ಶಿರಸಿ | ವಸತಿ ಕಟ್ಟಡಕ್ಕೆ ಮಸೀದಿ ಹಣೆಪಟ್ಟಿ ಹಚ್ಚಿ ಅಶಾಂತಿ ಸೃಷ್ಟಿಸುವ ಯತ್ನ; ಬಿಜೆಪಿ ಮುಖಂಡರ ವಿರುದ್ಧ ಡಿವೈಎಸ್‌ಪಿಗೆ ದೂರು

Date:

ಶಿರಸಿ: ನಗರದ ಕಸ್ತೂರಿಬನಗರದಲ್ಲಿರುವ ಖಾಸಗಿ ವಸತಿ ಕಟ್ಟಡವೊಂದರ ಕುರಿತು ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಹರಡಿ, ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಶಿರಸಿ ತಾಲ್ಲೂಕು ಘಟಕವು ಇಂದು ಡಿವೈಎಸ್‌ಪಿ ಅವರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

ಕಸ್ತೂರಿಬನಗರದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡವು ಒಬ್ಬ ವ್ಯಕ್ತಿಗೆ ಸೇರಿದ ವಸತಿ ಗೃಹವಾಗಿದೆ. ಆದರೆ, ಬಿಜೆಪಿ ಮಂಡಲ ಅಧ್ಯಕ್ಷ ಆನಂದ್ ಸಾಲೇರಾ, ನಂದನ್ ಸಾಗರ್ ಹಾಗೂ ಹಿಂದೂ ಜಾಗರಣ ವೇದಿಕೆಯ ಕೆಲ ಸದಸ್ಯರು ಇದನ್ನು ‘ಮಸೀದಿ ನಿರ್ಮಾಣ’ ಎಂದು ಸುಳ್ಳು ಬಿಂಬಿಸುತ್ತಿದ್ದಾರೆ. ಯಾವುದೇ ಆಧಾರವಿಲ್ಲದೆ ಧಾರ್ಮಿಕ ಕಟ್ಟಡ ಎಂದು ಸುಳ್ಳು ಸುದ್ದಿ ಹರಡುವ ಮೂಲಕ ಶಾಂತಿಯುತವಾಗಿದ್ದ ಶಿರಸಿಯಲ್ಲಿ ಅಶಾಂತಿ ಸೃಷ್ಟಿಸಲು ಇವರು ವ್ಯವಸ್ಥಿತ ಸಂಚು ರೂಪಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಮುಖಂಡರು ಆರೋಪಿಸಿದ್ದಾರೆ.

ಕೇವಲ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವುದು ಮಾತ್ರವಲ್ಲದೆ, ಈ ಗುಂಪು ಶಿರಸಿಯ ಸಹಾಯಕ ಆಯುಕ್ತರು (AC) ಮತ್ತು ತಹಶೀಲ್ದಾರರ ಮೇಲೆ ಅನಗತ್ಯ ಒತ್ತಡ ಹೇರುತ್ತಿದೆ. ಅಧಿಕಾರಿಗಳಿಗೆ ಬೆದರಿಕೆ ಹಾಕುವ ಮೂಲಕ ಕಾನೂನುಬದ್ಧವಾಗಿ ನಡೆಯುತ್ತಿರುವ ಖಾಸಗಿ ಕಾಮಗಾರಿಯನ್ನು ತಡೆಯಲು ಯತ್ನಿಸುತ್ತಿರುವುದು ಪ್ರಜಾಪ್ರಭುತ್ವದ ವಿರೋಧಿ ನಡೆಯಾಗಿದೆ. ಸರ್ಕಾರಿ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸಲು ಇವರು ಅಡ್ಡಿಪಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000379747

ಈ ಸಂದರ್ಭದಲ್ಲಿ ಮಾತನಾಡಿದ ಅಮ್ಜದ್ ಖಾನ್ ಪಠಾಣ್, “ಆಸ್ತಿಗೆ ಸಂಬಂಧಿಸಿದ ಎಲ್ಲಾ ಅಧಿಕೃತ ದಾಖಲೆಗಳು ಮಾಲೀಕರ ಬಳಿ ಇವೆ. ವಾಸ್ತವ ಹೀಗಿದ್ದರೂ, ಉದ್ದೇಶಪೂರ್ವಕವಾಗಿ ಸಮಾಜದಲ್ಲಿ ದ್ವೇಷ ಬಿತ್ತುವ ಮತ್ತು ಭಯದ ವಾತಾವರಣ ನಿರ್ಮಿಸುವ ಕೆಲಸ ನಡೆಯುತ್ತಿದೆ. ಕಾನೂನು ಕೈಗೆತ್ತಿಕೊಳ್ಳುವ ಮತ್ತು ಸುಳ್ಳು ಮಾಹಿತಿಯ ಮೂಲಕ ಜನರನ್ನು ಪ್ರಚೋದಿಸುವ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅರಣ್ಯ ಭೂಮಿ-ಸಿಆರ್‌ಝಡ್ ಸಂಘರ್ಷ; ಜಿಲ್ಲೆಯ ಶೇ 86ರಷ್ಟು ಆಸ್ತಿಗಳಿಗೆ ಸಿಗದ ‘ಇ-ಸ್ವತ್ತು’ ಮಾನ್ಯತೆ

ಸುಳ್ಳು ಆರೋಪ ಮಾಡುತ್ತಿರುವ ಆನಂದ್ ಸಾಲೇರಾ ಹಾಗೂ ಬೆಂಬಲಿಗರ ವಿರುದ್ಧ ತಕ್ಷಣ ತನಿಖೆಯಾಗಬೇಕು, ಸಾರ್ವಜನಿಕ ಶಾಂತಿ ಭಂಗಕ್ಕೆ ಯತ್ನಿಸಿದವರ ಮೇಲೆ ಕಠಿಣ ಕ್ರಮ ಜರುಗಿಸಬೇಕು, ಅಧಿಕಾರಿಗಳಿಗೆ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಕಸ್ತೂರಿಬನಗರದ ಅಲ್ಪಸಂಖ್ಯಾತ ನಿವಾಸಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು, ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಎಸ್‌ಡಿಪಿಐನ ಪ್ರಮುಖ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...