ಶಿರಸಿ | ಅರಣ್ಯ ಭೂಮಿ ಸ್ವಾಧೀನಕ್ಕೆ ಸುಪ್ರೀಂ ಕೋರ್ಟ್ ಆದೇಶ; ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ

Date:

ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಅರಣ್ಯೇತರ ಚಟುವಟಿಕೆಗೆ ಬಳಸಿಕೊಂಡಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಮತ್ತು ವಶಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿವಿಧ ಹಂತದ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರವು ಒಂದು ವರ್ಷದ ಅವಧಿಯನ್ನು ನಿಗದಿಪಡಿಸಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಅರಣ್ಯ, ಪರಿಸರ ವಿಜ್ಞಾನ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ ಬಿ. ಶಿವಕುಮಾರ್ ಅವರು, ಸರ್ಕಾರವು ಸೆಪ್ಟೆಂಬರ್ 15 ರಂದು ಪ್ರಕಟಿಸಿದ ಸರ್ಕಾರದ ನಡವಳಿಕೆಯ ಪ್ರತಿಯನ್ನು ಶಿರಸಿ ಅರಣ್ಯ ಭೂಮಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಮಂಡಿಸಿದರು. ಈ ಸಭೆ ಅಕ್ಟೋಬರ್ 4 ರಂದು ಜರುಗಲಿರುವ ಮೇಲ್ಮನವಿ ಅಭಿಯಾನದ ಪೂರ್ವಭಾವಿ ಸಭೆಯಾಗಿತ್ತು.

ಸುಪ್ರೀಂ ಕೋರ್ಟ್ ಮೇ 15 ರಂದು, ಅರಣ್ಯ ಭೂಮಿಯನ್ನು ಹೊಂದಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸರ್ಕಾರದ ಪರವಾನಿಗಿಯಿಲ್ಲದೇ ಕಾನೂನುಬಾಹಿರವಾಗಿ ಸ್ವಾಧೀನಪಡಿಸಿಕೊಂಡಿರುವ ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳಲು ತನಿಖಾ ತಂಡಕ್ಕೆ ಅಧಿಕಾರ ನೀಡುವಂತೆ ಆದೇಶಿಸಿತ್ತು. ಅಲ್ಲದೆ, ರಾಜ್ಯ ಸರ್ಕಾರವು ಸ್ವಾಧೀನಪಡಿಸಿಕೊಂಡಿರುವ ಭೂಮಿಯ ವೆಚ್ಚವನ್ನು ವಸೂಲಿ ಮಾಡುವ ಪ್ರಕ್ರಿಯೆಯನ್ನೂ ನಡವಳಿಕೆಯಲ್ಲಿ ಪ್ರಸ್ತಾಪಿಸಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟ್‌ನಲ್ಲಿ ಟಿ.ಎನ್. ಗೋಧವರ್ಮನ್ ಅವರು ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಅರಣ್ಯ ಭೂಮಿಯನ್ನು ಅರಣ್ಯ ಉದ್ದೇಶ ಹೊರತುಪಡಿಸಿ ಮಾನವ ಹಾಗೂ ಸಂಸ್ಥೆಗಳ ಹಸ್ತಕ್ಷೇಪವನ್ನು ನಿಯಂತ್ರಿಸಲು ಆದೇಶ ನೀಡಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ಘೋಷಿಸಿದ ಎಸಿ ಕಾವ್ಯರಾಣಿ

ಈ ಸಂದರ್ಭದಲ್ಲಿ ಕಾನೂನು ಸಲಹೆಗಾರ ಉದಯ ನಾಯ್ಕ ವಕೀಲರು, ಕೃಷ್ಣ ಗೋವಿಂದ ಪೂಜಾರಿ ಉಲ್ಲಾಳ, ಮಹೇಶ್ ಮಂಜುನಾಥ ಮುಕ್ರಿ ಕಡಬಾಳ, ಗಣಪತಿ ತಿಮ್ಮಪ್ಪ ನಾಯ್ಕ ಕಾನಕೊಪ್ಪ, ಶಿಣ್ಣು ಸುಬ್ಬ ಗೌಡ ಕುದರಗೋಡ, ಕಿರಣ ಶಿವು ವಡ್ಡರ್ ಬೆಡಸಗಾಂವ್, ತಿಮ್ಮ ಸಣ್ಣು ಗೋಣಸರ, ವಿಜಯ ವಿಷ್ಣು ದೇವದಾಸ ಕಾರವಾರ, ಶೇಷ ನಾಯ್ಕ ಹುಲೇಕಲ್, ಅರವಿಂದ ನಾಗೆಕರ್ ಹಣಕೋಣ, ಪ್ರದೀಪ್ ಬಿ ನಾಯ್ಕ, ದೇವು ಗಾಂವಕರ್ ಕಾರವಾರ, ಬಾಬು ಗಾವಂಕರ್ ಕಾರವಾರ, ನಾರಾಯಣ ಗಾಂವಕರ್ ಕಾರವಾರ, ರತ್ನಾಕರ ಅನಂತ ನಾಯ್ಕ, ವೆಂಕಟರಮಣ ಸುಬ್ಬ ಗೌಡ ಕುದ್ರಗೋಡ, ಮಂಜುನಾಥ ಸುಬ್ಬ ಗೌಡ ಶಿರಗುಳಿ, ಅಬ್ದುಲ್ ಹಕ್ ಆರೆಕೊಪ್ಪ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...