ರಾಜಕೀಯ ಅಜೆಂಡಾ ಬೇಯಿಸಿಕೊಳ್ಳಲು ವಿದ್ಯಾರ್ಥಿಗಳ ದುರುಪಯೋಗ ಆಘಾತಕಾರಿ: ಎಸ್‌ಐಓ ದಕ್ಷಿಣ ಕನ್ನಡ ಖಂಡನೆ

Date:

ಮಂಗಳೂರಿನ ಸೈಂಟ್ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಯನ್ನು ರಾಜಕೀಯಗೊಳಿಸಿ ಅಮಾಯಕ ಮಕ್ಕಳನ್ನು ನಾಚಿಕೆಗೇಡಿತನದಿಂದ ಕೋಮುದ್ವೇಷಕ್ಕೆ ಬಳಸಿಕೊಳ್ಳುತ್ತಿರುವ ಶಾಸಕ ವೇದವ್ಯಾಸ್ ಕಾಮತ್ ಅವರ ಕ್ರಮವನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(SIO) ದಕ್ಷಿಣ ಕನ್ನಡ ಜಿಲ್ಲೆ ಖಂಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವಿದ್ಯಾರ್ಥಿ ಸಂಘಟನೆ, “ಮಂಗಳೂರಿನ ಸೈಂಟ್ ಜೆರೋಸಾ ಶಾಲೆಯ ಶಿಕ್ಷಕಿ, ಹಿಂದೂ ಧರ್ಮವನ್ನು ಅವಮಾನಿಸಿದ ಆರೋಪಗಳು ಕೇಳಿಬಂದಿದೆ. ಈ ಸಮಸ್ಯೆಯನ್ನು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ಸರಿಯಾದ ಮಾರ್ಗಗಳ ಮೂಲಕ ಪರಿಹರಿಸಬೇಕಾಗಿತ್ತು. ಅದನ್ನು ಬಿಟ್ಟು ಶಾಸಕ ವೇದವ್ಯಾಸ್ ಕಾಮತ್ ಅವರು ಶಾಲೆಗೆ ಮುತ್ತಿಗೆ ಹಾಕಿ ಧರಣಿ ನಡೆಸಿರುವುದು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿದೆ” ಎಂದು ಹೇಳಿದೆ.

sio

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಸಕ ವೇದವ್ಯಾಸ್ ಕಾಮತ್ ಅವರು ತಮ್ಮ ರಾಜಕೀಯ ಅಜೆಂಡಾವನ್ನು ಬೇಯಿಸಿಕೊಳ್ಳಲು ಅಮಾಯಕ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳನ್ನು ಉಪಯೋಗಿಸಿರುವುದು ಆಘಾತಕಾರಿಯಾಗಿದೆ. ರಾಜಕೀಯ ಆಟದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು ಅನೈತಿಕ ಮಾತ್ರವಲ್ಲ ಖಂಡನೀಯ. ಶಾಲೆಗಳು ಕಲಿಕೆ ಮತ್ತು ಬೆಳವಣಿಗೆಗೆ ಸುರಕ್ಷಿತ ಸ್ಥಳವಾಗಿರಬೇಕೇ ಹೊರತು, ರಾಜಕೀಯ ಪ್ರಚಾರಕ್ಕಾಗಿ ಯುದ್ಧಭೂಮಿಗಳಲ್ಲ” ಎಂದು ಎಸ್‌ಐಓ ತಿಳಿಸಿದೆ.

ಇದಲ್ಲದೆ, ಕಾಮತ್ ಅವರ ವರ್ತನೆಯು ಜವಾಬ್ದಾರಿಯ ಕೊರತೆಯನ್ನು ಪ್ರದರ್ಶಿಸುತ್ತದೆ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಡೆಗಣಿಸುತ್ತದೆ. ಶಾಸಕ ವೇದವ್ಯಾಸ್ ಕಾಮತ್ ಅವರು ತಮ್ಮ ವಿಭಜಕ ವರ್ತನೆಯನ್ನು ತಕ್ಷಣವೇ ನಿಲ್ಲಿಸಿ ಏಕತೆ ಮತ್ತು ಸೌಹಾರ್ದತೆಯ ತತ್ವಗಳನ್ನು ಎತ್ತಿ ಹಿಡಿಯಬೇಕು ಎಂದು ಎಸ್‌ಐಒ ಕರೆ ನೀಡಿದೆ.

ಇದನ್ನು ಓದಿದ್ದೀರಾ? ಬಜೆಟ್ ಅಧಿವೇಶನ | ಪರಶುರಾಮ ಮೂರ್ತಿ ಹಗರಣದ ನಿಜವಾದ ಕಳ್ಳರನ್ನು ಪತ್ತೆ ಹಚ್ಚುತ್ತೇವೆ: ಸಚಿವ ತಂಗಡಗಿ

ಸೂಕ್ಷ್ಮ ವಿಷಯಗಳನ್ನು ರಾಜಕೀಯಗೊಳಿಸುವುದು ಮತ್ತು ರಾಜಕೀಯ ಲಾಭಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳುವುದು ಸ್ವೀಕಾರಾರ್ಹವಲ್ಲ ಮತ್ತು ಪ್ರಜಾಪ್ರಭುತ್ವ ಸಮಾಜದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದಿರುವ ಎಸ್‌ಐಓ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಶಾಸಕ ವೇದವ್ಯಾಸ್ ಕಾಮತ್ ಅವರ ಬೇಜವಾಬ್ದಾರಿ ವರ್ತನೆಯ ವಿರುದ್ಧ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಕೂಡಲೇ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡಬೇಕೆಂದು ಒತ್ತಾಯಿಸಿದೆ. ಎಲ್ಲರೂ ಶಾಂತಿ ಮತ್ತು ಪರಸ್ಪರ ಗೌರವದಿಂದ ಬದುಕುವ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...