ಸಿಂಧನೂರು | ಸರಕಾರಿ ಯೋಜನೆಗಳ ಯಶಸ್ಸಿನ ಪಾತ್ರ ಅಂಗನವಾಡಿ ಕಾರ್ಯಕರ್ತೆಯರು; ಡಿಎಚ್ ಕಂಬಳಿ

Date:

ಅಂಗನವಾಡಿ ಕಾರ್ಯಕರ್ತರು ಸಮಾಜದ ನೆಲಮಟ್ಟದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಭದ್ರತೆಯನ್ನು ಸೈನಿಕರಂತೆ ಕಾಯುತ್ತಿದ್ದಾರೆ. ಸರಕಾರದ ಯಾವುದೇ ಯೋಜನೆ ಅಥವಾ ಪ್ರಾಜೆಕ್ಟ್ ಯಶಸ್ವಿಯಾಗಬೇಕಾದರೆ ಅದರ ನೆಲಮಟ್ಟದ ಜಾರಿಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಂಗನವಾಡಿ ಫೆಡರೇಶನ್ ಜಿಲ್ಲಾ ಗೌರವಾಧ್ಯಕ್ಷರು ಡಿ.ಎಚ್.ಕಂಬಳಿ ಅವರು ಹೇಳಿದರು.

ಸಿಂಧನೂರು ನಗರದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ತಾಲ್ಲೂಕು ಸಮ್ಮೇಳನದಲ್ಲಿ ಭಾಗವಹಿಸಿ ಉದ್ಘಾಟಕರಾಗಿ ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರಲ್ಲಿ ಹಿರಿಯ ವಯಸ್ಸಿನವರು ಆಧುನಿಕ ತಂತ್ರಜ್ಞಾನದಲ್ಲಿ ಹಿಂದುಳಿದಿದ್ದರೂ ಸಹ, ಸ್ಮಾರ್ಟ್‌ಫೋನ್, ಆನ್‌ಲೈನ್ ಡಿಜಿಟಲ್ ದಾಖಲೆಗಳಂತಹ ಹೊಸ ವ್ಯವಸ್ಥೆಗಳಿಗೆ ಹೊಂದಿಕೊಳ್ಳಲು ಸಾಕಷ್ಟು ಸವಾಲುಗಳಿದ್ದರೂ, ತಮ್ಮ ಕರ್ತವ್ಯದಲ್ಲಿ ಯಾವುದೇ ಕೊರತೆ ಬಾರದಂತೆ ಅವರು ಶ್ರಮಿಸುತ್ತಿದ್ದಾರೆ ಎಂದರು.

ನಮಗೆ ಸ್ವಾಭಿಮಾನ ತಂದುಕೊಟ್ಟಿದ್ದು ಸಂಘಟನೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಹೋರಾಡಬೇಕು, ನಮ್ಮ ಧ್ವನಿಯನ್ನು ಗಟ್ಟಿಯಾಗಿ ಗುಡಿಸಬೇಕು ಹಾಗೂ ಇನ್ನಷ್ಟು ಬಲಿಷ್ಠರಾಗಬೇಕು ಎಂದು ಕಾರ್ಯಕರ್ತೆಯರಿಗೆ ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿಯಮಬಾಹಿರ ನೇಮಕಾತಿ; ಅಧಿಸೂಚನೆ ರದ್ದಾಗದಿದ್ದರೆ ಪ್ರತಿಭಟನೆ – ಅಂಬಣ್ಣ ಆರೋಲಿಕರ್

ಕಾರ್ಯಕ್ರಮದಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಬಾಷುಮಿಯಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ರೆಡ್ಡಿ, ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ ಬಾದರ್ಲಿ, ಉಪನ್ಯಾಸಕ, ಹಿರಿಯ ಹೋರಾಟಗಾರರು ಚಂದ್ರಶೇಖರ್ ಗೊರೆಬಾಳ, ಗಿರಿಜಮ್ಮ, ಸಿಡಿಪಿಒ ಅಶೋಕ ತುರ್ವಿಹಾಳ, ಸುಲೋಚನಾ, ಸಂಗಯ್ಯ ಸ್ವಾಮಿ, ರತ್ನಮ್ಮ, ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...