ಕನಕಪುರ | ಉದಾತ್ತ ರಾಜಕಾರಣಿಗಳ ಸಾಲಿನಲ್ಲಿ ಎಸ್ ಎಂ ಕೃಷ್ಣ ಕೂಡ ಒಬ್ಬರು: ಕುಮಾರಸ್ವಾಮಿ

Date:

ನಾಡ ಚೇತನ ಎಸ್ ಎಂ ಕೃಷ್ಣ ಅವರ ಅಗಲಿಕೆಯಿಂದ ಕರ್ನಾಟಕ ಅಮೂಲ್ಯ ಸಂಪತ್ತನ್ನು ಕಳೆದುಕೊಂಡಂತಾಗಿದೆ ಎಂದು ಕನಕಪುರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಕನಕಪುರದ ಚನ್ನಬಸಪ್ಪ ಸರ್ಕಲ್ ನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನಾಯಕರ ಸಮಕ್ಷಮದಲ್ಲಿ ಆಯೋಜಿಸಿದ್ದ ಎಸ್ ಎಂ ಕೃಷ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕರ್ನಾಟಕದ ಉದಾತ್ತ ರಾಜಕಾರಣಿಗಳ ಸಾಲಿನಲ್ಲಿ ನಿಲ್ಲಬಲ್ಲ ಕೆಲವೇ ರಾಜಕಾರಣಿಗಳ ಪೈಕಿ ಎಸ್ ಎಂ ಕೃಷ್ಣ ಕೂಡ ಒಬ್ಬರಾಗಿದ್ದು, ಸಂಸದರಾಗಿ, ವಿದೇಶಾಂಗ ಮಂತ್ರಿಯಾಗಿ, ಮುಖ್ಯಮಂತ್ರಿ ಯಾಗಿ, ಉಪಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ ಎಲ್ಲಾ ಹುದ್ದೆಗಳಿಗೂ ಘನತೆ ತಂದ ಧೀಮಂತ ರಾಜಕಾರಣಿಯಾಗಿದ್ದು, ಯಾವುದೇ ವಿವಾದಕ್ಕೆ ಸಿಲುಕದ ಪ್ರಶ್ನಾತೀತ , ಅಜಾತಶತೃ ರಾಜಕಾರಣಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಇಂದು ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಲು ಅವರ ಶ್ರಮವನ್ನು ಮರೆಯುವಂತಿಲ್ಲ. ಉನ್ನತ ವಿದ್ಯಾಭ್ಯಾಸ ಕಲಿತವರು ಉತ್ತಮ ಉದ್ಯೋಗಾವಕಾಶಕ್ಕಾಗಿ ವಿದೇಶಕ್ಕೆ ತೆರಳುತ್ತಿದ್ದ ಕಾಲಘಟ್ಟವನ್ನು ಬದಲಿಸಿ ಇಲ್ಲೇ ಉದ್ಯೋಗಕ್ಕಾಗಿ ಹೊರರಾಜ್ಯದವರು, ವಿದೇಶಿಯರು ಬೆಂಗಳೂರನ್ನೇ ಆಶ್ರಯಿಸುವಂತೆ ಮಾಡಿ ಹೊಸ ಭಾಷ್ಯ ಬರೆದ ಕೀರ್ತಿ ಎಸ್.ಎಂ.ಕೃಷ್ಣ ರವರಿಗೆ ಸಲ್ಲುತ್ತದೆ. ಅವರು ಮುಖ್ಯಮಂತ್ರಿಯಾಗಿದ್ದಂತಹ ಕಾಲದಲ್ಲಿ ದೇಶ ಕಂಡೂ ಕೇಳರಿಯದ ಬರಗಾಲ ಆವರಿಸಿತ್ತು, ವರನಟ ರಾಜ್ ಕುಮಾರ್ ಅವರನ್ನು ಕುಖ್ಯಾತ ನರಹಂತಕ ವೀರಪ್ಪನ್ ಅಪಹರಿಸಿ ನೂರಾರು ದಿನಗಳ ಕಾಲ ಸುಪರ್ದಿಯಲ್ಲಿಟ್ಟುಕೊಂಡ ಕಾರಣ ಅಷ್ಟೂ ದಿನಗಳ ಕಾಲ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು ಇಂತಹ ದುರ್ಗಮ ಸನ್ನಿವೇಶವನ್ನು ಧೃತಿಗೆಡದೆ ಸಮರ್ಥವಾಗಿ ಎದುರಿಸಿದ ಕೀರ್ತಿ ಎಸ್.ಎಂ.ಕೃಷ್ಣ ರವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 12 11 at 3.08.23 PM

ಇಂದು ಕರ್ನಾಟಕ ಸುಭೀಕ್ಷವಾಗಿದ್ದು , ನಮ್ಮ ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳುತ್ತಿದ್ದಾರೆ ಎಂದರೆ ಅದು ಎಸ್. ಎಂ ಕೃಷ್ಣ ಅವರ ಕೊಡುಗೆಯಾಗಿದೆ. ಅವರ ಅನುಭವ ಹಾಗೂ ಮಾರ್ಗದರ್ಶನವನ್ನು ಇಂದಿನ ರಾಜಕಾರಣಿಗಳು ಬಳಸಿಕೊಳ್ಳದೆ ಹೋದುದು ದುರ್ದೈವದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಅವರ ಜೀವನ ಚರಿತ್ರೆ, ಹಾಗೂ ಸಾಧನೆಯನ್ನು ಪಠ್ಯ ಪುಸ್ತಕ ಗಳಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ಕಾರ್ಯ ಕೈಗೊಳ್ಳಬೇಕೆಂದು ಪ್ರಗತಿಪರ ಸಂಘಟನೆಯು ಸರಕಾರವನ್ನು ಆಗ್ರಹಿಸುತ್ತದೆ ಎಂದರು.

ಕನಕಪುರ ತಾಲೂಕು ಕಸಾಪ ಅಧ್ಯಕ್ಷರಾದ ಶಿವನಹಳ್ಳಿ ಶಿವಲಿಂಗಯ್ಯ ಮಾತನಾಡಿ, ಎಸ್.ಎಂ.ಕೃಷ್ಣನವರು ಎಲ್ಲ ಜಾತಿ ವರ್ಗಗಳ ಏಳಿಗೆಗಾಗಿ ಶ್ರಮಿಸಿದ್ದು ಬಿಸಿಯೂಟ, ಯಶಸ್ವಿನಿಯಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದ ಹರಿಕಾರರಾಗಿದ್ದು, ಸಾಹಿತ್ಯ ಕ್ಷೇತ್ರವನ್ನು ಪೋಷಿಸಿದ ಮಹನೀಯರಾಗಿದ್ದಾರೆ. ಇಂತಹ ಮಹನೀಯರ ಬದುಕಿನಿಂದ ಕರುನಾಡು ಕೀರ್ತಿಶಾಲಿಯಾಗಿದೆ ಎಂದರು.

ಬಹುಜನ ಜಾಗೃತಿ ಜಿಲ್ಲಾಧ್ಯಕ್ಷರಾದ ನೀಲಿ ರಮೇಶ್ ಮಾತನಾಡಿ, ಕರ್ನಾಟಕದ ಅಭಿವೃದ್ಧಿ ಹರಿಕಾರ ಎಸ್.ಎಂ ಕೃಷ್ಣ ರವರ ಅಕಾಲಿಕ ಸಾವು ತುಂಬಲಾರದ ನಷ್ಟ. ಇಂದು ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮೆಟ್ರೋ ಬಹುಪಾಲು ಉಪಯುಕ್ತ ಯೋಜನೆಯಾಗಿದ್ದು ಇದರ ಯಶಸ್ಸು ಎಸ್. ಎಂ. ಕೃಷ್ಣ ರವರಿಗೆ ಸೇರಬೇಕಾಗಿದೆ. ಮುಂದಿನ ನೂರು ವರ್ಷಗಳ ಮೂಲಭೂತ ಸೌಕರ್ಯಗಳನ್ನು ಯೋಜನೆಯ ಮೂಲಕ ಕಲ್ಪಿಸುವಂತಹ ದೂರದೃಷ್ಟಿಯುಳ್ಳ ನಾಯಕರಾಗಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಗದಗ | ಅಧಿಕಾರಿಗಳ ನಿರ್ಲಕ್ಷ್ಯ: ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟ ಇಟಗಿ ಬಸ್ ನಿಲ್ದಾಣ!

ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಸಾಹಿತಿ ಕೂ.ಗಿ.ಗಿರಿಯಪ್ಪ, ನಗರಸಭಾ ಸದಸ್ಯ ಸ್ಟುಡಿಯೋ ಚಂದ್ರು, ಜೀವನ ಟ್ರಸ್ಟ್ ನ ಪ್ರಶಾಂತ್ ಹೊಸದುರ್ಗ, ಚೀರಣಕುಪ್ಪೆ ರಾಜೇಶ್, ಕನ್ನಡ ಭಾಸ್ಕರ್, ಮಿಲ್ಟ್ರಿ ರಾಮಣ್ಣ, ಮಿಲ್ಟ್ರಿ ದೇವರಾಜು, ಕಿಶೋರ್ ಬನ್ನಿಕುಪ್ಪೆ ಪ್ರಕಾಶ್, ಸೋಮಣ್ಣ, ಶಿವಕುಮಾರ್, ಉಮಾಶಂಕರ್, ಆನಂದ್, ರಮೇಶ್ ಹಾಗೂ ಇತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...