ಧರ್ಮಸ್ಥಳ ಪ್ರಕರಣ | ಕೊಂದವರು ಯಾರು? ಆಂದೋಲನ: ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

Date:

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ‘ಕೊಂದವರು’ ಯಾರು? ಎಂಬ ಸತ್ಯವನ್ನು ಸರ್ಕಾರ ಪತ್ತೆಹಚ್ಚಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಕನ್ನಡ ರಾಜ್ಯೋತ್ಸವ ದಿನದಂದು ನ್ಯಾಯಕ್ಕಾಗಿ ಆಗ್ರಹಿಸಿ ಮಹಿಳಾ ಸಂಘಟನೆಗಳು, ಮಹಿಳಾ ಸಮಾನತೆಯನ್ನು ಬೆಂಬಲಿಸುವ ಸಹೃದಯರು ಒಟ್ಟುಗೂಡಿ ಶನಿವಾರ ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.

“ಎಸ್‌ಐಟಿ ರಚನೆಗಾಗಿ ಆಗ್ರಹಿಸಿದ ಮಹಿಳಾ ಆಯೋಗದ ಪತ್ರ ಮತ್ತು ಅದನ್ನು ಆಧರಿಸಿ ಎಸ್‌ಐಟಿ ರಚಿಸಿದ ಸರ್ಕಾರದ ಆದೇಶ, ಎರಡರಲ್ಲೂ ಸ್ಪಷ್ಟವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನೂ ಒಳಗೊಂಡ ಸಮಗ್ರ ತನಿಖೆ ನಡೆಯಬೇಕು ಎಂಬ ಆಶಯವಿದೆ. ಹಾಗಿದ್ದ ಮೇಲೆ, ಅಂತಹ ಎಲ್ಲ ಪ್ರಕರಣಗಳ ತನಿಖೆಯನ್ನೂ ಸಂಪೂರ್ಣಗೊಳಿಸುವ ತನಕ ಸರ್ಕಾರ ಎಸ್‌ಐಟಿ ತನಿಖೆ ನಿಲ್ಲಿಸಬಾರದು” ಎಂದು ಫ್ರೀಡಂ ಪಾರ್ಕ್‌ನಲ್ಲಿ ಸೇರಿದ್ದ ಚಿಂತಕಿಯರು, ಬರಹಗಾರ್ತಿಯರು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕೊಂದವರು ಯಾರು? | ನ.1ರಂದು ನ್ಯಾಯಕ್ಕಾಗಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಐಟಿಗೆ ಯಾವ ಒತ್ತಡವೂ, ತೊಡಕೂ ಇಲ್ಲದೆ, ಯಾರೂ ಮೂಗು ತೂರಿಸದೆ ಮುಕ್ತವಾಗಿ, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ಹಾಗೂ ಧರ್ಮಸ್ಥಳದ ವ್ಯಾಪ್ತಿಯಲ್ಲಿ ದಾಖಲಾದ ಮಹಿಳೆಯರ/ಯುವತಿಯರ ಮೇಲಿನ ಅತ್ಯಾಚಾರ, ಕೊಲೆಗಳ ಎಲ್ಲ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ಸರ್ಕಾರ ಅನುವು ಮಾಡಿಕೊಡಬೇಕು. ಅಲ್ಲಿ ನಡೆದಿರುವ ಈ ಪ್ರಕರಣಗಳಿಗೆ ಸಂಬಂಧಿಸಿದ ಸಾಕ್ಷಿಗಳ ಅನುಮಾನಾಸ್ಪದ ಸಾವುಗಳನ್ನೂ ಎಸ್‌ಐಟಿ ತನಿಖೆ ನಡೆಸಬೇಕು” ಎಂದು ಹೋರಾಟಗಾರರು ಆಗ್ರಹಿಸಿದರು.

“ಎಸ್‌ಐಟಿ ಸಾರ್ವಜನಿಕ ನೋಟಿಸ್ ನೀಡಿ ಸಾಕ್ಷಿಗಳು ಮತ್ತು ದೂರುದಾರರು ಭಯವಿಲ್ಲದೆ ತನಿಖೆಗೆ ಸಹಕರಿಸಲು, ಅವರಿಗೆ ಅಗತ್ಯವಾದ ಭದ್ರತೆ ಮತ್ತು ಗೌಪ್ಯತೆಯನ್ನು ಕಲ್ಪಿಸಬೇಕು. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರ ರಕ್ಷಣೆ ಮತ್ತು ಪರಿಹಾರ ಕಲ್ಪಿಸಬೇಕು. ಹೈಕೋರ್ಟ್ ತೀರ್ಪಿನಂತೆ ಸೌಜನ್ಯ ಪ್ರಕರಣದಲ್ಲಿ ತನಿಖೆ ನಡೆಸುವಾಗ ಗಂಭೀರ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು. ಜಾತಿ, ವರ್ಗ, ಮತ ಮತ್ತು ರಾಜಕೀಯ ಪ್ರಾಬಲ್ಯ ಬಳಸಿಕೊಂಡು ಸತ್ಯವನ್ನು ಹತ್ತಿಕ್ಕಲು ಅಥವಾ ತನಿಖೆಯ ಮೇಲೆ ಒತ್ತಡ ಹೇರಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಮಹಿಳೆಯರ ಸ್ವಾತಂತ್ರ್ಯಕ್ಕೆ ಧಕ್ಕೆ ಬಾರದಂತೆ ಎಲ್ಲ ಸಾರ್ವಜನಿಕ, ಧಾರ್ಮಿಕ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಅವರಿಗೆ ಭದ್ರತೆ ಒದಗಿಸಬೇಕು. ಮಹಿಳೆಯರ ಮೇಲಿನ ಎಲ್ಲ ತರಹದ ಹಿಂಸೆಗಳನ್ನು ತಡೆಗಟ್ಟಲು ವ್ಯಾಪಕವಾಗಿ ತಳಮಟ್ಟದಿಂದ ಜಾಗೃತಿ ಮೂಡಿಸಬೇಕು. ಎಲ್ಲ ಧಾರ್ಮಿಕ ಸಂಸ್ಥೆಗಳೂ, ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಲೈಂಗಿಕ ಕಿರುಕುಳಗಳ ದೂರುಗಳನ್ನು ಸ್ವೀಕರಿಸಿ ಕಾನೂನುಬದ್ಧ ವಿಚಾರಣೆ ನಡೆಸಲು ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆಯಡಿ ಸಮಿತಿ ಸ್ಥಾಪಿಸುವುದನ್ನು ಕಡ್ಡಾಯ ಮಾಡಿ, ಅವುಗಳ ಬಗ್ಗೆ ನಿಗಾ ವಹಿಸಿ ವಿಮರ್ಶೆ ಮಾಡಲು ಪರಿಣತರ ಸ್ವತಂತ್ರ ಸಮಿತಿಯನ್ನು ಸ್ಥಾಪಿಸಬೇಕು” ಎಂದು ಹೋರಾಟಗಾರರು ತಿಳಿಸಿದರು.

women1

“ರಾಜ್ಯದ ಉಗ್ರಪ್ಪ ಸಮಿತಿ ಮತ್ತು ರಾಷ್ಟ್ರ ಮಟ್ಟದ ವರ್ಮಾ ಸಮಿತಿ ನೀಡಿರುವ ಶಿಫಾರಸುಗಳನ್ನು ರಾಜ್ಯದ ಮಹಿಳಾ ಸಂಘಟನೆಗಳ ಸಹಯೋಗದಲ್ಲಿ ವ್ಯಾಪಕ ಪ್ರಚಾರ ನೀಡಿ ಕೂಡಲೇ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಮನುಷ್ಯರಾಗಿ, ಸಹಜೀವಿಗಳಾಗಿ, ಪರಸ್ಪರ ಗೌರವಿಸುವುದನ್ನು ಕಲಿಸುವ ಆರೋಗ್ಯಕರ ದೇಹಶಾಸ್ತ್ರ ಮತ್ತು ಲಿಂಗತ್ವ ಸಮಾನತೆಯ ಶಿಕ್ಷಣವನ್ನು ಅಳವಡಿಸಬೇಕು” ಎಂದು ಮಹಿಳಾ ಹೋರಾಟಗಾರರು ಆಗ್ರಹಿಸಿದರು.

ಸಹಿ ಸಂಗ್ರಹ ಅಭಿಯಾನದಲ್ಲಿ ಮಹಿಳಾ ಹೋರಾಟಗಾರ್ತಿಯರಾದ ಡಾ.ವಸುಂಧರಾ ಭೂಪತಿ, ಡಾ. ದು ಸರಸ್ವತಿ, ಇಂದಿರಾ ಕೃಷ್ಣಪ್ಪ, ಡಾ.‌ ಕೆ.ಶರೀಫಾ, ಡಾ.ಎನ್ ಗಾಯತ್ರಿ, ಚಂಪಾವತಿ ಒಳಗೊಂಡಂತೆ ಹಲವು ಮಂದಿ ಬರಹಗಾರ್ತಿಯರು, ಗೌರಮ್ಮ, ಮೀನಾಕ್ಷಿ, ಇಂದ್ರಮ್ಮ, ಜ್ಯೋತಿ ಎ., ಕೆ.ಎಸ್. ವಿಮಲಾ, ಶಾಂತಮ್ಮ, ಮಧು ಭೂಷಣ್, ಮಮತಾ ಯಜಮಾನ್, ಗೌರಿ, ಗೀತಾ ಸಾಧನಾ, ವೀಣಾ ಹರಿಗೋವಿಂದ್, ಮಲ್ಲಿಗೆ ಸಿರಿಮನೆ, ಸುಷ್ಮಾ ವರ್ಮಾ, ಸೇರಿದಂತೆ ಹಲವರು ಹೋರಾಟಗಾರ್ತಿಯರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...