ಶಿರಸಿ | ಮತ್ತಿಘಟ್ಟ ಜಲಪಾತದಲ್ಲಿ ದುರಂತ; ಪ್ರವಾಸಕ್ಕೆ ಬಂದ ಮಣಿಪಾಲ್ ಬಿ.ಟೆಕ್ ವಿದ್ಯಾರ್ಥಿ ನೀರುಪಾಲು

Date:

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪ್ರಕೃತಿ ಸೌಂದರ್ಯವನ್ನು ಸವಿಯಲು ಬಂದಿದ್ದ ಪ್ರವಾಸಿ ವಿದ್ಯಾರ್ಥಿಗಳ ತಂಡದ ಮೇಲೆ ದುರಂತದ ಛಾಯೆ ಆವರಿಸಿದೆ. ಶಿರಸಿ ತಾಲೂಕಿನ ಮತ್ತಿಘಟ್ಟ ಜಲಪಾತದಲ್ಲಿ ಈಜಲು ಹೋದ ಮಣಿಪಾಲ್ MIT ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಘಟನೆಯ ವಿವರ: ಮಣಿಪಾಲ್‌ನ MIT ಕಾಲೇಜಿನಲ್ಲಿ ಬಿ.ಟೆಕ್ ಎರಡನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಶಿವೋಹಂ ಅನಂತ್ ತಿವಾರಿ (18) ಅವರು ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಸೋಮವಾರ ಬೆಳಿಗ್ಗೆ ಮಣಿಪಾಲ್‌ನಿಂದ ಬಿ.ಟೆಕ್ ಹಾಗೂ ಜರ್ನಲಿಸಂ ವಿಭಾಗದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕಾಗಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ಹೊನ್ನಾವರ ಮತ್ತು ಶಿರಸಿ ಭಾಗದ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಈ ತಂಡ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾಸದ ಭಾಗವಾಗಿ ಕೆಲವು ವಿದ್ಯಾರ್ಥಿಗಳು ದಟ್ಟ ಅರಣ್ಯದ ನಡುವೆ ಇರುವ ಮನಮೋಹಕ ಮತ್ತಿಘಟ್ಟ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಜಲಪಾತದ ಕೆಳಭಾಗದಲ್ಲಿ ಈಜಲು ಶಿವೋಹಂ ನೀರಿಗಿಳಿದಿದ್ದರು. ಆದರೆ ನೀರಿನ ಆಳ ಮತ್ತು ಸುಳಿಯ ಅರಿವಿಲ್ಲದೆ ಈಜಲು ಸಾಧ್ಯವಾಗದೆ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಮುರುಡೇಶ್ವರ | ಮಹಾಶಿವರಾತ್ರಿ ಜಾಗರಣೆ ಸಂಭ್ರಮ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಚಿವ ಮಂಕಾಳ ವೈದ್ಯ ಭರವಸೆ

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದರು. ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ಹಾಗೂ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರವಾಸಿಗರಿಗೆ ಕಿವಿಮಾತು: ಜಲಪಾತಗಳ ಬಳಿ ಇರಲಿ ಎಚ್ಚರ ಮಳೆಗಾಲ ಮತ್ತು ನಂತರದ ದಿನಗಳಲ್ಲಿ ಜಲಪಾತಗಳು ನೋಡುಗರಿಗೆ ಆಕರ್ಷಕವಾಗಿ ಕಂಡರೂ, ನೀರಿನ ಆಳ ಮತ್ತು ಸುಳಿಯ ಬಗ್ಗೆ ಅರಿವಿಲ್ಲದೆ ನೀರಿಗಿಳಿಯುವುದು ಅಪಾಯಕಾರಿ. ವಿಶೇಷವಾಗಿ ದಟ್ಟ ಅರಣ್ಯದ ನಡುವೆ ಇರುವ ಜಲಪಾತಗಳಲ್ಲಿ ಮೊಬೈಲ್ ನೆಟ್‌ವರ್ಕ್ ಕೊರತೆ ಇರುವುದರಿಂದ ತುರ್ತು ಸಂದರ್ಭದಲ್ಲಿ ನೆರವು ಪಡೆಯುವುದು ಕಷ್ಟವಾಗುತ್ತದೆ. ಆದ್ದರಿಂದ ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ಅಪರಿಚಿತ ನೀರಿನ ಸೆಲೆಗಳಿಗೆ ಇಳಿಯುವ ಮುನ್ನ ಸ್ಥಳೀಯರ ಮಾರ್ಗದರ್ಶನ ಪಡೆಯುವುದು ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಅತ್ಯಗತ್ಯ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...