ಸೌಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಈ ಕೇಸ್‌ಅನ್ನು ಕೈಗೆತ್ತಿಕೊಳ್ಳುತ್ತಾ ಎಸ್‌ಐಟಿ?

Date:

ಧರ್ಮಸ್ಥಳ ಪ್ರಕರಣಗಳಲ್ಲಿ ಇಡೀ ಕರಾವಳಿ ಭಾಗವನ್ನೇ ಒಗ್ಗೂಡಿಸಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರಿಗೆ ದೂರು ಸಲ್ಲಿಸಿದ್ದಾರೆ. ತಮ್ಮ ಮಗಳ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನೂ ತನಿಖೆ ನಡೆಸುವಂತೆ ಎಸ್‌ಐಟಿಗೆ ಮನವಿ ಮಾಡಿದ್ದಾರೆ. ಸಕಾರಾತ್ಮಕವಾಗಿ ಸ್ಪಂದಿಸಿರುವ ಎಸ್‌ಐಟಿ, ದೂರು ಮತ್ತು ಮನವಿಯನ್ನು ಪರಿಗಣಿಸುವುದಾಗಿ ತಿಳಿಸಿದೆ ಎಂದು ತಿಳಿದುಬಂದಿದೆ.

ಕುಸುಮಾವತಿ ಅವರು ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ ಎಂದು ಹೇಳಲಾದ ದೂರಿನ ಪ್ರತಿ ಈದಿನ.ಕಾಮ್‌ಗೆ ದೊರೆತಿದೆ. ದೂರಿನಲ್ಲಿ; “2012 ಅಕ್ಟೋಬರ್ 9 ರಂದು ಧರ್ಮಸ್ಥಳದಲ್ಲಿ ನನ್ನ ಮಗಳು ಸೌಜನ್ಯ ಭೀಕರ ಹಿಂಸೆ ಮತ್ತು ಬರ್ಬರ ಅತ್ಯಾಚಾರಕ್ಕೊಳಗಾಗಿ ಕೊಲೆಯಾದಳು. ಕೃತ್ಯ ನಡೆದ 13 ವರ್ಷಗಳು ಕಳೆದರೂ, 2025ರಲ್ಲೂ ಪೊಲೀಸರು ನಿಜವಾದ ಅಪರಾಧಿಯನ್ನು ಗುರುತಿಸಿಲ್ಲ. ಈಗ ಎಸ್‌ಐಟಿ ತನಿಖೆಗೊಳಪಡಿಸಿರುವ ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಸೌಜನ್ಯಳ ಮೇಲೆ ನಡೆದ ಅಪರಾಧಗಳ ಬಗ್ಗೆ ತಿಳಿದಿದೆ. ಹೀಗಾಗಿ, ಧರ್ಮಸ್ಥಳದ ಸಮಗ್ರ ಪ್ರಕರಣಗಳೊಂದಿಗೆ ಸೌಜನ್ಯ ಪ್ರಕರಣವನ್ನು ಒಳಗೊಂಡು ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

“ಚಿನ್ನಯ್ಯ ಅವರು ಮೃತ ದೇಹಗಳನ್ನು ವಿಲೇವಾರಿ ಮಾಡುತ್ತಿದ್ದ ವಿಷಯವು ಧರ್ಮಸ್ಥಳದ ಹಲವಾರು ಜನರಿಗೆ ತಿಳಿದಿದ್ದು, ನನ್ನ ತಂದೆ ಮತ್ತು ಸಹೋದರನಿಗೂ ಈತನ ಕಸುಬಿನ ಬಗ್ಗೆ ಅರಿವಿತ್ತು. ನೀವು ಇತ್ತೀಚೆಗೆ ಪಡೆದುಕೊಂಡ ಮಾಹಿತಿಯಂತೆ ಈ ಚಿನ್ನಯ್ಯನಿಗೆ ಸೌಜನ್ಯಳ ಮೇಲೆ ನಡೆದ ಅಪರಾಧಗಳ ಬಗ್ಗೆ ಜ್ಞಾನವಿದ್ದರೂ, ಆ ವಿಷಯವನ್ನು ತನ್ನ ಲಿಖಿತ ದೂರಿನಲ್ಲಿ ಆತ ಎಲ್ಲಿಯೂ ಹೇಳಿರುವುದಿಲ್ಲ. ಈತ 2014ರಲ್ಲಿ ಧರ್ಮಸ್ಥಳವನ್ನು ತೊರೆಯಲು ಸೌಜನ್ಯಳ ಸಾವಿನ ನಂತರದ ಘಟನೆಗಳೇ ಕಾರಣವೆಂದು ತಿಳಿದು ಬಂದಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 28 at 3.43.34 PM

“ಧರ್ಮಸ್ಥಳದಲ್ಲಿ ನಡೆದಿರುವ ದೌರ್ಜನ್ಯಗಳ ತನಿಖೆಗಾಗಿ ಇತ್ತೀಚಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಭೇಟಿ ನೀಡಿತ್ತು. ಆಗ, ಚಿನ್ನಯ್ಯನ ಅಕ್ಕ ರತ್ನ ಅವರು, ‘ಧರ್ಮಸ್ಥಳ ದೇವಸ್ಥಾನದ ಪ್ರಮುಖರೊಬ್ಬರು ಚಿನ್ನಯ್ಯನಿಗೆ 2014ರಲ್ಲಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆಯ ವಿಚಾರವಾಗಿ ಜೀವ-ಭಯವಿಟ್ಟಿದ್ದರು. ಸೌಜನ್ಯಳ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಗೆ ಕಾರಣರಾದವರ ಬಗ್ಗೆ ಚಿನ್ನಯ್ಯ ಎಲ್ಲಿಯಾದರೂ ಬಾಯಿಬಿಟ್ಟರೆ, ಆತ ಯಾವುದೇ ದೇಶಕ್ಕೆ ಹೋಗಿ ಅಡಗಿಕೊಂಡರೂ, ಆತನನ್ನು ಹುಡುಕಿ ಮುಗಿಸುವುದಾಗಿ ಬೆದರಿಕೆ ಹಾಕಿದ್ದರು. ಆ ಜೀವಭಯದಿಂದಲೇ, ಚಿನ್ನಯ್ಯ ಧರ್ಮಸ್ಥಳ ಬಿಟ್ಟು ಓಡಿ ಹೋಗಬೇಕಾಯಿತು’ ಎಂಬುದಾಗಿ ಹೇಳಿದ್ದಾರೆ ಎಂಬ ವಿಚಾರ ಗೊತ್ತಾಯಿತು” ಎಂದು ಕುಸುಮಾವತಿ ತಿಳಿಸಿದ್ದಾರೆ.

WhatsApp Image 2025 08 28 at 3.43.35 PM

“ಚಿನ್ನಯ್ಯನ ಅಕ್ಕ ರತ್ನ ಮಾನವ ಹಕ್ಕು ಆಯೋಗಕ್ಕೆ ಮೇಲಿನಂತೆ ನೀಡಿದ ಹೇಳಿಕೆಯನ್ನು ನಾನು ಕೇಳಿಸಿಕೊಂಡೆ. ಮುಂದುವರೆದು, ಆಗಸ್ಟ್‌ 24ರ ಭಾನುವಾರ, ‘ಡಿ ಟಾಕ್ಸ್’ ಎಂಬ ಮಾಧ್ಯಮವು ಚಿನ್ನಯ್ಯನೊಂದಿಗೆ ಇತ್ತೀಚೆಗೆ ನಡೆಸಿದ ಸಂದರ್ಶನವನ್ನು ಪ್ರಸಾರ ಮಾಡಿದೆ. ಅದರಲ್ಲಿ, ಚಿನ್ನಯ್ಯ ಹೇಳಿರುವಂತೆ; ‘ಧರ್ಮಸ್ಥಳದ ಸ್ನಾನಘಟ್ಟದ ಬಳಿ ಕೆಲಸಗಾರನಾಗಿದ್ದ ರವಿ ಪೂಜಾರಿ ಎನ್ನುವ ವ್ಯಕ್ತಿಯು ಸೌಜನ್ಯಳ ಅತ್ಯಾಚಾರ ಮತ್ತು ಕೊಲೆಗೆ ಕಾರಣರಾದವರ ಹೆಸರುಗಳನ್ನು ಚಿನ್ನಯ್ಯನಿಗೆ ಹೇಳಿದ್ದನು. ಸೌಜನ್ಯ ಪ್ರಕರಣದ ಬಗ್ಗೆ ಎಲ್ಲಿಯೂ ಬಾಯಿಬಿಡದಂತೆ ರವಿ ಪೂಜಾರಿಗೆ ಅಪರಾಧಿಗಳು ಹಣವನ್ನು ಕೊಟ್ಟಿದ್ದರು. ನಂತರ, ಆತನನ್ನು ಕಚೇರಿಯಲ್ಲಿಯೇ ಕೊಂದರು. ಸೌಜನ್ಯಳ ಮೇಲೆ ನಡೆದ ದುಷ್ಕೃತ್ಯಕ್ಕೆ ಕಾರಣರಾದವರ ಬಗ್ಗೆ ಯಾರಿಗಾದರೂ ಹೇಳಿಬಿಡುವನೆಂದೇ ಪ್ರಕರಣದ ಸಾಕ್ಷಿ ರವಿ ಪೂಜಾರಿಯನ್ನು ಕೊಲೆ ಮಾಡಲಾಗಿದೆ’ ಎಂಬುದಾಗಿ ಸಂದರ್ಶನದಲ್ಲಿ ಚಿನ್ನಯ್ಯ ವಿವರಿಸಿದ್ದಾರೆ” ಎಂಬುದನ್ನು ಕುಸುಮಾವತಿ ಎಸ್‌ಐಟಿ ಗಮನಕ್ಕೆ ತಂದಿದ್ದಾರೆ.

WhatsApp Image 2025 08 28 at 3.43.35 PM 1

 “ಚಿನ್ನಯ್ಯನ ಅಕ್ಕ ರತ್ನ ಅವರು ಮಾನವ ಹಕ್ಕು ಆಯೋಗಕ್ಕೆ ನೀಡಿದ ಹೇಳಿಕೆಯಂತೆಯೇ, ಆತ ಧರ್ಮಸ್ಥಳವನ್ನು ಬಿಡಬೇಕಾಗಿ ಬಂದ ಅನಿವಾರ್ಯತೆಯನ್ನು ಸಂದರ್ಶನದಲ್ಲಿ ಹೇಳಿಕೊಂಡಿದ್ದಾನೆ. ಚಿನ್ನಯ್ಯ ತನ್ನ ಸಂದರ್ಶನದಲ್ಲಿ ಹೇಳಿರುವ ಇನ್ನೊಂದು ಅಂಶವೆಂದರೆ – ಸೌಜನ್ಯಳ ಮೃತದೇಹ ಸಿಕ್ಕ ಸ್ಥಳ ಮಣ್ಣಸಂಕದಲ್ಲಿ ಆತನೇ ಹಲವಾರು ಹೆಣಗಳನ್ನು ಹೂತು ಹಾಕಿದ್ದಾನೆ. ಅಲ್ಲಿಗೆ, ಸೌಜನ್ಯಳ ಮೃತದೇಹವನ್ನೂ ಹೂತು ಹಾಕುವ ಸಂಚು ನಡೆದಿರುವ ಸಾಧ್ಯತೆಯನ್ನೂ ಆತನ ಹೇಳಿಕೆ ಸೂಚಿಸುತ್ತದೆ. ಹೀಗಾಗಿ, ಚಿನ್ನಯ್ಯನನ್ನು ನಾರ್ಕೋ ಪರೀಕ್ಷೆಗೆ ಒಳಪಡಿಸಿ, ಆತ ಸಂದರ್ಶನದಲ್ಲಿ ಹೇಳಿಕೊಂಡಿರುವ ಎಲ್ಲ ವಿಚಾರಗಳನ್ನು ದೃಢಪಡಿಸಬೇಕು. ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...