ಶಿರಾ ಗೇಟ್ ರಸ್ತೆ ಸಂಚಾರಕ್ಕೆ ಮುಕ್ತ : ಸಚಿವ ಪರಮೇಶ್ವರ

Date:

ಕಳೆದೈದು ತಿಂಗಳಿಂದ ಬಂದ್ ಮಾಡಲಾಗಿದ್ದ ನಗರದ ಶಿರಾ ಗೇಟ್ ರಸ್ತೆಯನ್ನು ಇಂದಿನಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ತುಮಕೂರು ನಗರದ ಎಸ್.ಮಾಲ್ ಬಳಿ ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು 6.65 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪುನರ್ ನಿರ್ಮಿಸಿರುವ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಅಮಾನಿಕೆರೆ ಕೋಡಿ ನೀರು ಹರಿಯುವ ರಾಷ್ಟ್ರೀಯ ಹೆದ್ದಾರಿ 4ರ ಸೇತುವೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಸಾವುಗಳು ಸಂಭವಿಸುತ್ತಲೇ ಇದ್ದವು. ಕಿರಿದಾಗಿದ್ದ ಈ ಸೇತುವೆಯನ್ನು ಅಗಲೀಕರಣಗೊಳಿಸಿ, ಹೊಸ ಸೇತುವೆಯನ್ನು ನಿರ್ಮಿಸಬೇಕೆಂದು ಈ ಭಾಗದ ಜನರು, ಜನಪ್ರತಿನಿಧಿಗಳಿಂದ ಬಹು ದಿನಗಳ ಬೇಡಿಕೆಯಿತ್ತು. ರಾಜ್ಯದ 15 ಜಿಲ್ಲೆ ಸೇರಿ ಜಿಲ್ಲೆಯ ಪಾವಗಡ, ಕೊರಟಗೆರೆ, ಶಿರಾ, ಮಧುಗಿರಿ ಭಾಗಕ್ಕೆ ಇದೇ ರಸ್ತೆಯಿಂದ ತೆರಳಬೇಕಿತ್ತು. ರಸ್ತೆ ಕಾಮಗಾರಿ ಕೈಗೊಂಡ ನಂತರ ವಾಹನಗಳು ಬಳಸಿಕೊಂಡು ಹನುಮಂತಪುರ ಮೂಲಕ ಸಾಗಬೇಕಿತ್ತು. ಈಗ ಸೇತುವೆ ಅಗಲೀಕರಣ ಕಾಮಗಾರಿ ಪೂರ್ಣಗೊಂಡಿರುವುದರಿಂದ ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ಹೇಳಿದರು.

ಗುಬ್ಬಿ ರಸ್ತೆಯಲ್ಲಿರುವ ಭೀಮಸಂದ್ರದ ಸೇತುವೆಯನ್ನೂ ಸಹ ಅಗಲೀಕರಣಗೊಳಿಸುವ ಕಾಮಗಾರಿಯನ್ನು ಸದ್ಯದಲ್ಲೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡವರ ಏಳಿಗೆಗಾಗಿ ಗ್ಯಾರಂಟಿ ಯೋಜನೆ :
ಬಡವರು ಬಡವರಾಗಿಯೇ ಉಳಿಯಬಾರದೆಂಬ ಉದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಯಾವುದೇ ರಾಜಕಾರಣವಿಲ್ಲ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿವೆ ಎಂಬ ಟೀಕೆಗಳು ಬರುತ್ತಲೇ ಇವೆ. ಇತ್ತೀಚೆಗಷ್ಟೇ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಚಾಲನೆ ನೀಡಿದ ಎತ್ತಿನಹೊಳೆ ಮೊದಲ ಹಂತದ ಯೋಜನೆಯು ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಿಡಿದ ಕೈಗನ್ನಡಿಯಾಗಿದೆ. ಯಾವುದೇ ಕಾರಣಕ್ಕು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತುಮಕೂರಿಗೆ ಮೆಟ್ರೋ ರೈಲು ಸಂಚಾರ ಸೌಲಭ್ಯವನ್ನು ತರುವ ನಿಟ್ಟಿನಲ್ಲಿ ವಿಸ್ತೃತ ವರದಿಯನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ನೀಡಲಾಗುವುದೆಂದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ ವಸಂತನರಸಾಪುರದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದ ನಂತರ ಎಸ್ ಮಾಲ್ ಬಳಿಯಿರುವ ಈ ಸೇತುವೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಈ ಸೇತುವೆ ಪುನರ್ ನಿರ್ಮಾಣದಿಂದ ಸಂಚಾರ ದಟ್ಟಣೆ ಕಡಿಮೆಯಾಗಿ ಸುಗಮ ಸಂಚಾರಕ್ಕೆ ಅನುವಾಲಿದೆ ಎಂದರಲ್ಲದೆ ನಿಗಧಿತ ಅವಧಿಯೊಳಗೆ ಗುಣಮಟ್ಟದ ಸೇತುವೆ ನಿರ್ಮಾಣ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ನಾರಾಯಣಪ್ಪ ಅವರನ್ನು ಅಭಿನಂದಿಸಿದರು.


ಶಾಸಕ ಬಿ. ಸುರೇಶ್‌ಗೌಡ ಮಾತನಾಡಿ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ನಾನೆಂದಿಗೂ ರಾಜಕಾರಣ ಮಾಡುವುದಿಲ್ಲ. ವೇಗವಾಗಿ ಬೆಳೆಯುತ್ತಿರುವ ತುಮಕೂರು ನಗರವನ್ನು ಎಕನಾಮಿಕ್ ಹಬ್ ಆಗಿ ಅಭಿವೃದ್ಧಿಗೊಳಿಸಬೇಕು. ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಹೊಸ-ಹೊಸ ಕೈಗಾರಿಕೆಗಳನ್ನು ಸೆಳೆಯಬೇಕು. ನೂತನ ವಿಶ್ವವಿದ್ಯಾಲಯವನ್ನು ಶೀಘ್ರವಾಗಿ ಉದ್ಘಾಟಿಸಬೇಕು. ವಾಯುವಿಹಾರ ಮಾಡುವವರಿಗೆ ಅಮಾನಿಕೆರೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕೆಂದು ಸಚಿವರಿಗೆ ಮನವಿ ಮಾಡಿದರಲ್ಲದೆ ಮುಂದಿನ 3.5 ವರ್ಷದೊಳಗೆ ಮೆಟ್ರೋ ರೈಲು ನಗರಕ್ಕೆ ಬರಬೇಕೆಂಬ ಆಶಯ ವ್ಯಕ್ತಪಡಿಸಿದರು.

ಅಧ್ಯಕ್ಷತೆವಹಿಸಿ ಮಾತನಾಡಿದ ಜಿ.ಬಿ. ಜ್ಯೋತಿಗಣೇಶ್ ಸೇತುವೆ ಪುನರ್ ನಿರ್ಮಾಣ ಕೈಗೊಂಡ ನಂತರ ಸ್ಥಳೀಯರಿಂದ ಪ್ರತೀದಿನ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಒತ್ತಡಗಳು ಬರುತ್ತಲೇ ಇದ್ದವು. ಇಂದಿನಿಂದ ಸೇತುವೆಯು ವಾಹನ ಸಂಚಾರಕ್ಕೆ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದೆ. ನಗರದ ಕುಡಿಯವ ನೀರು ಹಾಗೂ ಒಳಚರಂಡಿ ವ್ಯವಸ್ಥೆಗಾಗಿ 100 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನದ ಅಗತ್ಯವಿದ್ದು, ಅಗತ್ಯ ಅನುದಾನ ಒದಗಿಸುವಲ್ಲಿ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಹುಲಿ ನಾಯ್ಕರ್, ಮಾಜಿ ಸಚಿವ ರೇವಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಮಂಜಪ್ಪ, ಅಧೀಕ್ಷಕ ಇಂಜಿನಿಯರ್ ಜಿ.ಸಿ. ಜಗಧೀಶ್, ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್, ಅಪರ ಜಿಲ್ಲಾಧಿಕಾರಿ ಡಾ: ತಿಪ್ಪೇಸ್ವಾಮಿ, ಹಿರಿಯ ಪತ್ರಕರ್ತ ಎಸ್.ನಾಗಣ್ಣ, ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...