ಶಿರಸಿ | ಸರ್ಕಾರಿ ಬೆಟ್ಟದ ದುರುಪಯೋಗಿಗಳೇ ‘ಭೂ ಕಳ್ಳರು’: ಆಪರೇಷನ್ ಬೆಟ್ಟ ಮುಂದುವರಿಕೆ — ಅರ್ಜುನ್ ಮಿಂಟಿ

Date:

ಶಿರಸಿ: ಸರ್ಕಾರಿ ಬೆಟ್ಟಗಳನ್ನು ದುರುಪಯೋಗ ಪಡಿಸಿಕೊಂಡವರನ್ನು ‘ಭೂ ಕಳ್ಳರು’ ಎಂದೇ ಕರೆಯುತ್ತೇವೆ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಸ್ಪಷ್ಟಪಡಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವು ಹೇಳಿದಂತೆ ‘ಆಪರೇಷನ್ ಬೆಟ್ಟ’ ಯಾವತ್ತೂ ನಿಲ್ಲುವುದಿಲ್ಲ. ಭಾಗಾಯ್ತು ಎಂದು ನೀಡಿರುವ ಸರ್ಕಾರಿ ಬೆಟ್ಟಗಳಲ್ಲಿ ಅನಧಿಕೃತವಾಗಿ ಬೇಲಿ ಹಾಕುವುದು, ಮರಗಳನ್ನು ಕಡಿದು ತೋಟ ನಿರ್ಮಾಣ ಮಾಡುವುದು ಮುಂತಾದ ಕ್ರಮಗಳು ಸವಲತ್ತಿನ ದುರುಪಯೋಗವಾಗಿವೆ” ಎಂದು ಆರೋಪಿಸಿದರು.

ಈ ರೀತಿಯ ಚಟುವಟಿಕೆಗಳಿಂದ ಅರಣ್ಯ ನಾಶ ಹೆಚ್ಚುತ್ತಿದೆ. ಇಂತಹ ಲೂಟಿಕೋರರ ವಿರುದ್ಧವೇ ನಮ್ಮ ಹೋರಾಟ ಮುಂದುವರಿದಿದೆ ಎಂದು ಹೇಳಿದರು. “ಅರಣ್ಯ ನಾಶದ ಪ್ರಮಾಣದಲ್ಲಿ ಕರ್ನಾಟಕ ರಾಜ್ಯವು ಎರಡನೇ ಸ್ಥಾನಕ್ಕೇರಲು ಇಂತಹ ದುರುಪಯೋಗವೇ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂತಹವರನ್ನು ‘ಭೂ ಕಳ್ಳರು’ ಎಂದು ಕರೆಯದೇ ಇನ್ನೇನು ಹೇಳಬೇಕು?” ಎಂದು ಪ್ರಶ್ನಿಸಿದರು. ಕೆಲವು ಮಾಧ್ಯಮಗಳಲ್ಲಿ ಭೀಮಘರ್ಜನೆ ಸಂಘಟನೆಯ ಹೆಸರನ್ನು ಉಲ್ಲೇಖಿಸದೆ, ಬೆಟ್ಟ ಲ್ಯಾಂಡ್ ಹಕ್ಕಿನ ವಿಚಾರದಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ರೀತಿಯಲ್ಲಿ ವರದಿಗಳು ಪ್ರಕಟವಾಗಿರುವುದನ್ನು ಅವರು ಖಂಡಿಸಿದರು.

ಈ ಸುದ್ದಿ ಓದಿದ್ದೀರಾ ? ದಾಂಡೇಲಿ | ಬಡ ರೋಗಿಗಳಿಂದ ಹಣ ವಸೂಲಿ ಆರೋಪ: ವೈದ್ಯರಿಗೆ ಶಾಸಕ ಆರ್.ವಿ. ದೇಶಪಾಂಡೆ ಖಡಕ್ ಸೂಚನೆ

ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ. ರೈತ ವಿರೋಧಿಗಳೂ ಅಲ್ಲ. ನಮ್ಮ ಕುಟುಂಬವೇ ಕೃಷಿ ಹಿನ್ನೆಲೆಯದ್ದು. ಕಾನೂನಿನ ಅಡಿಯಲ್ಲಿ ಸರಿಯಾದ ಹೋರಾಟವನ್ನು ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ದಿನಗಳಲ್ಲಿ ಬೆಟ್ಟ ಲ್ಯಾಂಡ್ ವಿಚಾರವಾಗಿ ಹೆಚ್ಚಿನ ವಿವರಗಳೊಂದಿಗೆ ಮತ್ತೊಮ್ಮೆ ಸುದ್ದಿಗೋಷ್ಠಿ ನಡೆಸುವುದಾಗಿ ಅರ್ಜುನ್ ಮಿಂಟಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...