ಯಾದಗಿರಿ | ಸವರ್ಣೀಯರಿಂದ ದಲಿತರಿಗೆ ಬಹಿಷ್ಕಾರ: ಜಿಲ್ಲಾಡಳಿತದಿಂದ ಶಾಂತಿ ಸಭೆ

Date:

14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿತ್ತು.

ಈ ವಿಚಾರವು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆಯೇ ಎಚ್ಚೆತ್ತ ಯಾದಗಿರಿ ಜಿಲ್ಲಾಡಳಿತವು ಗ್ರಾಮಕ್ಕೆ ಭೇಟಿ ನೀಡಿ, ಶಾಂತಿ ಸಭೆ ನಡೆಸಿತು.

ಸವರ್ಣೀಯರಿಂದ ದಲಿತರಿಗೆ ಬಹಿಷ್ಕಾರ ಹಾಕಿರುವ ವಿಚಾರ ತಿಳಿದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರ ನಿರ್ದೇಶನ ಮೇರೆಗೆ ಅಧಿಕಾರಿಗಳು ಶುಕ್ರವಾರ ಸಂಜೆ ಗ್ರಾಮಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳ ಸಹಿತ ಹಿರಿಯ ಅಧಿಕಾರಿಗಳು, ಎರಡೂ ಸಮುದಾಯಗಳ ನಡುವೆ ಶಾಂತಿ ಸಭೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
photo 6280495441485348383 y

“ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಬಹಿಷ್ಕಾರ ಹಾಕುವುದು ದೇಶದ ಕಾನೂನಿನ ಉಲ್ಲಂಘನೆಯಾಗಿದೆ. ಈ ರೀತಿಯ ನಡೆಯು ಮುಂದಿನ ದಿನಗಳಲ್ಲಿ ನಡೆಯಬಾರದು. ಜಾತಿ ಪದ್ಧತಿ ಹೋಗಲಾಡಿಸಿ ಸಹಬಾಳ್ವೆಯ ಜೀವನಕ್ಕೆ ಜನರು ಮುಂದಾಗಬೇಕು” ಎಂದು ಪೊಲೀಸ್ ಅಧಿಕಾರಿಗಳು ಕಿವಿಮಾತು ಹೇಳಿದ್ದಾರೆ.

ಇದಕ್ಕೆ ಸ್ಪಂದಿಸಿರುವ ಗ್ರಾಮಸ್ಥರು ತಪ್ಪನ್ನು ತಿದ್ದಿಕೊಂಡು ಕೂಡಿ ಬಾಳುವುದಾಗಿ ಹೇಳಿದ್ದಾರೆ. ಶಾಂತಿ ಸಭೆಯ ಬಳಿಕ ಪರಸ್ಪರ ಎರಡೂ ಸಮುದಾಯದ ಜನರನ್ನು ಹಸ್ತಲಾಘವ ನಡೆಸಿದ ಅಧಿಕಾರಿಗಳು, ಗ್ರಾಮದಲ್ಲಿ ಶಾಂತಿಯಿಂದ ಜೀವನ ಸಾಗಿಸಲು ತಿಳಿಸಿದ್ದಾರೆ.

sabhe

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ಸಂಗೀತಾ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಹುಣಸಗಿ ತಹಶೀಲ್ದಾರ್ ಬಸವಲಿಂಗಪ್ಪ ನಾಯ್ಕೋಡಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಶಾಂತಿ ಸಭೆಯಲ್ಲಿದ್ದರು.

ಘಟನೆಯ ಹಿನ್ನೆಲೆ ಏನು?

ಬಪ್ಪರಗಾ ಗ್ರಾಮದ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿದ್ದ ಪ್ರಬಲ ಜಾತಿಯ ಯುವಕನೊಬ್ಬ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದು, ಮದುವೆಯಾಗಲು ನಿರಾಕರಿಸಿದ್ದ.

ಈ ಸಂಬಂಧ ಒಂದು ತಿಂಗಳ ಹಿಂದೆ ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ತಮ್ಮೆದುರು ಸಂಧಾನಕ್ಕೆ ಬರುವ ಬದಲು ನೇರವಾಗಿ ಠಾಣೆಗೆ ತೆರಳಿ ದೂರು ದಾಖಲಿಸಿದ್ದಕ್ಕೆ ಆಕ್ರೋಶಗೊಂಡಿದ್ದ ಸವರ್ಣೀಯರು, ಇಡೀ ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಬಹಿಷ್ಕಾರ ಕುರಿತ ಧ್ವನಿಮುದ್ರಿಕೆ (ವಾಯ್ಸ್ ಮೆಸೇಜ್) ವೈರಲ್‌ ಆಗಿತ್ತು.

ಇದನ್ನು ಓದಿದ್ದೀರಾ? ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ

ಪರಿಶಿಷ್ಟ ಸಮುದಾಯದ ಜನರ ಜೊತೆಗೆ ಯಾವುದೇ ರೀತಿಯ ವ್ಯವಹಾರ ಮಾಡದಂತೆ ಎಲ್ಲ ಅಂಗಡಿಗಳಿಗೆ ತಾಕೀತು ಮಾಡಿ, ನಮಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ದಿನಸಿ ಪದಾರ್ಥವಷ್ಟೇ ಅಲ್ಲ, ಶಾಲಾ ಮಕ್ಕಳಿಗೆ ಪೆನ್ನು, ನೋಟ್‌ಬುಕ್ ಸೇರಿದಂತೆ ಯಾವುದೇ ಸಾಮಗ್ರಿಗಳನ್ನೂ ಮಾರಾಟ ಮಾಡುತ್ತಿಲ್ಲ ಎಂದು ಬಪ್ಪರಗಿ ಗ್ರಾಮದ ದಲಿತರು ತಿಳಿಸಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರವಾಗುತ್ತಿದ್ದಂತೆಯೇ, ಎಚ್ಚೆತ್ತ ಜಿಲ್ಲಾಡಳಿತವು ಶಾಂತಿ ಸಭೆ ನಡೆಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...