ಕೋಲಾರ | ಸಮಗ್ರ ಕೃಷಿಯಿಂದ ದೇಶಕ್ಕೆ ಮಾದರಿಯಾಗೋಣ

Date:

ಸಿರಿಧಾನ್ಯ ಮೇಳದಲ್ಲಿ ವಿಪ ಸದಸ್ಯ ಇಂಚರ ಗೋವಿಂದರಾಜು ಹೇಳಿಕೆ

ರೈತರ ಜಿಲ್ಲೆ ಎಂದೇ ಕೋಲಾರ ಪ್ರಸಿದ್ಧಿ ಪಡೆದಿದೆ. ಸಮಗ್ರ ಕೃಷಿ ಮೂಲಕ ವಿವಿಧ ರೀತಿಯ ಬೆಳೆ ಬೆಳೆದು ದೇಶಕ್ಕೆ ಮಾದರಿಯಾಗಬೇಕು‌ ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಹೇಳಿದರು.

ಕೋಲಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ, ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ–2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ. ಹೀಗಾಗಿ, ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ಧತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ಸರ್ಕಾರವು ಕೂಡ ರೈತರಿಗೆ ಉತ್ತೇಜನ ನೀಡಿ ಸಾವಯವ ಗೊಬ್ಬರ ಬಳಸಿಕೊಂಡು ಉತ್ತಮ ಇಳುವರಿಯ ಬೆಳೆ ಹಾಗೂ ಸಿರಿಧಾನ್ಯಗಳನ್ನು ಬೆಳೆಯುವಂತೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಇದರಿಂದ ನಮಗೆ, ಮಕ್ಕಳಿಗೆ ಒಳ್ಳೆಯ ಪೌಷ್ಠಿಕಾಂಶ ಹಾಗೂ ಗುಣಮಟ್ಟದ ಆಹಾರ ಸಿಕ್ಕಂತಾಗುತ್ತದೆ ಎಂದು ಹೇಳಿದರು.

ರೈತರಿಗೆ ಸರ್ಕಾರದಿಂದ ಬರುವಂತಹ ಯೋಜನೆಗಳು ಮತ್ತು ಕೃಷಿ ಪರಿಕರಗಳು, ಹೊಸ ಬೆಳೆಗಳ ಆವಿಷ್ಕಾರ ಹಾಗೂ ಬೆಳೆಗಳಿಗೆ ಬರುವಂತಹ ರೋಗಗಳ ಕುರಿತು ಮುನ್ನೆಚ್ಚರಿಕೆಯನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಈ ಸಂದರ್ಭದಲ್ಲಿ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ರೈತರಿಗೆ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮೇಳದಲ್ಲಿ ರೈತರಿಗೆ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೃಷಿ ಇಲಾಖೆಯಿಂದ ನೀಡಲಾಯಿತು. ವಿವಿಧ ತಳಿಯ ಕೃಷಿ ಉತ್ಪನ್ನಗಳು, ಪರಿಕರಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಮರಳಿನಲ್ಲಿ ಮಾಜಿ ಪ್ರಧಾನಿ ದಿವಂಗತ ಮನಮೋಹನ್‌ ಸಿಂಗ್ ಅವರ ಕಲಾಕೃತಿ ಎಲ್ಲರ ಗಮನ ಸೆಳೆಯಿತು.

ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ:
ಜಿಲ್ಲಾಮಟ್ಟದ ಪ್ರಶಸ್ತಿ ವಿಜೇತರು: ಎಸ್‌.ಎಂ.ಮಂಜುಳಾ (ಸುಗಟೂರು), ಎನ್‌.ಗಣೇಶ್‌ (ಬಂಟಹಳ್ಳಿ), ಎಂ.ನಾರಾಯಣಸ್ವಾಮಿ (ಹುಣಸನಹಳ್ಳಿ), ಕೆ.ಆರ್.ಜಗದೀಶ್‌ (ಕುರುಮಾಕಲಪಲ್ಲಿ), ಆರ್‌.ವಿ.ಶ್ರೀನಿವಾಸ (ಬೈಕೊತ್ತೂರು), ಎಂ.ತಿಪ್ಪಣ್ಣ (ಹುತ್ತೂರು), ಹನುಮೇಗೌಡ (ಲಕ್ಷ್ಮಿಸಾಗರ), ನಂದೀಶ್‌ (ದೆಬ್ಬನಹಳ್ಳಿ), ವೆಂಕಟೇಶಪ್ಪ (ಬನಹಳ್ಳಿ), ಮಂಜುನಾಥ್‌ (ಕಾಕಿನತ್ತ).
ತಾಲ್ಲೂಕುಮಟ್ಟದ ಪ್ರಶಸ್ತಿ ವಿಜೇತರು: ನಾಗರಾಜು (ಕೆಂಬೋಡಿ), ಸುಂದರಪ್ಪ (ಸೋಮಸಂದ್ರ), ರುಕ್ಕಮ್ಮ (ಖಾಜಿಕಲ್ಲಹಳ್ಳಿ), ಪಾಲಾಕ್ಷಗೌಡ (ವಕ್ಕಲೇರಿ), ಸರೋಜಮ್ಮ (ನಂದಂಬಳ್ಳಿ), ಎಂ.ವಿ.ಶ್ರೀನಿವಾಸ್‌ (ಮಿಟ್ಟಿಗಾನಹಳ್ಳಿ), ಅಶೋಕ್‌ ಗೌಡ (ದಿನ್ನಹಳ್ಳಿ), ವಿಜಯ್‌ ಕುಮಾರ್‌ (ಮಾದಾಪುರ), ಗುಟ್ಟಪ್ಪ (ಮಾದಮಂಗಲ), ಶ್ರೀನಿವಾಸ್‌ (ಕುಪ್ಪೂರು), ಹನುಮಪ್ಪ (ಮಾವಹಳ್ಳಿ), ಮುನಿಸ್ವಾಮಿ (ಸಿದ್ದಾರೆಡ್ಡಿದಿನ್ನೆ), ವಿ.ಲಕ್ಷ್ಮಿ (ಬೋಡೇನಹಳ್ಳಿ), ಸುಬ್ರಮಣಿ (ಕಾವರನಹಳ್ಳಿ), ಮಂಜುಳಾ (ತೊಪ್ಪನಹಳ್ಳಿ), ನಾರಾಯಣಪ್ಪ(ಪೆರಮಾಕನಹಳ್ಳಿ) ಸುಶೀಲಮ್ಮ (ಮೋಪುರಹಳ್ಳಿ), ವೆಂಕಟರಾಮೇಗೌಡ (ಪಿಚ್ಚಗುಂಟ್ಲಹಳ್ಳಿ), ಗೋಪಾಲಕೃಷ್ಣಪ್ಪ (ಕುಪ್ಪಂಪಾಳ್ಯ), ಮುನಿವೆಂಕಟಪ್ಪ (ನಲ್ಲಾಂಹಡಹಳ್ಳಿ), ಶಿವಕುಮಾರ್‌ (ಚಲ್ದಿಗಾನಹಳ್ಳಿ), ಈಶ್ವರಪ್ಪ (ಗುಂದೇಡು), ಜಯರಾಮರೆಡ್ಡಿ (ನೆಲವಂಕಿ), ಕೆ.ಎಸ್‌.ಮಂಜುನಾಥ್ (ಕದಿರಂಪಲ್ಲಿ), ಮಲ್ಲಮ್ಮ (ಬಸವನಪಲ್ಲಿ).

ಇದನ್ನೂ ಓದಿ : ಕೋಲಾರ ಜಿಲ್ಲೆಯ ಇಬ್ಬರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ; ಸನ್ಮಾನ

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ವಡಗೂರು ಡಿ.ಎಲ್.ನಾಗರಾಜ್, ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಎಂ.ಮಂಗಳಾ, ಜಂಟಿ ಕೃಷಿ ನಿರ್ದೇಶಕಿ ಸುಮಾ ಎಂ.ಆರ್., ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಸ್.ಆರ್ ಕುಮಾರಸ್ವಾಮಿ, ಕೃಷಿ ಉಪನಿರ್ದೇಶಕಿ ಭವ್ಯರಾಣಿ, ರೇಷ್ಮೆ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...