ರಕ್ತದಾನವು ಮಾನವೀಯ ಸೇವೆಯ ಶ್ರೇಷ್ಠ ರೂಪವಾಗಿದ್ದು, ಒಬ್ಬರ ರಕ್ತ ಮತ್ತೊಬ್ಬರ ಅಮೂಲ್ಯ ಜೀವ ಉಳಿಸುತ್ತದೆ ಎಂದು ಫಾ. ಸಂತೋಷ ಹೇಳಿದರು.
ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಸಂಗಮ ಗ್ರಾಮೀಣ ಅಭಿವೃದ್ಧಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಯುವಕ ಯುವತಿಯರಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ರಕ್ತದಾನದಿಂದ ದಾನಿಗಳ ಆರೋಗ್ಯ ಉತ್ತಮ ಗೊಳ್ಳುತ್ತದೆ. ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ ಹಾಗೂ ಹೊಸ ರಕ್ತ ಕಣಗಳ ಉತ್ಪಾದನೆಗೆ ಸಹಕಾರವಾಗುತ್ತದೆ. ರಕ್ತದಾನವು ಸಂಪೂರ್ಣ ಸುರಕ್ಷಿತವಾಗಿದ್ದು, ದಾನಿಗಳಿಗೆ ಯಾವುದೇ ಹಾನಿಯಾಗುವುದಿಲ್ಲ” ಎಂದು ಸರ್ಕಾರಿ ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ರೂಪಾಲಿ ಸ್ಪಷ್ಟಪಡಿಸಿದರು.
ದಲಿತ ವಿದ್ಯಾರ್ಥಿ ಪರಿಷತ್ತಿನ ಹರ್ಷವರ್ಧನ ಪೂಜಾರಿ ಮಾತನಾಡಿ, “ರಕ್ತದಾನವು ಕೇವಲ ಆರೋಗ್ಯ ಸೇವೆ ಅಷ್ಟೇ ಅಲ್ಲದೆ ಸಾಮಾಜಿಕ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿದೆ” ಎಂದು ಹೇಳಿದರು.
ಓಂಕಾರ್ ಕರಿಯರ್ ಅಕಾಡೆಮಿಯ ಶಿಕ್ಷಕ ಪರಶುರಾಮ ಬಿರಾದಾರ ಮಾತನಾಡಿ, ಯುವಕ ಯುವತಿಯರಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಕುರಿತು ತರಬೇತಿ ನೀಡಿದರು. ಮಾಹಿತಿ ಹಕ್ಕು ಅಧಿನಿಯಮ ಉದ್ದೇಶ ಅರ್ಜಿ ಸಲ್ಲಿಸುವ ವಿಧಾನ ಸಮಯ ಮಿತಿ, ಅರ್ಜಿಯ ಪ್ರಕ್ರಿಯೆ ಮತ್ತು ಯುವಕರ ಹಕ್ಕನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಬಹುದು ಎಂಬುದನ್ನು ವಿಸ್ತಾರವಾಗಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಶಶಿಕಾಂತ ಪಟ್ಟಣ ಆಗ್ರಹ
ಈ ವೇಳೆ ಆರಿಫಾ ಹವಲ್ದಾರ, ನದಿ ಬೀಳಗಿ, ಮಹೇಶ ಕಟಕದೊಂಡ, ಸರ್ಕಾರಿ ಜಿಲ್ಲಾಸ್ಪತ್ರೆಯ ಪಿಕೆ ಮೈಸೂರ, ಪ್ರಯೋಗ ಶಾಲಾ ತಂತ್ರಜ್ಞರು ತಾಲೂಕು ಆಸ್ಪತ್ರೆ, ಸಿಂದಗಿ ಯುವಕ ಯುವತಿಯರು ಇದ್ದರು.





