಎಸ್ಡಿಎಂಸಿ ಪಾಧ್ಯಕ್ಷೆ ವಾಣಿ ನಿತ್ಯಾನಂದ ಗೌಡ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಶಿಕ್ಷಕ ದರ್ಶನ ಹರಿಕಾಂತ ಹಾಗೂ ಗಂಗೆ ಮಾಬ್ಲ ಗೌಡ ವಿದ್ಯಾರ್ಥಿಗಳಿಗೆ ನಾಟಿ ವಿಧಾನ, ಅಂತರದ ಮಹತ್ವ ಹಾಗೂ ಭತ್ತದ ಬೆಳೆಯ ಆರೈಕೆ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ಬಾರಿ ವಿದ್ಯಾರ್ಥಿಗಳು ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ‘ಕೊಡಗಿನ ಕೆ.ಎಚ್.ಬಿ-11’ ಎಂಬ ಹೊಸ ತಳಿಯ ಸಸಿಗಳನ್ನು ನೆಟ್ಟಿದ್ದಾರೆ. ಸಣ್ಣಕ್ಕಿ ಸ್ವರೂಪದ ಈ ತಳಿ ಎತ್ತರವಾಗಿ ಬೆಳೆದು ಉತ್ತಮ ಇಳುವರಿ ನೀಡುವುದು ಮಾತ್ರವಲ್ಲದೆ ಮಲೆನಾಡಿನ ಮಣ್ಣಿಗೆ ಸೂಕ್ತವಾಗಿದೆ. ಉತ್ತಮ ಗುಣಮಟ್ಟದ ಅನ್ನ ನೀಡುವ ಈ ತಳಿಯನ್ನು ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಅನುಭವಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250818 WA0010

ಈ ಕಾರ್ಯಕ್ಕೆ ವಂದಾನೆಯ ಪ್ರಗತಿಪರ ರೈತ ನಾಗರಾಜ ಶ್ರೀನಿವಾಸ ಶಾನಭಾಗ ಬಿತ್ತನೆ ಬೀಜಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸಿದ್ದಾರೆ. ಬಿಳಗಿಯ ಮತ್ತೊಬ್ಬ ಪ್ರಗತಿಪರ ರೈತ ರವಿಲೋಚನಾ ಮಡಗಾಂವಕರ ಮಾರ್ಗದರ್ಶನ ಒದಗಿಸಿದ್ದಾರೆ. ಸುಮಾರು 4 ಗುಂಟೆ ಪ್ರದೇಶದಲ್ಲಿ ವಿದ್ಯಾರ್ಥಿಗಳು ಸ್ವತಃ ನಾಟಿ ಪೂರ್ಣಗೊಳಿಸಿದ್ದು, ತಮ್ಮ ಕೃಷಿ ಸಾಮರ್ಥ್ಯ ಹಾಗೂ ಶ್ರಮವನ್ನು ತೋರಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು, “ಕೃಷಿಯ ಕಷ್ಟ-ಸುಖಗಳನ್ನು ನೇರವಾಗಿ ತಿಳಿದುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ. ಪುಸ್ತಕದಲ್ಲಿ ಓದಿದ ಪಾಠಕ್ಕಿಂತ ಹೊಲದಲ್ಲಿ ಕಲಿತ ಪಾಠವೇ ಹೆಚ್ಚು ನೆನಪಾಗುತ್ತದೆ,” ಎಂದು ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

ಈ ಸಂದರ್ಭದಲ್ಲಿ ವಾಣಿ ನಿತ್ಯಾನಂದ ಗೌಡ, ಲೋಕೇಶ ಪದ್ಮನಾಭ ಗೌಡ, ಜಗದೀಶ ಪದ್ಮನಾಭ ಗೌಡ, ಗಂಗೆ ಮಾಬ್ಲ ಗೌಡ ಹಾಗೂ ಶಾಲಾ ಮುಖ್ಯೋಪಾಧ್ಯಾಯ ದರ್ಶನ ಹರಿಕಾಂತ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...