ಶಿರಸಿ | ‘ಬೆಸ್ಟ್ ಬ್ಯಾಟ್ಸ್‌ಮನ್’ ವಾಜಿದ್‌ ಶೇಖ್ ISPLಗೆ ಆಯ್ಕೆ; ರಾಷ್ಟ್ರಮಟ್ಟದಲ್ಲಿ ಕರ್ನಾಟಕ ಪ್ರತಿನಿಧಿಸಲಿರುವ ಜಿಲ್ಲೆಯ ಆಟಗಾರ

Date:

ಶಿರಸಿ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ (ಕೆ.ಎಸ್‌.ಪಿ.ಎಲ್) ಕ್ರಿಕೆಟ್ ಟೂರ್ನಿಯಲ್ಲಿ ಶಿರಸಿಯ ಯುವ ಪ್ರತಿಭೆ ಅಬ್ದುಲ್ ವಾಜಿದ್ ಶೇಖ್ ಅತ್ಯುತ್ತಮ ಪ್ರದರ್ಶನದೊಂದಿಗೆ ‘ಬೆಸ್ಟ್ ಬ್ಯಾಟ್ಸ್‌ಮನ್’ ಪ್ರಶಸ್ತಿಯನ್ನು ಕೈಸೇರಿಸಿಕೊಂಡಿದ್ದಾರೆ.

ವಾಜಿದ್ ಇದೀಗ **ಇಂಡಿಯನ್ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್‌ (ISPL)**ಗೆ ಆಯ್ಕೆಯಾಗಿದ್ದು, ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಬೆಂಗಳೂರು ಕೀನಿ ಸ್ಟೇಡಿಯಂನಲ್ಲಿ ನವೆಂಬರ್ 1ರಿಂದ ನಡೆದ ಲೀಗ್‌ನಲ್ಲಿ, ಸಿದ್ದಾಪುರದ ಡೊಮಿನಿಕ್ ಫರ್ನಾಂಡಿಸ್ ಅವರ ನಾಯಕತ್ವದ ಫಾಲ್ ಉತ್ತರ ಕನ್ನಡ ತಂಡದ ಪರವಾಗಿ ವಾಜಿದ್ ಕಣಕ್ಕಿಳಿದರು. ರಾಜ್ಯದ 32 ಜಿಲ್ಲೆಗಳ ಕಿರಿಯ ಹಾಗೂ ಹಿರಿಯ ಪ್ರತಿಭಾವಂತರ ಮಧ್ಯೆಯಲ್ಲಿ ವಾಜಿದ್ ತೋರಿದ ಆಟ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.

5 ಪಂದ್ಯಗಳಲ್ಲಿ 158 ರನ್ – 13 ಸಿಕ್ಸರ್‌ಗಳು ಉತ್ತರ ಕನ್ನಡ ತಂಡದ ಆರಂಭಿಕ ಆಟಗಾರನಾದ ವಾಜಿದ್, ಐದು ಪಂದ್ಯಗಳಲ್ಲಿ ಒಟ್ಟು 158 ರನ್ ಗಳಿಸಿದ್ದು, 13 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಬೌಲರ್‌ಗಳ ಬೆವರಿಳಿಸಿದರು. ಅವರ ಆಕ್ರಮಣಕಾರಿ ಪ್ರದರ್ಶನದ ನೆರವಿನಿಂದ ತಂಡವು ಕ್ವಾರ್ಟರ್ ಫೈನಲ್ ಹಂತ ತಲುಪಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿರಸಿ | ನಕಲಿ ಜಾತಿ ಪ್ರಮಾಣ ಪತ್ರದಿಂದ ನೌಕರಿ ಪಡೆದವರು ಸತ್ಯ ಬಹಿರಂಗಪಡಿಸಬೇಕು: ಭೀಮ ಘರ್ಜನೆ ಆಗ್ರಹ

ಕೊಹ್ಲಿಯಿಂದ ಸ್ಫೂರ್ತಿ ಶಿರಸಿಯ ಆರೆಕೊಪ್ಪದ ಸರಳ ಕುಟುಂಬದಿಂದ ಬಂದಿರುವ ವಾಜಿದ್, ಬಾಲ್ಯದಲ್ಲೇ ಕ್ರಿಕೆಟ್ ಜಗತ್ತಿಗೆ ಕಾಲಿಟ್ಟವರು. ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯವರ ಆಟದಿಂದ ಸ್ಫೂರ್ತಿ ಪಡೆದಿರುವ ವಾಜಿದ್, ಟೆನ್ನಿಸ್ ಬಾಲ್ ಕ್ರಿಕೆಟ್ ವಲಯದಲ್ಲಿ ಈಗಾಗಲೇ ಶ್ರೇಷ್ಟ ಬ್ಯಾಟ್ಸ್‌ಮನ್ ಎನ್ನಿಸಿಕೊಂಡಿದ್ದಾರೆ. ರಾಜ್ಯ ಮಟ್ಟದ ಐಎಸ್‌ಪಿಎಲ್‍ ಸ್ಪರ್ಧೆಗೆ ಕರ್ನಾಟಕದಿಂದ ಆಯ್ಕೆಯಾದ ಏಕೈಕ ಉತ್ತರ ಕನ್ನಡ ಜಿಲ್ಲೆಯ ಆಟಗಾರ ಎಂಬ ಕೀರ್ತಿಗೆ ವಾಜಿದ್ ಪಾತ್ರರಾಗಿದ್ದು, ಮಂಗಳವಾರದಿಂದ ಆರಂಭವಾಗಿರುವ ಟೂರ್ನಿಯಲ್ಲಿ ವಾಜಿದ್ ರಾಜ್ಯ ತಂಡದ ಪರ ಬ್ಯಾಟ್ ಬೀಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...