ಮೀನುಗಾರರ ‘ಕೈ’ ಹಿಡಿದ ಬಜೆಟ್ : ಭರಫೂರ ಭರವಸೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

Date:

3.27 ಲಕ್ಷ ಕೋಟಿ ರೂ.ಯ 14ನೇ ಬಜೆಟ್ ಅನ್ನು ಶುಕ್ರವಾರ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೀನುಗಾರರಿಗೆ ಭರಪೂರ ಭರವಸೆಯನ್ನು ಘೋಷಿಸಿದ್ದಾರೆ. ಆ ಮೂಲಕ ಸಂಕಷ್ಟದಲ್ಲಿರುವ ಮೀನುಗಾರಿಕಾ ಕ್ಷೇತ್ರವನ್ನು ಲಾಭದಾಯಕ ಉದ್ಯಮವನ್ನಾಗಿ ಮಾಡುವ ಗುರಿಯನ್ನಿಟ್ಟುಕೊಂಡಿದ್ದಾರೆ.

ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರದ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದರ ಜೊತೆಗೆ ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸುವ ಭರವಸೆ ನೀಡಿದ್ದು, ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್‌ ಗಾತ್ರ 3.27 ಲಕ್ಷ ಕೋಟಿ ರೂ. | 5 ಗ್ಯಾರಂಟಿ ಯೋಜನೆಗಳಿಗೆ ಬೇಕು ರೂ. 52,000 ಕೋಟಿ

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌-ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ಹಾಗೂ ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ವಿಪುಲ ಅವಕಾಶಗಳನ್ನು ಉಪಯೋಗಿಸುವುದಾಗಿ ತಿಳಿಸಿರುವ ಸರ್ಕಾರ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸುವುದಾಗಿಯೂ ತಿಳಿಸಿದೆ.

ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದು, ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...