ಶಿರಾ | ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಕಿನ್ನರಿ ಕಲಾವಿದ ಸಿದ್ದಪ್ಪ ಆಯ್ಕೆ

Date:

ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ (ಹಂದಿ ಜೋಗಿ ಕಾಲೋನಿ) ಗ್ರಾಮದ ಕಿನ್ನರಿ ಕಲಾವಿದ ಸಿದ್ದಪ್ಪ ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿರಾ ಸೀಮೆ ಜಾನಪದ ಸೊಗಡಿನ ತವರೂರು ಶಿರಾ ತಾಲ್ಲೂಕು, ಗೌಡಗೆರೆ ಹೋಬಳಿ, ಜೋಗೀರಹಟ್ಟಿ ಗ್ರಾಮದಲ್ಲಿ ವಾಸವಾಗಿರುವ ಶೆಟ್ಟಿಯಪ್ಪ ರವರ ಮಗನಾದ ಸುಮಾರು 65 ವರ್ಷದ ಸಿದ್ದಪ್ಪ ಅವರು ಸುಮಾರು 40 ವರ್ಷಗಳಿಂದ ಜಾನಪದ ಕಲೆಯಾದ ಜೋಗಿಪದಗಳಾದ ಅರ್ಜುನ್ ಜೋಗಿ ಹಾಡು, ಪಾಂಡವರ 12 ವರ್ಷಗಳ ವನವಾಸದ ಹಾಡು, ಮತ್ತು ಅರಗಿನ ಪರ್ವ ಜನಪದಗಳನ್ನು  ಹಾಡಿಕೊಂಡು ಬಂದಿದ್ದಾರೆ. ಹಂದಿಜೋಗಿ ವಂಶಸ್ಥರಾದ ಸಿದ್ದಪ್ಪ ಅವರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ಗ್ರಾಮಗಳಲ್ಲಿ ಮತ್ತು ಬೇರೆ ಬೇರೆ ಪ್ರಾಂತ್ಯಗಳಲ್ಲಿಯೂ ಸಹ ಜನಪದ ಕಲೆಯನ್ನು ವಿಸ್ತರಿಸುತ್ತಿದ್ದು ಇವರು ಹೋದ ಕಡೆಗಳಲ್ಲಿ ನೆಲೆಯಿಲ್ಲದೆ ಗುಡುಸಲು ಮತ್ತು ಮರದಡಿಗಳಲ್ಲಿ ವಾಸವಿದ್ದುಕೊಂಡು ಈ ಗೀತೆಗಳನ್ನು ಹಳ್ಳಿಯಿಂದ ಹಳ್ಳಿಗೆ ಹಾಡಿಕೊಂಡು ಜನಪದ ಸಂಸ್ಕೃತಿ  ಬೆಳಸಿಕೊಂಡು ಬಂದಿದ್ದಾರೆ. 

1001120057

ಹುಳಿಯಾರು, ಗುಬ್ಬಿ, ನಿಟ್ಟೂರು, ಬಾಣಸಂದ್ರ ಚಿಕ್ಕನಾಯಕನಹಳ್ಳಿ ಬೆಳ್ಳಾರ, ಕೆ.ಬಿ.ಕ್ರಾಸ್ ಬುಕ್ಕಾಪಟ್ಟಣ ,ಹಾಗಲವಾಡಿ ,ಕುರುಬರಹಳ್ಳಿ ಇನ್ನು ಬೇರೆ ಊರುಗಳಲ್ಲಿ ತಿರುಗಾಟ ನಡೆಸಿ   ಇವರು ಜಾನಪದ ಗೀತೆಗಳನ್ನು ಹಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡನಾಡಿನ ಸಾಂಸ್ಕೃತಿಕ  ಪರಂಪರೆಯ ಜಾನಪದ ಕಲೆಯ ಜೋಗಿ ಪದಗಳನ್ನು ಹಳ್ಳಿ ಹಳ್ಳಿಗಳಲ್ಲಿ ಮನೆಯ ಮುಂದೆ ಹಾಡುವ ಮೂಲಕ ಈ ಕಲಿಯನ್ನು ಉಳಿಸಿ ಬೆಳೆಸುತ್ತಿರುವ ತಾವರೆಕೆರೆ ಗ್ರಾಮದ ಸ್ವಲ್ಪ ದೂರದಲ್ಲಿರುವ ಹಂದಿ ಜೋಗಿಗಳ ಕುಟೀರಗಳಲ್ಲಿ ವಾಸ ಮಾಡುತ್ತಿರುವ ಜಾನಪದ ಕಲಾವಿದ ಸಿದ್ದಪ್ಪನವರಿಗೆ ರಾಮಾಯಣ, ಮಹಾಭಾರತದ ಸನ್ನಿವೇಶಗಳನ್ನು ತಮ್ಮ ಹಾಡುಗಳ ಮೂಲಕ ಹಾಡುವ ಕಲೆಯನ್ನು ಈ ಕುಟುಂಬಗಳು ಕಳೆದ ಐದು ದಶಕಗಳಿಂದ ಮಾಡುತ್ತಾ ಬಂದಿವೆ. ಇಂತಹ ಜಾನಪದ ಕಲೆಯನ್ನು ಉಳಿಸಿ ಪ್ರೋತ್ಸಾಹಿಸಲು 2023- 24ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ 

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸಿದ್ದಪ್ಪನವರಿಗೆ ಪ್ರಶಸ್ತಿ ನೀಡಿ ಗೌರವಿದೆ. ಪ್ರಶಸ್ತಿ ಜೊತೆಗೆ 25. ಸಾವಿರ ರೂಪಾಯಿ ಗೌರವಧನ ಸಿಗಲಿದೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...