ಶಿರಸಿ | ನಕಲಿ ಜಾತಿ ಪ್ರಮಾಣ ಪತ್ರದಿಂದ ನೌಕರಿ ಪಡೆದವರು ಸತ್ಯ ಬಹಿರಂಗಪಡಿಸಬೇಕು: ಭೀಮ ಘರ್ಜನೆ ಆಗ್ರಹ

Date:

ಶಿರಸಿ: ವಿವಿಧ ಸರ್ಕಾರಿ ಇಲಾಖೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿ ಸರ್ಕಾರಿ ಹುದ್ದೆ ಪಡೆದು ನಿಜವಾದ ದಲಿತರ ಹಕ್ಕನ್ನು ಕಸಿದು ಕೊಳ್ಳುತ್ತಿರುವವರ ವಿರುದ್ಧ ಭೀಮ ಘರ್ಜನೆ ಸಂಘಟನೆಯು ಆಕ್ಷೇಪ ವ್ಯಕ್ತಪಡಿಸಿದ್ದು, “ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಿ ನೌಕರಿ ಪಡೆದವರು ತಾವೇ ಮುಂದಕ್ಕೆ ಬಂದು ಸತ್ಯ ಬಹಿರಂಗಪಡಿಸಬೇಕು.

ಇಲ್ಲದಿದ್ದರೆ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಭೀಮ ಘರ್ಜನೆ ಸಂಘಟನೆಯ ಅಧ್ಯಕ್ಷ ಅರ್ಜುನ ಮಿಂಟಿ ಅವರು ಎಚ್ಚರಿಸಿದರು. ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆ, ಸಹಾಯಕ ಆಯುಕ್ತರ ಕಚೇರಿ, ತಹಶೀಲ್ದಾರ ಕಚೇರಿ ಮತ್ತು ಲೋಕೋಪಯೋಗಿ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳಲ್ಲಿನ ನೌಕರರು ಸುಳ್ಳು ಪ್ರಮಾಣ ಪತ್ರದ ಆಧಾರದ ಮೇಲೆ ನೌಕರಿ ಸೇರಿರುವ ಕುರಿತು ಮಾಹಿತಿ ಲಭ್ಯವಾಗಿದೆಯೆಂದು ಹೇಳಿದರು. “ಇದು ದಲಿತರ ಅನ್ನಕ್ಕೆ ಕೈ ಹಾಕುವಂತೆಯೇ. ಸಮಾಜಕ್ಕೆ ಅನ್ಯಾಯ ಮಾಡುವ ಈ ರೀತಿಯ ನಡೆ ಸಹಿಸಲಾಗದು” ಎಂದು ಹೇಳಿದರು.

ಇದೇ ವೇಳೆ, ಶಿರಸಿ ನಗರಸಭೆಗಾಗಿ ಸರ್ಕಾರ ಈಗಾಗಲೇ ಮೀಸಲಾತಿ ಪ್ರಕಟಿಸಿರುವ ಸಂದರ್ಭದಲ್ಲೇ, ಅದನ್ನು ಬದಲಾಯಿಸಲು ಕೆಲವು ವಲಯಗಳಿಂದ ಯತ್ನ ನಡೆಯುತ್ತಿದೆ. “ಆಡಳಿತ ಜನಪ್ರತಿನಿಧಿಗಳು ಇಂತಹ ಒತ್ತಡಗಳಿಗೆ ಒಳಗಾಗಬಾರದು. ಪ್ರಕಟಿಸಿರುವ ವಾರ್ಡ್ ವಾರು ಮೀಸಲಾತಿ ತಿದ್ದುಪಡಿ ಮಾಡಬಾರದು ಹಾಗೂ ಪ್ರಕಟಿಸಿರುವ ಮಿಸಲಾತಿಯನ್ನೆ ಮುಂದುವರಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಚಾಲಕರ ಒಕ್ಕೂಟದ ಪದಾಧಿಕಾರಿಗಳಿಗೆ ಸನ್ಮಾನ

ಸಂಘಟನೆಯ ಪ್ರಮುಖರಾದ ರಾಜೇಶ್ ದೇಶಭಾಗ ಮಾತನಾಡಿ, “ಭೀಮ ಘರ್ಜನೆ ಸಂಘಟನೆಯ ಹೋರಾಟದಿಂದ ಕೆಲವು ಪ್ರಮುಖ ಹೆದ್ದಾರಿ ಕಾಮಗಾರಿಗಳು ಸರಿಯಾದ ಗತಿಯಲ್ಲಿ ಸಾಗುತ್ತಿವೆ. ಮುಂದೆ ಬರುವ ಶಿರಸಿ ನಗರಸಭೆ ಚುನಾವಣೆಯಲ್ಲಿ ಭೀಮ ಘರ್ಜನೆ ಸಂಘಟನೆ ವತಿಯಿಂದ 31 ವಾರ್ಡುಗಳಲ್ಲಿ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಗಳನ್ನು ಹಾಕಲಾಗುವುದು” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ನಾಯಕರಾದ ಅಮಿತ್ ಜೋಗಳೆಕರ್, ನವೀನ್ ಕಾನಡೆ, ರಾಜೇಶ್ ಕಲಘಟಗಿ, ಅಕ್ಷಯ ಧೋತ್ರೆ, ಗುರುರಾಜ ಮಿಂಟಿ, ಹರ್ಷ ಗೋವಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...