ಸಿಂದಗಿ | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ಯಾರೇಜ್ ಮಾಲೀಕರು, ಕಾರ್ಮಿಕರಿಂದ ಪ್ರತಿಭಟನೆ

Date:

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟಿಪ್ಪು ಸುಲ್ತಾನ್ ಅಂಜುಮನ್ ಗ್ಯಾರೇಜ್ ಲೈನ್ ಮಾಲೀಕರು-ಕಾರ್ಮಿಕರ ಸಂಘ ಹಾಗೂ ಸಿಐಟಿಯು ಸಂಘಟನೆ ವತಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು.

ಆ ಬಳಿಕ ತಹಶೀಲ್ದಾರ್ ಮುಖಾಂರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷರಾದ ಅಣ್ಣಾರಾಯ ಇಳಗೆರಿ ಮಾತನಾಡಿ, ಸಿಂದಗಿ ನಗರದಲ್ಲಿ ಇರುವ ಮುಸ್ಲಿಂ ಸಮಾಜ ಖಬರಸ್ಥಾನಕ್ಕೆ ಹೊಂದಿಕೊಂಡು ಅಂಜುಮನ ಜಾಗದಲ್ಲಿ ಕಳೆದ 35 ರಿಂದ 40 ವರ್ಷಗಳಿಂದ ಇದ್ದಾರೆ. ಬಡ ಮುಸ್ಲಿಂ ಹಾಗೂ ಹಿಂದು ಜನರು ಗುಡಿಸಲು, ಶೆಡ್ಡುಗಳು ಕಚ್ಚಾ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಹಲವಾರು ಕುಟುಂಬಗಳು ತಮ್ಮ ಕುಟುಂಬ ನಿರ್ವಹಣೆಗೆ ಸಣ್ಣಪುಟ್ಟ ಬೀಡಾ ಅಂಗಡಿ, ಚಹಾ ಅಂಗಡಿ, ಪಂಚರ್ ಅಂಗಡಿ, ಗ್ಯಾರೇಜ್ ಗಳು, ಫ್ಯಾಬ್ರಿಕೆಟಿಂಗ ಅಂಗಡಿಗಳು ಹೀಗೆ ಹಲವಾರ ರೀತಿಯ ಕಸಬುಗಳನ್ನು ಮಾಡುತ್ತಾ ತಮ್ಮ ಕುಟುಂಬ ನಿರ್ವಣೆ ಮಾಡಿಕೊಂಡು ಬಂದಿದ್ದಾರೆ. ಸದರಿ ನಿವೇಶನ ಬಿಟ್ಟರೆ ಬೇರೆ ಯಾವುದೆ ರೀತಿಯ ಆಸ್ತಿ ಇರುವುದಿಲ್ಲ. ಈಗ ಇರುವ ಜಾಗದಲ್ಲಿ ಕಷ್ಟಪಟ್ಟು ದುಡಿದು ಜೀವನ ಸಾಗಿಸುವ ಜನರಿದ್ದಾರೆ” ಎಂದು ತಿಳಿಸಿದರು.

ಅನೇಕ ಜನ ಯುವಕ ಯುವತಿಯರು ವಿದ್ಯಾವಂತರಾಗಿದ್ದಾರೆ. ಕಂಪನಿಗಳಲ್ಲಿ ಆಗಲಿ ಸರಕಾರದಲ್ಲಾಗಲಿ ಯಾವುದೆ ಕೆಲಸ ಸಿಗದೆ ಇದ್ದುದರಿಂದ ಆನಿವಾರ್ಯವಾಗಿ ಅಂಗಡಿಗಳು ಗ್ಯಾರೇಜ್ ಹಾಕಿಕೊಂಡು ಚಿಕ್ಕಪುಟ್ಟ ಕೆಲಸಗಳನ್ನು ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದಾರೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಯಾರೋ ಕೆಲವರು ಬಂದು “ನಾವು ಮುಸ್ಲಿಂ ಕಬರಸ್ಥಾನ ಕಮಿಟಿಯವರು. ಈ ಜಾಗ ನಮ್ಮದು. ಈ ಜಾಗ ಖಾಲಿ ಮಾಡಬೇಕು. ಇಲ್ಲದೆ ಹೋದರೆ ಪೊಲೀಸರನ್ನು ಕರೆ ತಂದು ನಿಮ್ಮನ್ನು ಇಲ್ಲಿಂದ ಕಿತ್ತು ಹಾಕುತ್ತೇವೆ. ಕೋರ್ಟ್ ಆದೇಶವಿದೆ. ನಿಮ್ಮನಯ ಜೈಲಿಗೆ ಕಳಿಸುತ್ತೇವೆ ಎಂದು ಹೆದರಿಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001346178

ಹೀಗಾಗಿ ಸರಕಾರದ ಅಥವಾ ಸಂಬಂಧಪಟ್ಟವರು ಸರಕಾರಿ ಕಾನೂನ ಅನುಸಾರ ಸದರಿ ನಿವೇಶನವನ್ನು ಖಾಯಂ ಆಗಿ ಮಂಜೂರು ಮಾಡಬೇಕು. ಇಲ್ಲವೆ ಭೂ ಬಾಡಿಗೆ ಮಂಜೂರು ಮಾಡಬೇಕು ಎಂದು ತಹಶೀಲ್ದಾರ್ ಅವರಲ್ಲಿ ಮನವಿ ಮಾಡಿದರು.

ಈ ಹೋರಾಟಕ್ಕೆ ದಲಿತ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಮ್.ಎ.ಸಿಂದಗಿಕರ ಹಾಗೂ ಮುಸ್ಲಿಂ ಮುಖಂಡರಾದ ರಹೀಮ ದುದನಿಯವರು ಬೆಂಬಲಿಸಿದರು.

ಈ ಸಂದರ್ಭದಲ್ಲಿ ಜಾಫರ್ ಇನಾಮಾದಾರ, ಇಬ್ರಾಹಿಂ ಸುತರಾ, ಬಶೀರ್ ಸಾಬ್ ಕಡಗಿ, ಸೈನಾಜಾ ಬಾಗವಾನ, ರಾಜು ಮುಲ್ಲಾ, ಪ್ರತಿಭಾ ಕೊರಡಗಿ, ಸರಸ್ವತಿ ಮಠ, ರಮೇಶ ತಳವಾರ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...