ವಿದ್ಯಾರ್ಥಿನಿಯೊಬ್ಬಳು ಸಂಚರಿಸುವ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಧನೂರು ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮಾನ್ವಿ ತಾಲ್ಲೂಕಿನ ನೀರಮಾನ್ವಿ ಸಮೀಪದ ಸೀಕಲ್ ತಾಂಡ ಗ್ರಾಮದ ಸುಮಂಗಲಾ (21) ಮೃತ ಯುವತಿ ಎಂದು ತಿಳಿದುಬಂದಿದೆ. ಸಿಂಧನೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರುಗಡೆ ಇರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿದ್ದು ಬಿಎ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳೆಂದು ತಿಳಿದು ಬಂದಿದೆ.
ಸಂಜೆ 5 ಗಂಟೆಗೆ ಸಿಂಧನೂರಿನಿಂದ ಬೆಂಗಳೂರಿಗೆ ರೈಲು ಹೊರಡುವ ಸಂದರ್ಭದಲ್ಲಿ ಎರಡನೇ ಪ್ಲಾಟ್ ಫಾರ್ಮ್ ಕಡೆಯಿಂದ ರೈಲಿಗೆ ಅಡ್ಡವಾಗಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಸ್ಕಾಂ ಉಗ್ರಾಣಕ್ಕೆ ನುಗ್ಗಿ ಕಳುವು ಯತ್ನ; ಓರ್ವ ಮಹಿಳೆ ಬಂಧನ
ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಚಂದ್ರಶೇಖರ ಜಿ ನಾಯಕ, ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ವೀರಾರೆಡ್ಡಿ ಎಚ್ ಅವರು ಘಟನಾ ಸ್ಥಳಕ್ಕೆ ತೆರಳಿ, ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.





