ಸಂವಿಧಾನ ರಕ್ಷಣೆಗೆ ಸ್ಲಂ ಜನರ ಮತ; ಬೈಕ್ ರ‍್ಯಾಲಿ ಸಮಾರೋಪ

Date:

ಜಾತಿ ಜನಗಣತಿ ಮೂಲಕ ಸಂಪತ್ತನ್ನು ಬಡವರಿಗೆ ಹಂಚಿಕೆ ಮಾಡುವುದೇ ಕಾಂಗ್ರೇಸ್‌ನ ಗುರಿ. ದೇಶದಲ್ಲಿ ಬದಲಾವಣೆ ತರುವ ವಾತಾವರಣ ನಿರ್ಮಾಣವಾಗಿದ್ದು ಸಂವಿಧಾನದ ಜಾಗೃತಿಗಾಗಿ ಅಸಂಖ್ಯಾತ ಜನಸಮೂಹ ಮುಂದಾಗಿದೆ. 400 ಸೀಟ್‌ಗಳು ಗೆದ್ದಲ್ಲಿ ಸಂವಿಧಾನ ಬದಲಾಯಿಸುತ್ತೇವೆ ಎಂಬ ಬಿಜೆಪಿರವರ
ಹೇಳಿಕೆಗೆ ಇದು ಉತ್ತರವಾಗಿದೆ ಎಂದು ಮಾಜಿ ಶಾಸಕ ಡಾ.ರಫೀಕ್ ಅಹಮದ್ ಹೇಳಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಏಪ್ರಿಲ್ 6ರಿಂದ ಏಪ್ರಿಲ್ 23ರವರೆಗೆ ‘ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ’ ಜಾಗೃತಿ ಜಾಥಾ ನಡೆದಿದ್ದು, ಮಂಗಳವಾರ, ತುಮಕೂರಿನಲ್ಲಿ ಸಮಾರೋಪಗೊಂಡಿದೆ. ಸಮಾರೋಪ ಸವೇಶದಲ್ಲಿ ಡಾ. ರಫೀಕ್ ಅಹಮದ್ ಮಾತನಾಡಿದರು. ” ತುಮಕೂರು, ಮಧುಗಿರಿ, ಕೊರಟಗೆರೆ, ಗುಬ್ಬಿ ಹಾಘೂ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 120 ಸ್ಲಂಗಳಲ್ಲಿ ಸಭೆಗಳನ್ನು ನಡೆಸಲಾಗಿದೆ. ಸಂವಿಧಾನ ರಕ್ಷಣೆಗಾಗಿ ಬಿಜೆಪಿ ಸೋಲಿಸಿ ಕಾಂಗ್ರೇಸ್‌ನ್ನು ಬೆಂಬಲಿಸುವಂತೆ ರಾಜಕೀಯ ಪ್ರಜ್ಞೆ ಮೂಡಿಸುವಲ್ಲಿ ಜಾಥಾ ಯಶಸ್ವಿಯಾಗಿದೆ” ಎಂದರು.

“ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಾಸಿದ್ದವಾಗಿದೆ. ಜಾತಿ ಜನಗಣತಿ ನಡೆಸಿ ದೇಶದಲ್ಲಿರುವ ದಲಿತರು, ಹಿಂದುಳಿದವರು, ಮಹಿಳೆಯರು, ಅಲೆಮಾರಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ದೇಶದ ಸಂಪತ್ತನ್ನು ಹಂಚಿಕೆ ಮಾಡುವ ಪಾಲುದಾರಿಕೆಯನ್ನು ಖಾತ್ರಿಗೊಳಿಸುವ ಮೂಲಕ ಸಂವಿಧಾನವನ್ನು ಎತ್ತಿಹಿಡಿಯುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಸ್ಲಂ ಜನರ ಪ್ರಣಾಳಿಕೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್ ರಾಜಣ್ಣ, ಕಾಂಗ್ರೆಸ್‌ ಅಭ್ಯರ್ಥಿ ಎಸ್.ಪಿ ಮುದ್ದಹನುಮೇಗೌಡ ಹಾಘೂ ಪ್ರಗತಿಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳ ಗಮನ ಸೆಳೆದು ಸಾರ್ವಜನಿಕರಿಂದ ಮೆಚ್ಚುಗೆ ಪಡೆಯಲಾಗಿದೆ” ಎಂದು ತಿಳಿಸಿದರು.

ಕಾಂಗ್ರೆಸ್‌ ಮುಖಂಡ ಇಕ್ಬಾಲ್ ಅಹ್ಮದ್ ಮಾತನಾಡಿ, “ಜಿಲ್ಲೆಯಲ್ಲಿ ಕೊಳಗೇರಿ ಸಮಿತಿ ತನ್ನದೇಯಾದ ಜನರ ಸಂಘಟನೆ ಹೊಂದಿದೆ. ತುಮಕೂರಿನಲ್ಲಿ ಸಂಚಾರಿಸಿದ ಭಾರತ್‌ ಜೋಡೊ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ಡಾ.ಜಿ.ಪರಮೇಶ್ವರ್ ಸಮುಖದಲ್ಲಿ ಸ್ಲಂ ಜನಾಂದೋಲನ ಸಂಘಟನೆಯ ಎ.ನರಸಿಂಹಮೂರ್ತಿ ಅವರು ಸಲ್ಲಿಸಿದ ಸ್ಲಂ ಜನರ 10 ಒತ್ತಾಯಗಳಲ್ಲಿ ಬಹುತೇಕ ಅಂಶಗಳನ್ನು ಕಾಂಗ್ರೇಸ್‌ನ ನ್ಯಾಯಪತ್ರ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ನಗರ ಉದ್ಯೋಗ ಖಾತ್ರಿ, ಆರೋಗ್ಯದ ಹಕ್ಕು, ಎಸ್.ಸಿ/ಎಸ್.ಟಿ ಜನಸಂಖ್ಯೆಗನುಗುಣವಾಗಿ ಕಾಯಿದೆ ಜಾರಿ ಅಸಂಘಟಿತ ಕಾರ್ಮಿಕರ ಕಲ್ಯಾಣ ಸೇರಿದಂತೆ ವಸತಿ ಹಕ್ಕು ಕಾಯಿದೆಯನ್ನು ಜಾರಿಗೊಳಿಸುವ ಭರವಸೆ ನೀಡಿದೆ. ಹಾಗಾಗಿ, ಸ್ಲಂ ಜನರ ಬಹುದಿನಗಳ ಒತ್ತಾಯಗಳನ್ನು ಕಾಂಗ್ರೆಸ್‌ ಈಡೇರಿಸಲು ಮುಂದಾಗಿರುವುದರಿಂದ ನಮ್ಮ ಪಕ್ಷವನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ನರಸಿಂಹಮೂರ್ತಿ ಮಾತನಾಡಿ, “ತುಮಕೂರು ಜಿಲ್ಲೆಯಲ್ಲಿ ಪ್ರಾರಂಭವಾಗಿರುವ ‘ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ’ ಜಾಗೃತಿ ನಮ್ಮ ಜನರಲ್ಲಿ ರಾಜಕೀಯ ಪ್ರಜ್ಞೆ ತರುವಲ್ಲಿ ಯಶಸ್ವಿಯಾಗಿದೆ. ವಿಶೇಷವಾಗಿ ಯುವಜನರನ್ನು ಸಂವಿಧಾನದತ್ತ ಆಲೋಚಿಸಲು ಅರಿವು ನೀಡಿದ್ದು ಇಡೀ ರಾಜ್ಯದಲ್ಲಿ ಸ್ಲಂ ಜನರ ರಾಜಕೀಯ ತಿಳಿವಳಿಕೆ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕಾಗಿ ಸಾವಿರಾರು ಕಾರ್ಯಕರ್ತರು ಪ್ರತಿದಿನ ಕೆಲಸ ಮಾಡುತ್ತಿದೆ. ಈ ಬಾರಿ ದೇಶದಲ್ಲಿ ಸಂವಿಧಾನವನ್ನು ರಕ್ಷಿಸುವ ‘ಇಂಡಿಯಾ’ ಕೂಟದ ಸರ್ಕಾರ ಅಸ್ತಿತ್ವಕ್ಕೆ ಬರುವ ಸೂಚನೆ ಇದೆ” ಎಂದರು.

ಸಮಾವೇಶದಲ್ಲಿ ಮೆಹಬೂಬ್‌ಸಾಬ್, ಸೈಯದ್ ಅಲ್ತಾಫ್, ಸಿದ್ದಪ್ಪ, ಸ್ವಾಮಿನಾಥ್, ಅರುಣ್, ಶಂಕ್ರಯ್ಯ ,ಕೃಷ್ಣಮೂರ್ತಿ, ತಿರುಮಲಯ್ಯ, ಜಾಬೀರ್‌ಖಾನ್, ಕಣ್ಣನ್, ಮುಬಾರಕ್, ಚಕ್ರಪಾಣಿ, ಪುಟ್ಟರಾಜು, ರಂಗನಾಥ್, ಸಿದ್ದರಾಜು, ರಾಜು, ಚಿರಂಜೀವಿ, ನರಸಿಂಹಮೂರ್ತಿ, ಮಂಜುನಾಥ್, ಮುತ್ತುರಾಜ್, ಶಾಬುದ್ದಿನ್, ಶಂಕರ್‌ಗೌಡ, ಬಸವರಾಜು, ಕಾಶಿರಾಜ್,ಮಾಧವನ್, ಶಾರದಮ್ಮ, ಸುಹೇಲ್ ಮುಂತಾದವರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...