ದಕ್ಷಿಣ ಕನ್ನಡ | ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಸಂತ್ರಸ್ತ ಕಾರ್ಮಿಕರಿಗೆ ಪರಿಹಾರಕ್ಕೆ ಆಗ್ರಹ

Date:

ಮಣ್ಣು ಕುಸಿತದಲ್ಲಿ ಕಾರ್ಮಿಕರಿಬ್ಬರ ಜೀವನ್ಮರಣ ಹೋರಾಟ ನಡೆದಿದ್ದು, ಕಾರ್ಮಿಕರ ಸಾವಿಗೆ ಬಿಲ್ಡರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆ ಆಗ್ರಹಿಸಿದೆ.

ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಪತ್ರಿಕಾ ಮಂಗಳೂರಿನಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಜಿಲ್ಲೆಯ ಮಂಗಳೂರು ನಗರದ ಬಲ್ಮಠ ವಾಸುಲೇನ್ ಬಳಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ನಿರತರಾದ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರು ಮಣ್ಣು ಕುಸಿತದಿಂದಾಗಿ ಮಣ್ಣಿನ ಅಡಿಯಲ್ಲಿ ಸಿಲುಕಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಬಿಲ್ಡರ್ ಹಾಗೂ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ನೇರ ಕಾರಣ. ಈ ದುರಂತದ ಹೊಣೆ ಹೊತ್ತು ಕಾರ್ಮಿಕರಿಗೆ ಸರ್ಕಾರದಿಂದ ದೊರಕುವ ವಿಪತ್ತು ಪರಿಹಾರ ನಿಧಿ ಮಾತ್ರವಲ್ಲದೆ, ಸಾವು ಸಂಭವಿಸಿದ್ದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ಕಂಪೆನಿ, ಗುತ್ತಿಗೆದಾರರ ಕಡೆಯಿಂದಲೂ ತಲಾ ₹50 ಲಕ್ಷ ಪರಿಹಾರ ಕೊಡಿಸಬೇಕು” ಎಂದು  ಆಗ್ರಹಿಸಿದರು.

“ಪ್ರಾಣಹಾನಿಗೆ ಕಾರಣವಾಗುವ ದುರ್ಘಟನೆಯನ್ನು ಕ್ರಿಮಿನಲ್ ಸೆಕ್ಷನ್‌ಗಳಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದೆಲ್ಲೆಡೆ ಬಹುಮಹಡಿ ಕಟ್ಟಡಗಳು ವೇಗವಾಗಿ ತಲೆ ಎತ್ತುತ್ತಿವೆ. ಅದರ ನಿರ್ಮಾಣ ಕೆಲಸಕ್ಕೆ ಪ್ರಜ್ಞಾಪೂರ್ವಕವಾಗಿ ಸ್ಥಳೀಯ ಕಾರ್ಮಿಕರಿಗೆ ಕೆಲಸ ನಿರಾಕರಿಸಿ ಅತ್ಯಂತ ನಿಕ್ರಷ್ಟ ಕೂಲಿಗೆ ಉತ್ತರ ಭಾರತದ ವಲಸೆ ಕಾರ್ಮಿಕರನ್ನು ಕರೆತಂದು ಯಾವುದೇ ನಿಯಮಗಳನ್ನು ಪಾಲಿಸದೆ ದುಡಿಸಲಾಗುತ್ತಿದೆ. ಇಂತಹ ಕಾರ್ಮಿಕರ ಸಂಪೂರ್ಣ ವಿವರ ಕಾರ್ಮಿಕ ಇಲಾಖೆಯಲ್ಲಿ ಲಭ್ಯ ಇರಬೇಕೆಂದಿದ್ದರೂ ಕಟ್ಟಡ ನಿರ್ಮಾಣ ಗುತ್ತಿಗೆದಾರರು ಹಾಗೂ ಬಿಲ್ಡರ್‌ಗಳು ಅಂತಹ ಯಾವುದೇ ಮಾಹಿತಿಗಳನ್ನು ನೀಡದೆ ಕಾರ್ಮಿಕರಿಗೆ ಅನ್ಯಾಯವೆಸಗುತ್ತಿದ್ದಾರೆ” ಎಂದು ದೂರಿದರು.

“ಕಾರ್ಮಿಕ ಇಲಾಖೆಯೂ ಕೂಡ ಈ ಬಗ್ಗೆ ತೀರಾ ಬೇಜವಾಬ್ದಾರಿಯನ್ನು ಪ್ರದರ್ಶಿಸುತ್ತಿದೆ. ಇಂತಹ ಘಟನೆಗಳು ದ‌. ಕ. ಜಿಲ್ಲಾದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿದೆ. ಇಂತಹ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ದುಡಿಯುವ ಯಾವುದೇ ಪ್ರದೇಶದ ಬಡಪಾಯಿ ಕಾರ್ಮಿಕರು ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಜೀವ ತೆರುವುದು, ಅಂಗ ವೈಫಲ್ಯಕ್ಕೆ ಒಳಗಾಗುವುದು ಸಾಮಾನ್ಯ ಎಂಬಂತಾಗಿದೆ. ಕಾರ್ಮಿಕರ ಇಂತಹ ದಯನೀಯ ಸ್ಥಿತಿಗೆ ಹೊಣೆ ಹೊರುವವರು, ಅವರ ಅನಾಥ ಕುಟುಂಬಗಳ ಜವಾಬ್ದಾರಿ ಹೊರುವವರು ಯಾರು?” ಎಂದು ಕಟ್ಟಡ ಕಾರ್ಮಿಕರ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

“ಮಂಗಳೂರು ನಗರದಲ್ಲಿ ಬಹುಮಹಡಿ ನಿರ್ಮಾಣ ಕಾಮಗಾರಿ ಸಂದರ್ಭ ಈ ರೀತಿಯ ಅವಘಡ ಸಂಭವಿಸುವುದು ಪದೇ ಪದೆ ನಡೆಯುತ್ತಿದೆ. ಇಂತಹ ಅವಘಡದಲ್ಲಿ ಪ್ರಾಣ ಕಳೆದುಕೊಳ್ಳುವ ವಲಸೆ ಕಾರ್ಮಿಕರಿಗೆ ಯಾವುದೇ ಪರಿಹಾರಗಳು ನೀಡುವುದಾಗಲಿ, ನಿರ್ಲಕ್ಷ್ಯಕ್ಕೆ ಸಂಬಂಧಪಟ್ಟವರನ್ನು ಹೊಣೆಗಾರರನ್ನಾಗಿಸಿ ವಿಚಾರಣೆ ನಡೆಸುವುದಾಗಲಿ ನಡೆಯುತ್ತಿಲ್ಲ‌. ಕಾರ್ಮಿಕರ ಕುರಿತಾದ ಇಂತಹ ಅನಾಧಾರದ ನಡೆಯನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಈಗ ನಡೆದಿರುವ ದುರ್ಘಟನೆಯಲ್ಲಿ ಕ್ರಮ ಜರುಗಿಸಿ, ಪರಿಹಾರ ನೀಡದಿದ್ದಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಓರ್ವ ಕಾರ್ಮಿಕನ ರಕ್ಷಣೆ, ಮತ್ತೊಬ್ಬನಿಗಾಗಿ ಶೋಧ

“ಮಳೆಗಾಲದ ಸಂದರ್ಭದಲ್ಲಿ ಕಾರ್ಮಿಕರ ಸುರಕ್ಷತೆಗೆ ಕ್ರಮಗಳನ್ನು ಕೈಗೊಳ್ಳಬೇಕು, ನಿಯಮ ಉಲ್ಲಂಘಿಸುವ ಬಿಲ್ಡರ್‌ಗಳು, ಗುತ್ತಿಗೆದಾರರನ್ನು, ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳನ್ನು ಇಂತಹ ಘಟನೆಗಳಿಗೆ ಹೊಣೆಗಾರರನ್ನಾಗಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...