ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ಮತ್ತು ತಾಲ್ಲೂಕು ದೇವದುರ್ಗ ಘಟಕದ ಸಂಯುಕ್ತಾಶ್ರಯದಲ್ಲಿ ರವಿವಾರ 70ನೇ ಕರ್ನಾಟಕ ರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಸಿಂಧನೂರಿನ ಸಾಹಿತಿ ನರಸಿಂಹಪ್ಪ ಹಾಗೂ ಹುಸೇನಸಾಬ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಸಾಪ ತಾಲೂಕು ಅಧ್ಯಕ್ಷ ಹೆಚ್.ಎಫ್. ಮಸ್ಕಿ ತಿಳಿಸಿದ್ದಾರೆ.
ಒಂದಾಗಲಿ ನಮ್ಮ ನುಡಿ, ಒಂದಾಗಲಿ ನಮ್ಮ ನಡೆ’ ಎಂಬ ಹಿನ್ನಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ವಿಶೇಷ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಯಚೂರಿನ ಜಾಫರ್ ಮೋಹಿನುದ್ದೀನ್ ಮತ್ತು ಸಿರವಾರದ ರತ್ನಮ್ಮ ಬಿ.ಎಸ್. ದೇಸಾಯಿ ಅವರಿಗೆ ಗೌರವ ಸನ್ಮಾನ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರದ ಕೆಪಿಎಸ್ ಕ್ರಮ ಖಂಡಿಸಿ ಜ.25ರಿಂದ ಪಾದಯಾತ್ರೆ
ಕಾರ್ಯಕ್ರಮವನ್ನು ಶಾಸಕಿ ಕರೆಮ್ಮ ಜಿ. ನಾಯಕ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಮತ್ತು ತಾಲೂಕು ಘಟಕದ ಪರಿಷತ್ ಪದಾಧಿಕಾರಿಗಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.





