ಸಿಂದಗಿ | ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ಗೆ ಹೋಗುವ ದಾರಿ ಕೆಸರುಮಯ

Date:

ಸಿಂದಗಿ ಪಟ್ಟಣದ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕಿಗೆ ರಜ್ಜು(ರಾಡಿ) ತೊಳೆದುಕೊಂಡೇ ಹೋಗಬೇಕು. ಕೋಟಿಗೂ ಅಧಿಕ ವೆಚ್ಚದ ಈ ವೃಕ್ಷೋದ್ಯಾನಕ್ಕೆ ಬರಲು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಅಂದಾಜು ಎರಡು ನೂರು ಮೀಟರ್ ಉದ್ದದ ಈ ರಸ್ತೆಯಲ್ಲಿ 100 ಮೀಟರ್‌ಗೂ ಹೆಚ್ಚು ಕೆಸರಿನ ದಾರಿ ಇದೆ.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಾಲುಮರದ ತಿಮ್ಮಕ್ಕನ ಟ್ರೀ ಪಾರ್ಕಿಗೆ ಕೆಲ ದಿನಗಳ ಹಿಂದೆ 12ನೇ ವಾರ್ಡನ ಹೊನ್ನಪ್ಪ ಗೌಡ ಲೇಔಟಿನಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದ ಟ್ರೀ ಪಾರ್ಕನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಲೋಕಾರ್ಪಣೆಗೊಳಿಸಿದ್ದರು. ಆದರೆ ಈಗ ಹಾದಿಯ ತುಂಬೆಲ್ಲ ಮಳೆ ನೀರಿನಿಂದ ರಾಡಿ ತುಂಬಿಕೊಂಡಿದೆ.

ಪಟ್ಟಣವು ದಿನದಿಂದ ದಿನಕ್ಕೆ ದೊಡ್ಡದಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ ಸುಂದರಮಯಗೊಳಿಸುವ ನಿಟ್ಟಿನಲ್ಲಿ ಸಾಲುಮರದ ತಿಮ್ಮಕ್ಕನ ಟ್ರೀ ಪಾರ್ಕ್ ಪ್ರಾರಂಭಿಸಿದ್ದಾರೆ. ಆದರೆ, ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ ವ್ಯವಸ್ಥೆ ಮುಂತಾದ ಸಮಸ್ಯೆಗಳ ಬಗ್ಗೆ ಗಮನ ಹರಿಸದಿರುವುದು ಬೇಸರದ ವಿಷಯ ಎನ್ನುತ್ತಾರೆ ಸಾರ್ವಜನಿಕರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಾಲು ಮರದ ತಿಮ್ಮಕ್ಕ ಪಾರ್ಕ್

ಪಾರ್ಕಿಗೆ ಬರುವ ಜನರು ಅದೇ ರಾಡಿ ತುಳಿದು ಬರುವುದರಿಂದ ಪಾರ್ಕ್ ರಸ್ತೆಗಳಲ್ಲಿ ಪಾದಗಳ ಚಿತ್ತಾರ ಮೂಡುತ್ತಿದೆ. ರಾಡಿಮಯವಾಗಿ ಸ್ವಚ್ಛತೆ ಇಲ್ಲದಂತಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿ ರಸ್ತೆ ಸಮಸ್ಯೆಯಿಂದ ಆಗುತ್ತಿರುವ ಅದ್ವಾನಗಳಿಗೆ ಮುಕ್ತಿ ತೋರಬೇಕಿದೆ.

ಪಾರ್ಕನ ಸುತ್ತಲಿನ ಒಳ ಆವರಣ ಅನರ್ಮಲ್ಯದಿಂದ ಕೂಡಿದೆ. ದಿನವೂ ಮಳೆ ಸುರಿಯುತ್ತಿದ್ದು, ಇಡಿ ಪಾರ್ಕ್ ನೀರಿನ ಮಂಡದಂತಾಗಿದೆ. ಹರ ಹರಳು ಮಳೆ ನೀರಿನಿಂದ ತುಂಬಿ ತುಳುಕುತ್ತಿದೆ. ಪಾರ್ಕಿಗೆ ಬರುವ ಸಾರ್ವಜನಿಕರು ರಸ್ತೆಯ ಸುಧಾರಣೆ, ಒಳ ಹಾಗು ಹೊರ ಹವರಣದ ಸ್ವಚ್ಛತೆಗೆ ಕ್ರಮವಹಿಸಿ ಹಸಿರು ವನಕ್ಕೆ ಕೆಸರು ದಾರಿಯಿಂದ ಮುಕ್ತಿಗೊಳಿಸಬೇಕು ಎಂದು ಸಂಬಂಧಿಸಿದೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.‌

ಸಾಲು ಮರದ ತಿಮ್ಮಕ್ಕ ಪಾರ್ಕ್‌ಗೆ ಹೋಗುವ ದಾರಿ

ಈ ದಿನ ಪ್ರತಿನಿಧಿಗೆ ಪ್ರತಿಕ್ರಿಯಿಸಿದ ಪುರಸಭೆ ಸದಸ್ಯ ಮಹಾಂತಗೌಡ ಬಿರಾದಾರ ಮಾತನಾಡಿ, ಪುರಸಭೆ ಅಧ್ಯಕ್ಷರಿಗೆ ಹಾಗೂ ಮುಖ್ಯ ಅಧಿಕಾರಿಗಳಿಗೆ 12ನೇ ವಾರ್ಡಿಗೆ ರಸ್ತೆ ನಿರ್ಮಿಸಿ ಎಂದು ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಪ್ರಯೋಜನವಾಗಿಲ್ಲ. ಶಾಸಕರ ಗಮನಕ್ಕೆ ತಂದಿದ್ದೇವೆ. ಟ್ರೀ ಪಾರ್ಟಿಗೆ ಹೋಗುವ ಪ್ರಮುಖ ರಸ್ತೆ ನಿರ್ಮಿಸಲು ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಗವಿಕಲ ಸಹೋದರಿಯರಿಗೆ ಕೆಎಲ್‌ಇ ಸೊಸೈಟಿಯಿಂದ ʼಸಹಾಯ ಹಸ್ತʼ

ಸಾಮಾಜಿಕ ಹೋರಾಟಗಾರರಾದ ಶರಣು ಸಿಂಧೆ ಮಾತನಾಡಿ, ಶಾಸಕರು ಪಟ್ಟಣದ ಜನತೆಯ ಹಿತದೃಷ್ಟಿಯಿಂದ ಎರಡು ಕೋಟಿ ರೂ ವೆಚ್ಚದಲ್ಲಿ ಟ್ರೀ ಪಾರ್ಟ್ ನಿರ್ಮಿಸಿದ್ದಾರೆ. ಆದರೆ, ಅಲ್ಲಿಗೆ ಹೋಗಲು ಸೂಸಜ್ಜಿತವಾದ ರಸ್ತೆ ಇಲ್ಲದ ಕಾರಣ ವಾಯುವಿಹಾರಿಗಳಿಗೆ ಹಾಗೂ ಅಲ್ಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಕೂಡಲೆ ಪುರಸಭೆಯವರು ರಸ್ತೆ ನಿರ್ಮಿಸಿ ಸುತ್ತ ಮುತ್ತಲು ನೈರ್ಮಲ್ಯ ಕಾಪಾಡಬೇಕು ಎಂದರು.

ಇನ್ನಾದರೂ ಜನಪ್ರತಿನಿಧಿಗಳಾಗಿರಲಿ, ಅಧಿಕಾರಿಗಳಾಗಿರಲಿ ಇತ್ತ ಗಮನಹರಿಸಿ ಪರಿಹರಿಸುವವರೇ ಕಾದು ನೋಡಬೇಕಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...