ಸಿಂಧನೂರು | ಕಳ್ಳತನ ಪ್ರಕರಣ ; ನಾಲ್ವರಿಗೆ 10 ವರ್ಷ ಜೈಲು ಶಿಕ್ಷೆ

Date:

ಆಂಧ್ರ ಪ್ರದೇಶ ಮೂಲದ ನಾಲ್ವರು ವ್ಯಕ್ತಿಗಳು ಕಳ್ಳತನ ಹಾಗೂ ದರೋಡೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿ ಕಂಡುಬಂದಿದ್ದು, 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ರೂ.1 ಲಕ್ಷ ದಂಡವನ್ನು ವಿಧಿಸಿ ಸಿಂಧನೂರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಆಂಧ್ರಪ್ರದೇಶದ ತೋಟಾ ರಾಮಕೃಷ್ಣಂ ರಾಜು, ಸದ್ದಲ ಕುಮಾರ ರಾಜ, ಆರ್ಧಾಣಿ ಲಕ್ಷ್ಮಣ ಹಾಗೂ ಸುಜಾತ ಶಿಕ್ಷೆಗೊಳಗಾದ ಅಪರಾಧಿಗಳು.

ಘಟನೆಯ ವಿವರ : 2022ರ ನವೆಂಬರ್ 8ರಂದು ಬೆಳಗಿನ ಜಾವ ಆರೋಪಿತರು ಗಾಂಧಿ ನಗರದಲ್ಲಿರುವ ಭಾಸ್ಕರರವರ ಮನೆಗೆ ನುಗ್ಗಿ ದರೋಡೆ ನಡೆಸಿದ್ದರು. ಕಬ್ಬಿಣದ ರಾಡಿನಿಂದ ಬಾಗಿಲು ಒಡೆದು ಒಳನುಗ್ಗಿದ ಆರೋಪಿತರು ಮನೆಯಲ್ಲಿ ಮಲಗಿದ್ದ ಕೃಷ್ಣ ಸಾಯಿ ಮತ್ತು ಧನಲಕ್ಷ್ಮಿ ಇವರನ್ನು ಬೆದರಿಸಿ ಕೀ ಪಡೆದು, ಅಲ್ಮಾರಿಯಿಂದ 218 ಗ್ರಾಂ ಬಂಗಾರ ಕದ್ದೊಯ್ದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಲ್ಲದೆ, ಸಾಕ್ಷಿದಾರರನ್ನು ಟವಲ್‌ನಿಂದ ಕೈಕಟ್ಟಿ ಮತ್ತೊಬ್ಬ ಮಹಿಳೆ ಚಂದ್ರಕಲಾ ಅವರನ್ನು ಹೆದರಿಸಿ, ಮನೆ ಮಾಲೀಕರಾದ ಭಾಸ್ಕರರವರ ಮೇಲೆ ಹಲ್ಲೆ ನಡೆಸಿದ್ದರು. ಶಬ್ದ ಕೇಳಿ ನೆರೆಯವರು ಬಂದುಬಿಟ್ಟುದರಿಂದ ಆರೋಪಿ ಬಳಗ ದರೋಡೆ ಮಾಡಿದ ಆಭರಣಗಳೊಂದಿಗೆ ಪರಾರಿಯಾಗಿತ್ತು.

ತುರುವಿಹಾಳ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು, ಅಂದಿನ ತನಿಖಾಧಿಕಾರಿಗಳಾದ ಚಂದ್ರಪ್ಪ ಪಿ.ಎಸ್.ಐ ಹಾಗೂ ರವಿಕುಮಾರ ಸಿ.ಪಿ.ಐ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಶ್ರೀ ಬಿ.ಬಿ. ಜಕಾತಿ, 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು (ಸಿಂಧನೂರು ಪೀಠಾಸೀನ), ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಗಳು ಅಪರಾಧ ಎಸಗಿದ್ದಾರೆಂದು ಪರಿಗಣಿಸಿ ಶಿಕ್ಷೆ ವಿಧಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈಲಿನಿಂದ ಇಳಿಯುವಾಗ ಬಿದ್ದು : ಕಾರ್ಮಿಕ ಸಾವು

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಆರ್.ಎ. ಗಡಕರಿ ಸಾಕ್ಷಿ ವಿಚಾರಣೆ ನಡೆಸಿದ್ದು, ಮಂಜುನಾಥ್ ಬೇರಿ ವಾದ ಮಂಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...