ರಾಮನಗರ | ಸಾಹಿತ್ಯ ಪರಿಷತ್‌ನ ಕನ್ನಡ ಭವನಕ್ಕೆ ನಿವೇಶನ ನೀಡುವಂತೆ ಮನವಿ

Date:

ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಕಸಾಪ ರಾಮನಗರ ಜಿಲ್ಲಾಧ್ಯಕ್ಷ ಬಿ ಟಿ ನಾಗೇಶ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ ಸತೀಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಹಲವು ದಿನಗಳಿಂದ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತ ಬಂದಿದ್ದು, ಈವರೆಗೂ ಕಸಾಪಕ್ಕೆ ನಿವೇಶನ ನೀಡಿಲ್ಲ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಮನಹರಿಸಿ ನಿವೇಶನ ಕೊಡಿಸುವಲ್ಲಿ ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ ಸತೀಶ್ ಮನವಿ ಸ್ವೀಕರಿಸಿ ಮಾತನಾಡಿ, “ನಮ್ಮ ಇಲಾಖೆಯಿಂದ ಕಸಾಪ ಮನವಿ ಮೇರೆಗೆ ವರದಿ ತಯಾರಿಸಿ, ನಿವೇಶನ ನೀಡುವಂತೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮನಗರ ತಹಶೀಲ್ದಾರ್ ತೇಜಶ್ವಿನಿ ಮಾತನಾಡಿ, “ನಿವೇಶನ ನೀಡುವ ಅಧಿಕಾರ ನಮ್ಮ ತಾಲೂಕು ಆಡಳಿತಕ್ಕೆ ಇಲ್ಲ. ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗವಿದ್ದರೆ ಗುರುತಿಸಿ, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿಲಾಗುತ್ತದೆ. ಬಳಿಕ ಅವರಿಂದ ನೀವೇಶನಕ್ಕೆ ಮಂಜೂರು ಪಡೆದುಕೊಳ್ಳಬೇಕು” ಎಂದರು.

IMG 20241130 WA0001

ಸಾಹಿತಿ ಡಾ‌. ಬೈರೇಗೌಡ ಮಾತನಾಡಿ, “ಜಿಲ್ಲೆಯ ಐದು ತಾಲೂಕುಗಳಲ್ಲಿಯೂ ಸ್ವಂತ ಕಟ್ಟಡ ಅಥವಾ ಕಚೇರಿಗಾಗಿ ಒಂದು ಕೊಠಡಿಯೂ ಇಲ್ಲದಿರುವುದು ಶೋಚನೀಯ. ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಕನಸಿನ ಕೂಸು ಕನ್ನಡ ಸಾಹಿತ್ಯ ಪರಿಷತ್ ಆರಂಭವಾಗಿ ಶತಮಾನ ಕಳೆದಿದೆ. ಆರುಕೋಟಿ ಕನ್ನಡಿಗರ ಸಾರ್ವಭೌಮ ಸಂಸ್ಥೆ ನಾಡು ನುಡಿಯ ಏಳಿಗೆಗಾಗಿ ಸದಾ ದುಡಿಯುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ತನ್ನದೇ ಆದ ಸಾಂಸ್ಕೃತಿಕ ಸಮುಚ್ಛಯವಿರಲಿ” ಎಂದರು.

“ರಾಮನಗರ ಜಿಲ್ಲೆಯಾಗಿ ಹದಿನಾರು ವರ್ಷಗಳು ಕಳೆದಿವೆ. ‌ಇಡೀ ಕರ್ನಾಟಕದಲ್ಲಿಯೇ ಹೆಚ್ಚು ಕಲೆಗಳು, ಕಲಾವಿದರು, ಕಲಾ ವೈಶಿಷ್ಟ್ಯತೆ, ವಿಭಿನ್ನ ಸಂಸ್ಕೃತಿಗಳನ್ನು ಮೈಗೂಡಿಸಿಕೊಂಡಿರುವ, ವಿಶಿಷ್ಟ ಬೆಟ್ಟಗುಡ್ಡಗಳಿಂದ ಜಗತ್ತಿನ ಗಮನ ಸೆಳೆದಿರುವ ರಾಮನಗರ ಜಿಲ್ಲಾ ಕೇಂದ್ರದಲ್ಲಿ ವ್ಯವಸ್ಥಿತ ಸಾಂಸ್ಕೃತಿಕ ಸಮುಚ್ಛಯವಿಲ್ಲದಿರುವುದು ಎಲ್ಲರೂ ತಲೆತಗ್ಗಿಸುವ ವಿಚಾರವೇ ಸರಿ. ಸಾಂಸ್ಕೃತಿಕ ಸಮುಚ್ಛಯವಿರಲಿ, ಇಲ್ಲಿಯ ತನಕ ಒಂದು ಬಾಡಿಗೆ ಕೊಠಡಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಕಚೇರಿ ಇರುವುದನ್ನು ತಿಳಿಸಲು ವಿಷಾದವೆನಿಸುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಸಂವಿಧಾನದ ಆಶಯದಂತೆ ಬದುಕಿದರೆ ಸಾರ್ಥಕ ಜೀವನ : ಜಿಲ್ಲಾಧಿಕಾರಿ ಡಾ.ಕುಮಾರ್

ಕಸಾಪ ಜಿಲ್ಲಾಧ್ಯಕ್ಷ ಬಿ ಟಿ ನಾಗೇಶ್ ಮಾತನಾಡಿ, “ಕನ್ನಡಪರ ವಿವಿಧ ಸಂಘ ಸಂಸ್ಥೆಗಳು, ಕನ್ನಡಪರ ಚಟುವಟಿಕೆಗಳಿಗೆ, ಸಾಂಸ್ಕೃತಿಕ ವೈವಿಧ್ಯತೆಗಳನ್ನು ಅಭಿವ್ಯಕ್ತಿಸಲು ಅಗತ್ಯವಾದ ಒಂದು ವೇದಿಕೆ ಬೇಡವೇ? ಕನ್ನಡ ಪರವಾದ ಯಾವುದೇ ಉತ್ಸವಗಳು ನಡೆಯಬೇಕಾದರೂ ಕನ್ನಡ ಸಾಹಿತ್ಯ ಪರಿಷತ್‌ ಮುಂಚೂಣಿಯಲ್ಲಿ ನಿಲ್ಲುತ್ತದೆ. ಇಂತಹ ಸ್ವಾಯುತ್ತ ಸಂಸ್ಥೆಗೆ ಅಗತ್ಯವಾದ ಒಂದೆರಡು ಎಕರೆ ಭೂಪ್ರದೇಶದಲ್ಲಿ ಸಾಂಸ್ಕೃತಿಕ ಸಮುಚ್ಛಯದ ಅಗತ್ಯವಿದೆಯೆಂದು ಯಾರಿಗೂ ಅನಿಸುತ್ತಿಲ್ಲವೇ? ಈಗಲಾದರೂ ಈ ದಿಸೆಯಲ್ಲಿ ಕಾರ್ಯಮಗ್ನರಾಗಿ ಕನ್ನಡ ಸಾಹಿತ್ಯ ಪರಿಷತ್‌ಗೆ ಜಿಲ್ಲಾಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಸಾಂಸ್ಕೃತಿಕ ಸಮುಚ್ಛಯಕ್ಕೆ ಅಗತ್ಯ ಭೂಮಿ ಮತ್ತು ಕಟ್ಟಡಗಳನ್ನು ನಿರ್ಮಿಸಿಕೊಡುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾಡಳಿತ ಕಾರ್ಯೋನ್ಮುಖರಾಗಬೇಕು” ಎಂದು ಮನವಿ ಮಾಡಿದರು.

ಈ ವೇಳೆ ರಾಮನಗರ ತಾ ಪಂ ಇಒ ಪ್ರದೀಪ್, ತಾಲೂಕು ಅಧ್ಯಕ್ಷ ಬಿ ಟಿ ದಿನೇಶ್, ಡಾ.ಬೈರೇಗೌಡ ಹಾಗೂ ಪದಾಧಿಕಾರಿಗಳು, ಮಾಗಡಿ ತಾಲೂಕಿನ ಇ ಒ ಡಿ ಜೈಪಾಲ್, ಕಸಾಪ ಪದಾಧಿಕಾರಿ ಸಮದ್, ಯುವ ಕರ್ನಾಟಕ ಸಂಘಟನೆಯ ಸಿ ಕುಮಾರ್, ರಾಮಣ್ಣ, ತುಂಬೇನಹಳ್ಳಿ ಪುನೀತ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...