ಸಿಂಧನೂರು | ದಲಿತ ಮಹಿಳೆಯರ ಬಗ್ಗೆ ಅವಮಾನ ಮಾಡಿದ ಯತ್ನಾಳ – ಶಾಸಕ ಸ್ಥಾನದಿಂದ ವಜಾಗೊಳಿಸಿ ಪ್ರತಿಭಟನೆ

Date:

ಗಂಗಾವತಿ ನಗರದಲ್ಲಿ ಗಣೇಶ ವಿರ್ಸಜನೆಯ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಯತ್ನಾಳ ಸಾರ್ವಜನಿಕವಾಗಿ ದಲಿತ ಮಹಿಳೆಯರ ಬಗ್ಗೆ ಕೀಳಾಗಿ ಮತನಾಡಿ ಅವಮಾನಿಸಿದ್ದಾರೆ ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕೆಂದು ಸಿಂಧನೂರು ಘಟಕದಿಂದ ಸಿಪಿಐ(ಎಂಎಲ್) ಲಿಬರೇಶನ್ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಒತ್ತಾಯಿಸಿದರು.

ನಗರದ ತಹಶೀಲ್ದಾರ ಕಚೇರಿ ಮುಂದೆ ಸಂಘಟನಾಕಾರರು ಪ್ರತಿಭಟನೆ ನಡೆಸಿ ಯತ್ನಾಳ ಹೇಳಿಕೆ ಕಾನೂನು ಬಾಹಿರ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಘೋಷಣೆ ಕೂಗಿ ತಹಶೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್ ಮಾತನಾಡಿ ಹೂ ಹಾಕಲು ಸನಾತನಿ ಧರ್ಮಗಳಾಗಬೇಕು, ಸಾಮಾನ್ಯ ದಲಿತ ಮಹಿಳೆಗೂ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಸಾರ್ವಜನಿಕವಾಗಿ ಅಸ್ಪೃಶ್ಯತೆ ಆಚರಣೆ ಮಾಡಿದ್ದಲ್ಲದೇ, ದಲಿತ ಸಮುದಾಯವನ್ನು ಅವಮಾನಿಸಿ ಜಾತಿ ನಿಂದನೆ ಮಾಡಿದ್ದಾರೆ. ಚುನಾಯಿತ ಪ್ರತಿನಿಧಿಯಾಗಿದ್ದುಕೊಂಡು ಇಂತಹ ಹೇಳಿಕೆ ನೀಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತಿ-ಜಾತಿಗಳ ಹಾಗೂ ಧರ್ಮ-ಧರ್ಮಗಳ ನಡುವೆ ದ್ವೇಷ ಹರಡಿಸುವುದನ್ನೇ ಕೆಲಸವನ್ನಾಗಿ ಮಾಡಿಕೊಂಡಿರುವ ಬಸನಗೌಡ ಯತ್ನಾಳ ಕಳೆದ ಎರಡ್ಮೂರು ತಿಂಗಳಲ್ಲಿ ಹತ್ತಾರು ಕಡೆ ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕದಡಿದಲ್ಲದೇ ಅಶಾಂತಿಗೆ ಕಾರಣನಾಗಿದ್ದಾನೆ. ಇಷ್ಟಾದರೂ ಈತನ ಮೇಲೆ ಯಾವುದೇ ಕಾನೂನು ಕ್ರಮ ಆಗದೇ ಇರುವುದು ಸರ್ಕಾರ, ಅಧಿಕಾರಿಗಳು ಹಾಗೂ ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರಿಗೆ ಅನುಮಾನ ಮೂಡುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ ಮಾತನಾಡಿ, ದಲಿತ ಮಹಿಳೆಯರನ್ನು ಜಾತಿಯ ಕಾರಣಕ್ಕೆ ನಿಂದಿಸಿ ನಂತರ ತಕ್ಷಣ ಕೋರ್ಟ್ ಮೊರೆ ಹೋಗಿ ಬಲವಂತದ ಕ್ರಮ ಜರುಗಿಸದಂತೆ ತಡೆಯಾಜ್ಞೆ ತಂದಿರುವುದು ನೋಡಿದರೆ ಈತನ ದ್ವೇಷ ಭಾಷಣಕ್ಕೆ ತಡೆಯೇ ಇಲ್ಲದಂತಾಗಿದೆ. ಸಂವಿಧಾನದ ಅಡಿಯಲ್ಲಿ ಆಯ್ಕೆಯಾಗಿ ಮತ್ತು ಅದರಡಿಯಲ್ಲಿ ರಚನೆಯಾಗಿರುವ ಕಾನೂನನ್ನೇ ಉಲ್ಲಂಘಿಸಿರುವ ಇವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ರಾಜ್ಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ವಿರುಪಮ್ಮ ಉದ್ಬಾಳ ಜೆ. ಮಾತನಾಡಿ, ಮನುವಾದಿ ಬಸನಗೌಡ ಯತ್ನಾಳ ಕಾನೂನು ಬಾಹಿರವಾಗಿ ಮನಬಂದಂತೆ ಮಾತನಾಡಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷಗಳಾದರೂ ಇಂದಿಗೂ ಅಸ್ಪೃಶ್ಯತೆ ಆಚರಣೆ ನಿಂತಿಲ್ಲ ಎನ್ನುವುದಕ್ಕೆ ಇದೊಂದು ಜ್ವಲಂತ ಸಾಕ್ಷಿಯಾಗಿದೆ. ಸದನದಲ್ಲಿ ಕಾನೂನು ರಚಿಸುವವರೇ, ಬಹಿರಂಗವಾಗಿ ಅಸ್ಪೃಶ್ಯತೆ ಆಚರಣೆ ಮಾಡಿದರೆ ಹೇಗೆ ? ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯಲಗಟ್ಟ ಮತ್ತು ಪಲಕನಮರಡಿ ಗ್ರಾಮಗಳ ಅಭಿವೃದ್ಧಿಗೆ ಕೆಪಿಆರ್ ಎಸ್ ಆಗ್ರಹ

ಈ ಸಂದರ್ಭದಲ್ಲಿ ಡಿಎಸ್‌ಎಸ್ ಸಂಚಾಲಕ ಮಂಜುನಾಥ ಗಾಂಧಿನಗರ, ಸಿಪಿಐ(ಎಂಎಲ್) ಲಿಬರೇಶನ್‌ನ ಆರಎಚ್.ಕಲಮಂಗಿ, ಯಮನೂರಪ್ಪ, ಹುಸೇನಪ್ಪ ಅರಳಹಳ್ಳಿ, ಬಸವರಾಜ, ದೇವಪ್ಪ ಅರಳಹಳ್ಳಿ, ರಮೇಶ ಅರಳಹಳ್ಳಿ, ಮಹಿಳಾ ಮುಖಂಡರಾದ ಇಂದ್ರಮ್ಮ, ಶಾಂಭವಿ ಸೇರಿದಂತೆ ಇನ್ನಿತರರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...