ಬಾಗೇಪಲ್ಲಿ | ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಅತ್ಯಗತ್ಯ; ಸಹಾಯಕ ಕೃಷಿ ನಿರ್ದೇಶಕಿ ಲಕ್ಷ್ಮೀ

Date:

ನಮ್ಮ ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಅತ್ಯಗತ್ಯ. ಮಣ್ಣಿನ ಸವೆತವನ್ನು ಕಡಿಮೆ ಮಾಡಲು, ಫಲವತ್ತಾದ ಮಣ್ಣು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅಗತ್ಯತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತಿದೆ ಎಂದು ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕಿ ಲಕ್ಷ್ಮೀ ಹೇಳಿದರು.

ಬಾಗೇಪಲ್ಲಿ ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಆರೋಗ್ಯ ದಿನ1

ಮಾನವನ ಸ್ವಾರ್ಥ ಚಟುವಟಿಕೆಯಿಂದಾಗಿ ಪರಿಸರ ಮಾಲಿನ್ಯ, ಕಾಡುಗಳ ನಾಶ, ಕೃಷಿ ಚಟುವಟಿಕೆಗಳಿಗೆ ರಾಸಾಯನಿಕ, ಕೀಟನಾಶಕಗಳ ಬಳಕೆ, ಪ್ಲಾಸ್ಟಿಕ್ ಬಳಕೆ ಸೇರಿದಂತೆ ಇಂತಹ ನೂರಾರು ಕಾರಣದಿಂದಾಗಿ ಮಣ್ಣು ಕಲುಷಿತವಾಗುತ್ತಿದೆ. ಆದರೆ ಮಣ್ಣು ಒಂದು ನವೀಕರಿಸಬಹುದಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಇದು ಮರ ಗಿಡಗಳು ಹಾಗೂ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣ್ಣು ಪೋಷಕಾಂಶಗಳ ಸಮರ್ಪಕ ಪೂರೈಕೆ, ಆರೋಗ್ಯಕ್ಕೆ ಒತ್ತು ಕೊಟ್ಟು ಕೃಷಿಯಲ್ಲಿ ನಿರ್ವಹಣಾ ಕ್ರಮಗಳಾದ ಬೆಳೆ ಬದಲಾವಣೆ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ನೀರಿನ ಸಂರಕ್ಷಣೆ ಹಾಗೂ ಹವಾಮಾನಕ್ಕೆ ತಕ್ಕಂತೆ ಬೆಳೆ ಬದಲಾವಣೆ ಮಾಡುವುದರಿಂದ ನಾವು ಮಣ್ಣಿನ ಆರೋಗ್ಯ ಕಾಪಾಡಬಹುದು ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಕರ್ತವ್ಯನಿರತ ವೈದ್ಯೆಯ ನಿಂದನೆ; ಎಫ್ಐಆರ್ ದಾಖಲು

ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಮಣ್ಣಿನ ಆರೋಗ್ಯದ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಸಿರು ಸೇನೆ ಜಿಲ್ಲಾದ್ಯಕ್ಷ ಗೋವಿಂದ ರೆಡ್ಡಿ, ಈಶ್ವರ ರೆಡ್ಡಿ, ತಾಲ್ಲೂಕು ಅದ್ಯಕ್ಷ ಸದಾಶಿವ ರೆಡ್ಡಿ ಇನ್ನಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...