ಸಿದ್ದಾಪುರ: ತಾಲೂಕಿನ ದೇವಸ್ಥಳ–ಮುಗದೂರು ಪೋ.ಕೊಂಡ್ಲಿ ಪ್ರದೇಶದಲ್ಲಿರುವ ಪುನಿತ ರಾಜಕುಮಾರ ಆಶ್ರಯಧಾಮ ಅನಾಥಶ್ರಮ ಸೇವಾ ಸಮಿತಿ ಕೇಂದ್ರಕ್ಕೆ ಶಿರಸಿ ಉಪವಿಭಾಗಾಧಿಕಾರಿಗಳಾದ ಕು. ಕಾವ್ಯ ರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅನಾಥಶ್ರಮದಲ್ಲಿರುವ ಹಿರಿಯ ಜೀವಿಗಳ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಲಭ್ಯವಾಗಬೇಕಾದ ಎಲ್ಲಾ ಮೂಲಭೂತ ಸೌಲಭ್ಯಗಳು ಸರಿಯಾಗಿ ಒದಗಿಸುವಂತೆ ಸೂಚಿಸಿ. ಹಾಗೂ ದಿನನಿತ್ಯದ ಅವರ ಆರೋಗ್ಯ ಆರೈಕೆ ಕಾರ್ಯ ಯಾವ ರೀತಿಯಲ್ಲಿ ಆಗುತ್ತಿದೆ ಎಂದು ಅಧಿಕಾರಿಗಳಿಂದ ಸ್ಥಳದಲ್ಲೇ ಮಾಹಿತಿ ಪಡೆದುಕೊಂಡರು. ಸರ್ಕಾರದಿಂದ ಇವರಿಗೆ ನೀಡಲಾಗುವ ಅನುದಾನ ಮತ್ತು ಕಲ್ಯಾಣ ಯೋಜನೆಗಳನ್ನು ಅನುಷ್ಠಾನ ಮಾಡುವ ಬಗ್ಗೆ ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ನೀಡಿದರು,
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ

ಆಶ್ರಮದ ಮೂಲಸೌಕರ್ಯ, ಆಹಾರ, ಆರೋಗ್ಯ ಮತ್ತು ವಸತಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಿರಿಯರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳು ದೊರಕುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳೊಂದಿಗೆ ಶಿರಸಿ ಉಪವಿಭಾಗದ ದಂಡಾಧಿಕಾರಿಗಳು, ಸಿದ್ದಾಪುರ ತಹಶೀಲ್ದಾರ ಎಂ.ಆರ್. ಕುಲಕರ್ಣಿ, ಆಶ್ರಯಧಾಮ ಅನಾಥಶ್ರಮ ಸೇವಾ ಸಮಿತಿಯ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





