ರಾಯಚೂರು | ಸ್ಲಂ ವಿದ್ಯಾಥಿಗಳು ಬೌದ್ಧಿಕ ಜ್ಞಾನದ ಕಡೆಗೆ ಹೆಚ್ಚು ಆದ್ಯತೆ ನೀಡಬೇಕು : ಜನಾರ್ದನ ಹಳ್ಳಿಬೆಂಚಿ

Date:

“ಜಗತ್ತನ್ನು ಜ್ಞಾನ ಸಂಪತ್ತು ಇಂದು ಆಳುತ್ತಿದೆ. ಸಂಘಟಿಸುವ ಇತರೆ ಸಂಪತ್ತುಗಳಿಗಿಂತ ಜ್ಞಾನ ಬಹಳ ಮುಖ್ಯವಾಗಿದೆ. ಹಾಗಾಗಿ, ಸ್ಲಂ ವಿದ್ಯಾಥಿಗಳು ಬೌದ್ಧಿಕ ಜ್ಞಾನದ ಕಡೆ ಹೆಚ್ಚು ಆದ್ಯತೆ ನೀಡಬೇಕು” ಎಂದು ಸ್ಲಂ ಜನಾಂದೋಲನ ಕರ್ನಾಟಕ ವೇದಿಕೆಯ ಜನಾರ್ದನ ಹಳ್ಳಿಬೆಂಚಿ ಹೇಳಿದರು.

ರಾಯಚೂರು ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಸ್ಲಂ ಜನಾಂದೋಲನ ಕರ್ನಾಟಕ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯಿಂದ 2023-24 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಸ್ಲಂ ನಿವಾಸಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕಳೆದ 12 ವರ್ಷಗಳಿಂದ ನಿರಂತರವಾಗಿ ಪ್ರತಿಭಾನ್ವಿತ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ. ಸ್ಲಂ ವಿದ್ಯಾರ್ಥಿಗಳು ಯಾವುದೇ ರೀತಿಯ ಮೂಲಭೂತ ಸೌಕರ್ಯವಿಲ್ಲದಿದ್ದರೂ ಹೆಚ್ಚು ಅಂಕಗಳನ್ನು ಪಡೆಯಲು ಪ್ರೋತ್ಸಾಹಿಸಿದ್ದೇವೆ . ವಂಚಿತ ಸಮುದಾಯದಲ್ಲಿ ಶಿಕ್ಷಣದ ಜಾಗೃತಿ ಹೆಚ್ಚಾಗದೆ ಇದಕ್ಕೆ ಪೋಷಕರು ಸಹ ಕಾರಣೀಕರ್ತರಾಗಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಲಂ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಮುಂದಾಗುತ್ತಿಲ್ಲ. ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಯಿಂದಲೇ ದೊಡ್ಡ ಕನಸು ನುಚ್ಚು ನೂರಾಗುತ್ತಿದೆ. ನಮ್ಮ ವಿದ್ಯಾರ್ಥಿಗಳಿಗೆ ಉನ್ನತ ಸ್ಥಾನಕ್ಕೆ ಜಾತಿ, ಬಡತನ ಹಾಗೂ ಸ್ಲಂ ಜನರು ಎಂದು ಕಳಂಕ ಅಡ್ಡಿಯಾಗುತ್ತಿದೆ. ಈ ಚಿಂತನೆಯಿಂದ ಮಕ್ಕಳು ಹೊರಬರಬೇಕು ಎಂಬ ಉದ್ದೇಶಕ್ಕೆ ಹಲವಾರು ಕಾರ್ಯಕ್ರಮಗಳನ್ನು ನಿರ್ವಹಿಸುತ್ತಾ ಸಾಗಿದ್ದೇವೆ ಎಂದು ಜನಾರ್ದನ ಹಳ್ಳಿಬೆಂಚಿ ತಿಳಿಸಿದರು.

ಮನಸ್ಸಿನಲ್ಲಿ ಕೀಳರಿಮೆಯನ್ನು ಮೊದಲು ಬಿಡಬೇಕು. ಇದರಿಂದ ನಾವು ಘನತೆಯ ಸ್ವಾಭಿಮಾನದ ಜೀವನ ನಡೆಸಬಹುದು. ನಮ್ಮ ವಿವೇಚನೆ ಶಿಕ್ಷಣದಿಂದ ಮಾತ್ರ ಸಾಧ್ಯ.ವಿದ್ಯಾರ್ಥಿಗಳು ಹೆಚ್ಚಾಗಿ ಹೊಸ ಆವಿಷ್ಕಾರಗಳ ಕಡೆಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ತುಮಕೂರು | ಒಟಿಎಸ್‌ಗೆ ಅವಕಾಶ ನೀಡದೆ ಟ್ರ್ಯಾಕ್ಟರ್ ಹರಾಜು : ಬ್ಯಾಂಕ್ ಕ್ರಮ ವಿರೋಧಿಸಿ ಆ. 12ಕ್ಕೆ ರೈತ ಸಂಘದಿಂದ ಪ್ರತಿಭಟನೆ

ಮುಖಂಡರುಗಳಾದ ನಗರಸಭೆ ಸದಸ್ಯ ಮಣಿಕಂಠ , ಖಾನಾಪುರ ಗ್ರಾಮ ಪಂಚಾಯತ್ ಸದಸ್ಯ ಶಾಲಂಸಾಬ ,ಅನಿಲ ಕುಮಾರ್ , ಯಮನಪ್ಪ , ಬಸವರಾಜ್ ಹೊಸೂರ , ಮಾಧವರೆಡ್ಡಿ, ಮಹೇಶ , ಚಂದ್ರು ,ಪ್ರವೀಣ , ಪವನ, ಎಸ್ ರಾಜು , ನಿತಿನ್ ,ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...