ಶಿರಸಿ | ಕೂಲಿ ಮಾಡಿದ ಹಣ ಕೊಡದೆ ಇದ್ದಿದ್ದಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Date:

ಕೂಲಿ ಹಣದ ವಿಚಾರದಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನನ್ನು ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಿದ ಘಟನೆ ಶಿರಸಿ ತಾಲೂಕಿನ ಸೊಂದಾ ಗ್ರಾಮದ ಕಮಾಟಗೇರಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತಪಟ್ಟ ವ್ಯಕ್ತಿಯನ್ನು ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಎಂದು ಗುರುತಿಸಲಾಗಿದೆ. ಮಂಜುನಾಥ ಬಸ್ಯಾ ಚನ್ನಯ್ಯ ಕೊಲೆ ಮಾಡಿದ ಆರೋಪಿ

ಮೃತ ರವೀಶ ಗ್ರಾಮದಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡಿಕೊಂಡಿದ್ದು, ತೋಟ ಮತ್ತು ಗದ್ದೆ ಮಾಲೀಕರಿಂದ ಕೂಲಿ ಪಡೆದು, ತಮ್ಮೊಂದಿಗೆ ಕೆಲಸ ಮಾಡುವ ಇತರ ಕಾರ್ಮಿಕರಿಗೆ ಹಣ ನೀಡುತ್ತಿದ್ದ. ಆರೋಪಿ ಮಂಜುನಾಥ ಕೂಡ ರವೀಶರೊಂದಿಗೆ ಕೆಲಸ ಮಾಡುತ್ತಿದ್ದನು. ಕಳೆದ ಹಲವು ದಿನಗಳಿಂದ ಮಂಜುನಾಥ ತನ್ನ ಕೂಲಿ ಹಣವನ್ನು ಕೊಡುವಂತೆ ರವೀಶನ ಮನೆಯ ಬಳಿ ಬಂದು ಗಲಾಟೆ ಮಾಡುತ್ತಿದ್ದನು. ರವೀಶನ ಪತ್ನಿ ಚೇತನಾ ಹಲವು ಬಾರಿ ಸಮಾಧಾನ ಮಾಡಿ ಕಳುಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ರಾತ್ರಿ 8:15 ರಿಂದ ಶುಕ್ರವಾರ ಬೆಳಗಿನ ಜಾವ 6:30ರ ನಡುವಿನ ಅವಧಿಯಲ್ಲಿ, ಆರೋಪಿ ಮಂಜುನಾಥನ ಮನೆಯಂಗಳದಲ್ಲಿ ಕೂಲಿ ಹಣದ ವಿಷಯವಾಗಿ ರವೀಶ ಮತ್ತು ಮಂಜುನಾಥನ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಮಂಜುನಾಥ, ಯಾವುದೋ ಹರಿತವಾದ ಆಯುಧದಿಂದ ರವೀಶನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದಾಗಿ ರವೀಶ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಉತ್ತರ ಕನ್ನಡ | ದೌರ್ಜನ್ಯಗಳಿಂದ ನೊಂದ ಮಹಿಳೆಯರಿಗೆ ನೆರವಾಗಲು ಶೀಘ್ರದಲ್ಲೇ ಹೆಚ್ಚುವರಿ ಸಖಿ ಕೇಂದ್ರ

ಶುಕ್ರವಾರ ಬೆಳಿಗ್ಗೆ ರವೀಶನ ಪತ್ನಿ ಚೇತನಾ ಈ ಘಟನೆಯನ್ನು ಗಮನಿಸಿದ್ದು, ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಪತಿಯ ಕೊಲೆಗೆ ಮಂಜುನಾಥನೇ ಕಾರಣವೆಂದು ಆರೋಪಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣದ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಣ್ಣ ಕೂಲಿ ಹಣದ ವಿವಾದಕ್ಕಾಗಿ ನಡೆದ ಈ ದುರ್ಘಟನೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...