ಸಿಂದಗಿ | ಪಟ್ಟಣದ ಅಭಿವೃದ್ಧಿಗೆ 29 ಕೋಟಿ ಮೀಸಲು: ಶಾಸಕ ಅಶೋಕ ಮನಗೂಳಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಂದು ಮತಕ್ಷೇತ್ರದ ಶಾಸಕ ನಿಧಿಗೆ 50 ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅದರಂತೆ ನಮ್ಮ ಮತಕ್ಷೇತ್ರಕ್ಕೆ ಬರಬಹುದಾದ 50 ಕೋಟಿ ಅನುದಾನದಲ್ಲಿ 29 ಕೋಟಿಯನ್ನು ಸಿಂದಗಿ ಪಟ್ಟಣದ ಅಭಿವೃದ್ಧಿಗೆ ಕಾಯ್ದಿರಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.

ಸಿಂದಗಿ ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಎರಡು ಕೋಟಿ ವೆಚ್ಚದ ಭವನದ ಮುಂದುವರೆದ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, “ಪಟ್ಟಣದ 15 ಮತ್ತು 16ನೇ ವಾರ್ಡ್ನ ಪರಿಶಿಷ್ಟ ನಿವಾಸಿ ಕಾಲೋನಿಗಳಲ್ಲಿ ಒಂದು ಕೋಟಿ ವೆಚ್ಚದಲ್ಲಿ ರಸ್ತೆ ಫೇವರ್ಸ್ ಕಾಮಗಾರಿ ಪೂರ್ಣಗೊಂಡಿದೆ. ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ನಿವಾಸಿಗಳ ಕಾಲೋನಿಗಳಲ್ಲಿ ಸಿಸಿ ರಸ್ತೆಗಳಿಗಾಗಿ ತಾಂಬಾ ಗ್ರಾಮದಲ್ಲಿ 1 ಕೋಟಿ, ಕುಮಸಗಿ ಗ್ರಾಮದಲ್ಲಿ 50 ಲಕ್ಷ, ನಾಗಾವಿ ಬಿಕೆ, ಬಂಟನೂರ ಗ್ರಾಮಗಳಲ್ಲಿ 50 ಲಕ್ಷ ಅನುದಾನ ಬಿಡುಗಡೆಗೊಂಡಿದೆ. ಇಡೀ ದೇಶದಲ್ಲಿಯೇ ಯಶಸ್ಸಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯನ್ನು ಜಾರಿಗೆ ತಂದಿರುವ ಏಕಮೇವ ರಾಜ್ಯ ನಮ್ಮದಾಗಿದೆ. ಸರ್ಕಾರ ಈ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದೆ ಎಂಬ ವಿರೋಧ ಪಕ್ಷದ ಟೀಕೆ ಸತ್ಯಕ್ಕೆ ದೂರ. ಸಿಂದಗಿ ನಗರಸಭೆಯಾಗಿ ಮೇಲ್ದರ್ಜೆಗೇರಿದೆ. ಇನ್ನು ಪಟ್ಟಣದ ಸರ್ವಾಂಗೀಣ ಅಭಿವೃದ್ಧಿ ಸುಲಭವಾಗುತ್ತದೆ. ಎಲ್ಲ 23 ವಾರ್ಡುಗಳನ್ನು ಮಾದರಿಯಾಗಿ ಅಭಿವೃದ್ಧಿ ಮಾಡಲಾಗುತ್ತದೆ” ಎಂದು ತಿಳಿಸಿದರು.

ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿ, “ಇಲ್ಲಿಯ ಅಂಬೇಡ್ಕರ್ ಭವನ ನಿರ್ಮಾಣಗೊಂಡು ಹತ್ತು ವರ್ಷಗಳು ಪೂರ್ಣಗೊಂಡಿದ್ದು, ಹಿಂದಿನ ಶಾಸಕ ರಮೇಶ ಭೂಸನೂರ ಒಂದು ಕೋಟಿ ಅನುದಾನ ನೀಡಿದ್ದಾರೆ. ಸಿಂದಗಿಯಲ್ಲಿ ನಿರ್ಮಾಣಗೊಳ್ಳುವ ಬುದ್ಧ ವ್ಯವಹಾರಕ್ಕೆ 4 ಕೋಟಿ ಅನುದಾನ ಶಾಸಕ ಬಿಡುಗಡೆಗೊಳಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಸಿಂದಗಿ | ದಲಿತ ವ್ಯಕ್ತಿ ಮಹದೇವಪ್ಪ ಹರಿಜನ ಹತ್ಯೆ ಖಂಡಿಸಿ ಕಾಲ್ನಡಿಗೆ ಜಾಥಾ ಆರಂಭಿಸಿದ ದಸಂಸ

ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಸಿ ಮಾದೇವಪ್ಪ ಅವರು ಬಿಡುಗಡೆಗೊಳಿಸಿದ ಎರಡು ಕೋಟಿ ಅನುದಾನದಲ್ಲಿ ಪಟ್ಟಣದ ಅಂಬೇಡ್ಕರ್ ಭವನದ ಆವರಣದಲ್ಲಿ ಅಂಬೇಡ್ಕರ್ ಗ್ಲಾಸ್ ಹೌಸ್ ನಿರ್ಮಾಣಕ್ಕಾಗಿ 1.50 ಕೋಟಿ ಜೊತೆಗೆ 50 ಲಕ್ಷ ವೆಚ್ಚದಲ್ಲಿ ಭವನ ನವೀಕರಣಗೊಳಿಸಲಾಗುವುದು ಎಂದು ತಿಳಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಶಾಂತವೀರ ಬಿರಾದಾರ, ಸದಸ್ಯ ರಾಜಣ್ಣ ನಾರಾಯಣಕಾರ, ಬಸವರಾಜ ಯರನಾಳ, ಯಮನಪ್ಪ ಹೊಸಮನಿ, ಚಂದ್ರಮ್ಮ ಜಾವನ್ನವರ, ವಿಠಲ ಹೊಸಮನಿ, ಶರಣಪ್ಪ ಸುಲ್ಫಿ, ದೇವಕಿ ಮಾಣುರ, ನಿರ್ಮಾತಿ ಕೇಂದ್ರದ ಎಇಇ ಅರವಿಂದ ದನಗೊಂಡ ಬಾಲಕೃಷ್ಣ ಚಲವಾದಿ ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...