ಶಿರಸಿ | ಕೊಲೆ ಯತ್ನ ಹಾಗೂ ಕೊಲೆ ಪ್ರಕರಣ: ಆರು ಆರೋಪಿಗಳಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Date:

ಶಿರಸಿ: ರಾಜಕೀಯ ದ್ವೇಷ ಹಾಗೂ ಹಳೇ ವೈಮನಸ್ಸಿನ ಹಿನ್ನೆಲೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಘಟಕದ ಸದಸ್ಯ ಮಹಮ್ಮದ ಅನೀಸ್ ತಹಶೀಲ್ದಾರ ಅವರ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಹಾಗೂ ಈ ವೇಳೆ ನಡೆದ ಅಸ್ಲಂ ಸೈಯ್ಯದ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿಯ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಪ್ರಕರಣದ ಆರು ಮಂದಿ ಆರೋಪಿಗಳಿಗೆ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಲಾಗಿದೆ.

ಪ್ರಕರಣದ ಹಿನ್ನೆಲೆ: 2019ರ ಏಪ್ರಿಲ್ 23ರಂದು ಲೋಕಸಭಾ ಚುನಾವಣೆ ಮುಗಿದ ರಾತ್ರಿ ಈ ಘಟನೆ ನಡೆದಿತ್ತು. ಅಂದು ರಾತ್ರಿ ಸುಮಾರು 10:30 ಗಂಟೆಗೆ ಕಸ್ತೂರಬಾ ನಗರದ ಕ್ರಾಸ್ ಬಳಿ ಮಹಮ್ಮದ ಅನೀಸ್ ತಹಶೀಲ್ದಾರ ಅವರು ತಮ್ಮ ಬೈಕ್ ಮೇಲೆ ಕುಳಿತು ಮೊಬೈಲ್ ನೋಡುತ್ತಾ ಗೆಳೆಯನಿಗಾಗಿ ಕಾಯುತ್ತಿದ್ದರು.

ಈ ವೇಳೆ ಪೂರ್ವಯೋಜಿತ ಸಂಚಿನಂತೆ ಕಪ್ಪು ಬಣ್ಣದ ಕಾರಿನಲ್ಲಿ ಬಂದ ಆರೋಪಿಗಳು, ಹೆಡ್‌ಲೈಟ್ ಆರಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಅನೀಸ್ ಕೆಳಗೆ ಬೀಳುತ್ತಿದ್ದಂತೆ ಚಾಕು, ರಾಡು ಹಾಗೂ ಪೈಪ್‌ಗಳಿಂದ ಮನಬಂದಂತೆ ಇರಿದು ಕೊಲೆಗೆ ಯತ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಭೀಕರ ಹಲ್ಲೆಯ ಸಮಯದಲ್ಲಿ ಆರೋಪಿಗಳು ನಡೆಸಿದ ಚಾಕು ಇರಿತದಿಂದ ಅವರದ್ದೇ ಗುಂಪಿನಲ್ಲಿದ್ದ ಅಸ್ಲಂ ಸೈಯ್ಯದ ಎಂಬಾತನಿಗೂ ಗಂಭೀರ ಗಾಯವಾಗಿ ಮೃತಪಟ್ಟಿದ್ದನು. ಕೃತ್ಯದ ನಂತರ ಆರೋಪಿಗಳು ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಗಳನ್ನು ಸುಟ್ಟು ಹಾಕಿ, ಮೊಬೈಲ್‌ಗಳನ್ನು ಅಘನಾಶಿನಿ ನದಿಗೆ ಎಸೆದಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿಯ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ ಕಿಣಿ ಅವರು ಸುದೀರ್ಘ ವಿಚಾರಣೆ ನಡೆಸಿ ತೀರ್ಪುನ್ನು ಪ್ರಕಟಿಸಿದ್ದಾರೆ.

1000501310

ಮಹಮ್ಮದ ಫಾರೂಕ್ ಪಟೇಲ್, ಮಹಮ್ಮದ ಸಲೀಂ ಅಲಿಯಾಸ್ ಸಾಗರ ಭಾಷಾ, ಸರ್ಫರಾಜ್ ಪಟೇಲ್, ಮಹಮ್ಮದ ಆರೀಪ್, ನಿಸ್ಸಾರ ಅಹ್ಮದ ಶೇಖ್ ಹಾಗೂ ಮೌಸಿನ್ ಅಬ್ದುಲ್ ಶುಕೂರ ಹೊನ್ನಾವರ ಎಂಬುವವರಿಗೆ 10 ವರ್ಷ ಶಿಕ್ಷೆ ಹಾಗೂ ತಲಾ 18 ಸಾವಿರ ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಗಾಯಾಳು ಅನೀಸ್ ಅವರಿಗೆ ಪ್ರತಿಯೊಬ್ಬ ಆರೋಪಿಯಿಂದ 10 ಸಾವಿರದಂತೆ ಒಟ್ಟು 60 ಸಾವಿರ ರೂ. ಪರಿಹಾರ ನೀಡಲು ಆದೇಶಿಸಲಾಗಿದೆ.

ಅಸ್ಲಂ ಸೈಯ್ಯದ ಕೊಲೆ ಪ್ರಕರಣ: ಇದೇ ಕೃತ್ಯದಲ್ಲಿ ಅಸ್ಲಂ ಸೈಯ್ಯದ ಎಂಬಾತನ ಸಾವಿಗೆ ಕಾರಣನಾದ ಮಹಮ್ಮದ ಫಾರೂಕ್ ಪಟೇಲ್‌ಗೆ ಪ್ರತ್ಯೇಕವಾಗಿ 10 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿದೆ. ಮೃತನ ಅವಲಂಬಿತ ತಾಯಿಗೆ 50 ಸಾವಿರ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜನಸಾಗರದ ಮಧ್ಯೆ ವೈಭವದಿಂದ ಜರುಗಿದ ಶ್ರೀ ಮಾರಿಕಾಂಬಾ ದೇವಿಯ ರಥೋತ್ಸವ

ಈ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಟಿಪ್ಪು ನಗರದ ನಿವಾಸಿ ಮೌಸಿನ್ ಅಬ್ದುಲ್ ಶುಕೂರ ಹೊನ್ನಾವರ, ಬೆಂಗಳೂರಿನ ಕುಖ್ಯಾತ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲೂ ಭಾಗಿಯಾಗಿದ್ದ ಎನ್ನಲಾಗಿದೆ. ಕಸ್ತೂರಬಾ ನಗರದ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಬಿಜಾಪುರದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಅಂದಿನ ತನಿಖಾಧಿಕಾರಿ, ಪೊಲೀಸ್ ಉಪ ನಿರೀಕ್ಷಕ ಶಶಿಕುಮಾರ ಸಿ.ಆರ್. ಅವರು ಪ್ರಕರಣದ ಆಳವಾದ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಹೆಡ್ ಕಾನ್ಸ್‌ಟೇಬಲ್‌ಗಳಾದ ಬಿ.ಆರ್. ಹನುಮಂತ ಮತ್ತು ರಮೇಶ ಮುಚ್ಚಂಡಿ ಸಾಕ್ಷಿಗಳನ್ನು ಸಮಯಕ್ಕೆ ಸರಿಯಾಗಿ ಹಾಜರುಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರಾಜೇಶ್ ಎಂ. ಮಳಗಿಕರ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ಬಲಿಷ್ಠ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಮಹತ್ವದ ತೀರ್ಪು ನೀಡಿದ್ದು, ಸಂತ್ರಸ್ತರಿಗೆ ನ್ಯಾಯ ಸಿಕ್ಕಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...