ಸಿಎಜಿ ವರದಿಯ ಬಗ್ಗೆ ತನಿಖೆ ನಡೆಸುವ ತಾಕತ್ತು ಮೋದಿಗೆ ಇದೆಯಾ?: ಸಿದ್ದರಾಮಯ್ಯ ಸವಾಲು

Date:

  • ಮೃತಪಟ್ಟ 88,000 ಫಲಾನುಭವಿಗಳ ಹೆಸರಿನಲ್ಲಿ ಹೊಸದಾಗಿ ಬಿಲ್‌
  • ಪಿಎಂ ಕೇರ್ಸ್‌ ಫಂಡ್ ಯಾರಿಗೆ ಲಾಭವಾಗುತ್ತಿದೆ ಹೇಳಬಲ್ಲಿರಾ: ಪ್ರಶ್ನೆ

ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದ ಗುತ್ತಿಗೆದಾರರು ಮಾಡಿರುವ 40% ಕಮಿಷನ್ ಆರೋಪದ ತನಿಖೆಗೆ ನಿವೃತ್ತ ನ್ಯಾ. ಎಚ್‌ ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚನೆ ಮಾಡುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ. ನಿಮ್ಮದೇ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಎಜಿ ನೀಡಿರುವ ವರದಿಯ ಬಗ್ಗೆ ನೀವು ಯಾವಾಗ ತನಿಖೆ ನಡೆಸಿ ’ನಾ ಖಾವೂಂಗಾ ನಾ ಖಾನೆ ದೂಂಗಾ’ ಎಂಬ ನಿಮ್ಮ ಘೋಷಣೆಗೆ ಅನುಗುಣವಾಗಿ ನುಡಿದಂತೆ ನಡೆಯುವಿರಾ? ಎಂದು ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಮೂಗಿನ ಕೆಳಗೆ ದ್ವಾರಕಾ ಎಕ್ಸ್‌ಪ್ರೆಸ್‌ ಹೈವೇ ಯೋಜನೆಯಲ್ಲಿ ಪ್ರತಿ ಕಿ.ಮೀ.ಗೆ 250 ಕೋಟಿ ರೂ. ಕೊಳ್ಳೆ ಹೊಡೆಯಲಾಗಿದೆ. 5 ಟೋಲ್‌ ಪ್ಲಾಜಾಗಳಲ್ಲಿ 132 ಕೋಟಿ ಹಣ ಲೂಟಿ ಮಾಡಲಾಗಿದೆ. ನೀವು ಪದೇ ಪದೇ ಉಲ್ಲೇಖಿಸುವ ‘ಆಯುಷ್ಮಾನ್‌ ಭಾರತ್‌’ ಯೋಜನೆಯಲ್ಲಂತೂ ಮೃತಪಟ್ಟ ಸುಮಾರು 88,೦೦೦ ಫಲಾನುಭವಿಗಳ ಹೆಸರಿನಲ್ಲಿ ಹೊಸದಾಗಿ ಬಿಲ್‌ಗಳನ್ನು ಕ್ಲೈಮ್‌ ಮಾಡಿ ಹಣ ನುಂಗಿ ಹಾಕಲಾಗಿದೆ ಎಂದು ಸಿಎಜಿ ವರದಿ ಮಾಡಿದೆ. ಇದರ ಬಗ್ಗೆ ತನಿಖೆ ನಡೆಸುವ ಧೈರ್ಯ ತೋರಿಸುವಿರಾ” ಎಂದು ಪ್ರಶ್ನಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಅಧ್ಯಕ್ಷರೂ ಆಗಿದ್ದೀರಿ. ಭಾರತ್ ಮಾಲಾ ಯೋಜನೆಯಲ್ಲಿ ಪ್ರತಿ ಕಿ.ಮೀ.ಗೆ ರೂ.15.37 ಕೋಟಿಗಳಿಂದ ರೂ.32 ಕೋಟಿವರೆಗೆ ಹೆಚ್ಚುವರಿ ಖರ್ಚು ತೋರಿಸಲಾಗಿದೆ ಎಂದು ಸಿಎಜಿ ವರದಿ ಮಾಡಿದೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು?” ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಎಂ ಆಗಿದ್ದ ಕುಮಾರಸ್ವಾಮಿ, ಬೊಮ್ಮಾಯಿಗೆ ಕಾವೇರಿ ನೀರಿನ ಹಂಚಿಕೆ ಬಗ್ಗೆ ಕನಿಷ್ಠ ಜ್ಞಾನವಿಲ್ಲವೇ: ಲಕ್ಷ್ಮಣ್‌ ಪ್ರಶ್ನೆ

“ಸಂಪರ್ಕ ವ್ಯವಸ್ಥೆ ಸುಧಾರಣೆಯ ಅತಿ ಪ್ರಚಾರದ ಭಾರತ ಮಾಲಾ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿಯೇ ಅಕ್ರಮ ನಡೆದಿದೆ ಮತ್ತು ಆ ಯೋಜನೆ ಬಗೆಗೆ ವಿಸ್ತೃತವಾದ ವರದಿಯೇ ಸಲ್ಲಿಕೆಯಾಗಿಲ್ಲ. ಹೀಗಿದ್ದರೂ 3,500 ಕೋಟಿ ಹಣವನ್ನು ವರ್ಗಾಯಿಸಲಾಗಿದೆ ಎಂದು ಸಿಎಜಿ ಲೋಪವನ್ನು ಎತ್ತಿ ತೋರಿಸಿದೆ. ಪ್ರಧಾನಿ ಮೋದಿ ಅವರೇ, ಈ ಬಗ್ಗೆ ನಿಮ್ಮ ಮೌನವನ್ನು ಅಕ್ರಮದಲ್ಲಿ ಷಾಮೀಲಾಗಿದ್ದೀರಿ ಎಂದು ವ್ಯಾಖ್ಯಾನಿಸಬಹುದೇ?” ಎಂದಿದ್ದಾರೆ.

“ನೀವು I.N.D.I.A ಒಕ್ಕೂಟವನ್ನು ಭ್ರಷ್ಟರ ಒಕ್ಕೂಟವೆಂದು ಸುಳ್ಳು ಆರೋಪ ಹೊರಿಸಿ ಸಂಭ್ರಮಿಸುತ್ತೀರಿ. ನಿಮ್ಮದೇ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಸಿಎಜಿ ವರದಿಯು ಬಟಾಬಯಲು ಮಾಡಿದ್ದರೂ ಕಣ್ಣು, ಬಾಯಿ ಮುಚ್ಚಿ ಕೂತಿದ್ದೀರಿ. ಇದು ಆತ್ಮವಂಚಕ ನಡವಳಿಕೆ ಅಲ್ಲವೇ?” ಎಂದು ಕುಟುಕಿದ್ದಾರೆ.

“ಅಯೋಧ್ಯೆಯ ರಾಮ ಮಂದಿರ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ನಿಮ್ಮದೇ ಪರಿವಾರ ಆರೋಪಗಳನ್ನು ಮಾಡತೊಡಗಿದೆ. ‘ಪಿಎಂ ಕೇರ್ಸ್‌ ಫಂಡ್’‌ ಅನ್ನು ಸರ್ಕಾರದ್ದೆಂದು ಭಾವಿಸಿ ಮುಗ್ಧ ಜನತೆ ಅಪಾರ ಪ್ರಮಾಣದಲ್ಲಿ ಹಣವನ್ನು ದಾನವಾಗಿ ನೀಡುತ್ತಿದ್ದಾರೆ. ಆದರೆ, ನಿಮ್ಮ ಸರ್ಕಾರ ಅದನ್ನು ಸಾರ್ವಜನಿಕ ದತ್ತಿ ಟ್ರಸ್ಟ್‌ ಎಂದು ಹೆಸರಿಸಿ ಅದನ್ನು ಮಾಹಿತಿ ಹಕ್ಕಿನಿಂದ ಹೊರಗಿರಿಸಿದೆ. ಈ ದುಡ್ಡಿನಿಂದ ಯಾರಿಗೆ ಲಾಭವಾಗುತ್ತಿದೆ ಹೇಳಬಲ್ಲಿರಾ?”ಎಂದು ಸವಾಲು ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...