ಬೀದರ್‌ | ಜ್ಞಾನದಿಂದ ಸಮಾಜದ ನ್ಯೂನತೆ ಸರಿಪಡಿಸಿದವರು ದಾಸರು : ಶಿವರಾಜ ಮಠ

Date:

ಲೌಕಿಕ ಹಿತದ ಜೊತೆಗೆ ಪಾರಮಾರ್ಥಿಕ ಸತ್ಯದ ಕಡೆಗೆ ಶ್ರೀಸಾಮಾನ್ಯರ ಮನಸ್ಸು ಆಕರ್ಷಿಸಿದವರು ದಾಸರು, ಜಗದ ಏಳಿಗೆಯನ್ನು ಕನ್ನಡದ ಸಿರಿಗಂಧದ ಕೀರ್ತನೆ, ಸಾಹಿತ್ಯದ ಮುಖಾಂತರ ಮಾಡಿದ್ದಾರೆ ಎಂದು ಬಿ.ವ್ಹಿ.ಬಿ ಮಹಾವಿದ್ಯಾಲಯದ ಇತಿಹಾಸ ವಿಭಾಗ ಮುಖ್ಯಸ್ಥ ಪ್ರೊ ಶಿವರಾಜ ಜಿ. ಮಠ ನುಡಿದರು.

ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತು ವತಿಯಿಂದ ಬೀದರ ನಗರದ ಶ್ರೀಮತಿ ಚಿಕ್ಕಮಣಿ ಡಿ ದೇವರಾಜ ಅರಸ್ ಪ್ರೌಢ ಶಾಲೆಯಲ್ಲಿ ಪುರಂದರದಾಸರ ಆರಾಧನೆ ನಿಮಿತ್ಯ ʼದಾಸರೆಂದರೆ ಪುರಂದರದಾಸರಯ್ಯʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಹರಿದಾಸರು ಜ್ಞಾನದ ಮೂಲಕ ಸಮಾಜದಲ್ಲಿ ಅಡಗಿರುವ ನ್ಯೂನತೆ ಮತ್ತು ಅಂಧಕಾರವನ್ನು ಹೊಗಲಾಡಿಸಿ, ಭಕ್ತಿರಸವನ್ನು ಚಿಮ್ಮಿಸಿ, ಸಾಮಾನ್ಯ ಸಾಧಕನ ಜೀವನ ಸಮೃದ್ಧಗೊಳಿಸಲು ಶ್ರಮಿಸಿದ್ದಾರೆ” ಎಂದರು.

ಉಪನ್ಯಾಸಕ ಬಸವರಾಜ ಬಿರಾದಾರ ಅವರು ʼದಾಸರೆಂದರೆ ಪುರಂದರದಾಸರಯ್ಯʼ ವಿಷಯ ಕುರಿತು ಉಪನ್ಯಾಸ ನೀಡಿ, “ಪುರಂದರದಾಸರು ಜನಪದ ಹಾಗೂ ಮಾನವ ಜನಾಂಗದ ಕವಿಗಳು. ಅವರು ತಮ್ಮ ಬಾಳಿನುದ್ದಕ್ಕೂ ಅನುಭವಿಸದ್ದನ್ನು ಪ್ರಮಾಣಿಕವಾಗಿ ಕೀರ್ತನೆಯಲ್ಲಿ ಅನಾವರಣಗೊಳಿಸಿದ್ದಾರೆ. ಜನರಲ್ಲಿಯ ಒಣ ಡಂಬಾಚಾರ, ಕಂದಾಚಾರ, ಅಪನಂಬಿಕೆಗಳು ಹೊಗಲಾಡಿಸುವ ಶಕ್ತಿಯುತವಾದ ಜೀವನ ಮೌಲ್ಯಗಳು ಸಮಾಜಕ್ಕೆ ನೀಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಯ ಮುಖ್ಯಗುರು ವಿಜಯಕುಮಾರ ಪಾಟಿಲ್ ಮಾತನಾಡಿ, “ಹರಿದಾಸರ ಜೀವನ ಮತ್ತು ಸಂದೇಶಗಳು ವಿಧ್ಯಾರ್ಥಿಗಳಿಗೆ ಪರಿಚಯಿಸುವ ಪರಿಷತ್ತಿನ ಕಾರ್ಯ ಶ್ಲಾಘನೀಯವಾಗಿದೆ” ಎಂದರು

ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಡಾ.ರವೀಂದ್ರ ಲಂಜವಾಡಕರ ಅಧ್ಯಕ್ಷತೆ ವಹಿಸಿ ಮಾತನಾಡಿ, “ಹರಿದಾಸರು ತುಂಗಾಭದ್ರಾ ತೀರದಲ್ಲಿ ಕೀರ್ತನಾ ತರಂಗಿಣಿಯನ್ನು ಪ್ರವಾಹಿಸುವಂತೆ ಮಾಡಿ, ಲೋಕ ಜೀವನವನ್ನು ಪಾವನಗೊಳಿಸಿ, ಕನ್ನಡ ಸಾಹಿತ್ಯ ಸಂಪತ್ತಿಗೊಂದು ಉನ್ನತ ಸ್ಥಾನವನ್ನು ಒದಗಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಮಾದ; ಪ್ರಯಾಣಿಕರ ʼದಾರಿ ತಪ್ಪಿಸುವʼ ನಾಮಫಲಕ!

ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳಾದ ಪ್ರತಿಭಾ, ಪ್ರ‍್ರಿಸ್ಕಲಾ ಕೀರ್ತನೆ ಗಾಯನ ಮಾಡಿದರು. ಮಹೇಬೂಬ್ ಉಸ್ತಾದ ನಿರೂಪಿಸಿದರು, ಪ್ರಕಾಶ ಬಿರಾದಾರ ಸ್ವಾಗತಿಸಿದರು, ಮಹ್ಮದ ಆರೀಫ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...