ಶಿವಮೊಗ್ಗ | ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ

Date:

ರಾಜ್ಯ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು.

ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ (ಏ.11)ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಪ್ರತಿವ್ಯಕ್ತಿಗೂ ಅಗತ್ಯ ಪ್ರಮಾಣದ ಆಹಾರ ದೊರೆಯಬೇಕು ಎಂದು 2013ರಲ್ಲಿ ಯುಪಿಎ ಸರ್ಕಾರವು ‘ಆಹಾರ ಭದ್ರತಾ ಕಾಯ್ದೆʼಯನ್ನು ಜಾರಿಗೆ ತಂದಿತ್ತು. ದೇಶದ ಜನರಿಗೆ ಅಗತ್ಯವಿರುವಷ್ಟು ಆಹಾರ ಧಾನ್ಯಗಳನ್ನು ಖರೀದಿಸಿ, ಎಲ್ಲಾ ಕಾಲಕ್ಕೂ ಲಭ್ಯವಿರುವಂತೆ ನೋಡಿಕೊಳ್ಳುವ ಹೊಣೆ ಕೇಂದ್ರ ಸರ್ಕಾರದ್ದು ಮತ್ತು ಅರ್ಹರನ್ನು ಗುರುತಿಸಿ, ಅವರಿಗೆ ಪಡಿತರವನ್ನು ವಿತರಿಸುವ ಹೊಣೆ ರಾಜ್ಯ ಸರ್ಕಾರದ್ದು ಎಂದು ಈ ಕಾಯ್ದೆ ಹೇಳುತ್ತದೆ. ಇದಕ್ಕೆ ಬಿಜೆಪಿ ನಾಯಕರು ವಿರೋಧವೊಡ್ಡಿದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬುದ್ಧಿ ಕಲಿಸಬೇಕಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಹರಸಬೇಕು ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ರಾಜ್ಯದ ಪಂಚ ಗ್ಯಾರಂಟಿಯೊಂದಿಗೆ 25 ಭರವಸೆಗಳನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದರು.

ಇದರಲ್ಲಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳ ಮೀಸಲಾತಿಯನ್ನು ಶೇ. 50ಕ್ಕೆ ಹೆಚ್ಚಿಸಲು ಕಾನೂನು ತಿದ್ದುಪಡಿ ತರಲಾಗುತ್ತದೆ. ಎಲ್ಲಾ ಜಾತಿ ಮತ್ತು ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಒದಗಿಸಲಾಗುವುದು ಎಂದರು.

ಡಿಪ್ಲೊಮಾ ಅಥವಾ ಪದವಿ ಹೊಂದಿರುವ 25 ವರ್ಷದೊಳಗಿನವರಿಗೆ ಒಂದು ವರ್ಷದ ಅಪ್ರೆಂಟಿಶಿಪ್ ಒದಗಿಸಲು ಕಾಯ್ದೆ ಜಾರಿಗೊಳಿಸಲಾಗುವುದು. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಜಾರಿಗೊಳಿಸಲಾಗುವುದು ಎಂದರು.

ನಟ ಶಿವರಾಜಕುಮಾರ್ ಮಾತನಾಡಿ, ನಾವು ಮಾಡುವ ಕಾಯಕದಲ್ಲಿ ಸ್ಪಷ್ಟತೆ ಇರಬೇಕು. ಇದರಿಂದ, ಉತ್ತಮ ಫಲಿತಾಂಶ ಪಡೆಯಬಹುದು. ಇಲ್ಲಿ ಸಂಸದ ಸ್ಥಾನಕ್ಕೆ ಗೀತಾ ಅವರು ಸ್ಪರ್ಧಿಸಿದ್ದಾರೆ. ಗೀತಾ ಅವರು ಗೆದ್ದ ಬಳಿಕ ಆ ಸ್ಥಾನಕ್ಕೆ ಖಂಡಿತ ನ್ಯಾಯ ಒದಗಿಸಿಕೊಡುವರು ಎನ್ನುವ ನಂಬಿಕೆ ನನಗಿದೆ. ಆದ್ದರಿಂದ, ಈ ಚುನಾವಣೆಯಲ್ಲಿ ಮತ ನೀಡಿ ಅವಕಾಶ ಕಲ್ಪಿಸಿಕೊಡಬೇಕು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ತಾಲೂಕಿನ ಬೇಗೂರು, ಹೊಸೂರು, ಗೊಗ್ಗ, ಜಕ್ಕಿನ ಕೊಪ್ಪದ ಬಳ್ಳೂರು ವೃತ್ತ, ಕಾಗಿನೆಲ್ಲಿ- ಮಾರವಳ್ಳಿ, ಮುತ್ತಿನ ಕೋಟೆ, ನೆಲವಾಗಿಲು-ಗೋದನಕೊಪ್ಪದ ಹೊಸ ಮುಗಳಗೆರೆ, ಅಂಬಾರ ಗಪ್ಪದ ತಮ್ಮಡಿ ಹಳ್ಳಿ, ಹಾರೋಗೊಪ್ಪ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಸಿದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬಗನಗಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಭರ್ಮಜ್ಜ, ಕೆಪಿಸಿಸಿ ಸದಸ್ಯ ವೈ.ಎಚ್. ನಾಗರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗೌಡ, ಗೋಣಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಂ, ಭಂಡಾರಿ ಮಾಲತೇಶ್, ರಾಘವೇಂದ್ರ ನಾಯ್ಕ್, ಶಿವುನಾಯ್ಕ್, ಕುಮಾರ್ ನಾಯ್ಕ್, ನಗರದ ಮಹದೇವಪ್ಪ, ಹುಸೇನ್ ಖಾನ್ ಸಾಬ್, ರಮೇಶಪ್ಪ ಮಾನಕ್ಕಿ, ಬಗನಕಟ್ಟೆ ಸುರೇಶ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...