ಬೀದರ್‌ | ಸೈನಿಕರು, ರೈತರು, ಸಂತರು ದೇಶದ ಆಸ್ತಿ : ಬಸವರಾಜ ಪಾಟೀಲ್‌ ಸೇಡಂ

Date:

ಸೈನಿಕರು, ರೈತರು, ಸಂತರು ದೇಶದ ಅಮೂಲ್ಯ ಆಸ್ತಿ. ಕಲ್ಯಾಣ ಕೇವಲ ಭಾರತ ಕಲ್ಯಾಣವಾಗಬಾರದು ಜಗತ್ತಿನ ಮಾನವೀಯತೆಯ ಕಲ್ಯಾಣವಾಗಬೇಕು ಎಂದು ವಿಕಾಸ ಅಕಾಡೆಮಿಯ ಮುಖ್ಯ ಸಂಯೋಜಕ ಬಸವರಾಜ ಪಾಟೀಲ ಸೇಡಂ ಹೇಳಿದರು.

ಬಸವಕಲ್ಯಾಣದ ಹರಳಯ್ಯ ಗವಿಯಲ್ಲಿ ಅಂತರ‍್ರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಹಾಗೂ ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದ ಸಹಯೋಗದಲ್ಲಿ ನಡೆಯುತ್ತಿರುವ ʼಶರಣ ವಿಜಯೋತ್ಸವ ನಾಡಹಬ್ಬ ಹಾಗೂ ಹುತಾತ್ಮ ದಿನಾಚರಣೆʼ ಕಾರ್ಯಕ್ರಮದ ಎರಡನೇ ದಿನ ಮಾಚಿದೇವ – ಮಲ್ಲಿಬೊಮ್ಮ ವೀರ ಸೈನಿಕರ ವೇದಿಕೆ ಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ʼಸೈನಿಕರ, ರೈತರ ಗೌರವ ಹೆಚ್ಚಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಉದ್ದೇಶದಿಂದ ದೇಶದ ನಾಯಕ ಲಾಲ್‌ ಬಹುದ್ದೂರ್‌ ಶಾಸ್ತ್ರಿ ಅವರು ʼಜೈ ಜವಾನ್ ಜೈ ಕಿಸಾನ್ʼ ಎಂಬ ಘೋಷ ವಾಕ್ಯ ನುಡಿದಿದ್ದರು. ಸೈನಿಕರು ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತದೆ. ದೇಶದ ಜನರು ಶಾಂತಿ, ನೆಮ್ಮದಿಯಿಂದ ಬದುಕಲು ಸೈನಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆʼ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾನಿಧ್ಯ ವಹಿಸಿದ ಪೂಜ್ಯ ಡಾ.ಗಂಗಾಂಬಿಕೆ ಅಕ್ಕ ಮಾತನಾಡಿ, ʼಅನ್ಯಾಯ ವಿರುದ್ಧ ಹೋರಾಡಿದ ವೀರಭೂಮಿ ಬಸವಕಲ್ಯಾಣ. ದೇಶಕ್ಕಾಗಿ ನಾವೆಲ್ಲರೂ ಒಂದೇ ಎಂಬ ಭಾವನೆ ಬಂದಾಗ ದೇಶ ಗಟ್ಟಿಗೊಳ್ಳುತ್ತದೆ. ಮಕ್ಕಳಿಗೆ ದೇಶದ ವೀರರ ಚರಿತ್ರೆಯ ಇತಿಹಾಸ ತಿಳಿಸಬೇಕು. ಜಗತ್ತಿನ ರಕ್ಷಣೆಗೆ ಸಜ್ಜಾಗುವಂತೆ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಲು ತಾಯಂದಿರು ಮುಂದಾಗಬೇಕುʼ ಎಂದರು.

WhatsApp Image 2024 10 05 at 10.00.12 AM
ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರನ್ನು ಗೌರವಿಸಲಾಯಿತು.

ನಿವೃತ್ತ ಕರ್ನಲ್ ವೆಂಕಟರೆಡ್ಡಿ ಬೆಂಗಳೂರು ಅನುಭಾವ ನೀಡಿ, ʼವಿಶ್ವಕ್ಕೆ ಕಾಯಕದ ಪರಿಕಲ್ಪನೆ ಸಂದೇಶ ನೀಡಿದ ಬಸವಕಲ್ಯಾಣ ನೆಲ ಅತ್ಯಂತ ಪವಿತ್ರವಾದದ್ದು, ಇಂತಹ ನೆಲದಲ್ಲಿ ಸೈನಿಕರ ಸೇವೆಯನ್ನು ಗುರುತಿಸಿ ಗೌರವಿಸಲು ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯ. ದೇಶಕ್ಕಾಗಿ ಸೇವೆಗೈಯಲು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು. ಪದವಿಗಿಂತ ಸಂಸ್ಕಾರ ಮುಖ್ಯ, ಇಂದಿನ ದಿನಗಳಲ್ಲಿ ದೇಶದ ರಕ್ಷಣೆಗಾಗಿ ಸೈನಿಕ ಸೇವಾ ವೃತ್ತಿಗೆ ಸೇರಬಹುದಾಗಿದೆʼ ಎಂದರು.

ಇದೇ ಸಂದರ್ಭದಲ್ಲಿ ಸಾಹಿತಿ ಸಂಗಮೇಶ ಜವಾದಿ ಅವರ ವಿರಚಿತ ʼಸೇವೆಯೇ ಶ್ರೇಷ್ಠ ಜೀವನʼ ಎಂಬ ಕೃತಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಸೈನಿಕರನ್ನು ಗೌರವಿಸಲಾಯಿತು.

ಕು. ಶೃದ್ಧಾ ಮತ್ತು ಶ್ರೀಕಾಂತ ಸೀತಾರ ದೇಶಭಕ್ತಿ ಗೀತೆ ಗಾಯನ ನಡೆಸಿಕೊಟ್ಟರು. ಜ್ಞಾನ ಭಾರತಿ ಪ್ರಾಥಮಿಕ ಶಾಲೆಯ ಮಕ್ಕಳಿಂದ ನಡೆದ ಕಾರ್ಗಿಲ್ ವಿಜಯ ನೃತ್ಯ ರೂಪಕ ಜನಮನ ಸೆಳೆಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ ವಿಶ್ವವಿದ್ಯಾಲಯ : ಸ್ನಾತಕೋತ್ತರ ಪದವಿ ಫಲಿತಾಂಶ ಘೋಷಣೆ

ಸಮಾರಂಭದಲ್ಲಿ ಮಾಜಿ ಸೈನಿಕರ ಸಂಘ ಬಸವಕಲ್ಯಾಣದ ಗೌರವಾಧ್ಯಕ್ಷ ಸೂರ್ಯಕಾಂತ ಮೇತ್ರೆ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಆಲ್ ಇಂಡಿಯಾ ಮಾಜಿ ಸೈನಿಕರ ಸಂಘದ ಸದಸ್ಯ ಡಾ. ವಿ.ಕೆ.ತೆಲಂಗ, ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ರಾಜಕುಮಾರ ಕದ್ದೆ, ಮಾಜಿ ಸೈನಿಕರ ಸಂಘದ ತಾಲೂಕ ಅಧ್ಯಕ್ಷ ಬಾಬುರಾವ ಗೋರ್ಟೆ ಹಾಗೂ ಮಾಜಿ ಸೈನಿಕರಾದ ಸಿದ್ರಾಮಪ್ಪಾ ಬೇಲೂರೆ, ಓಂಕಾರ ಬಿರಾದಾರ, ರಾಮಲಿಂಗ ಜೋಕಾರೆ ಸೇರಿದಂತೆ ಇತರೆ ಮಾಜಿ ಸೈನಿಕರು ಉಪಸ್ಥಿತರಿದ್ದರು.ನಿವೃತ್ತ ಪ್ರಾಂಶುಪಾಲ ಸಿದ್ದಣ್ಣಾ ಮರಪಳ್ಳೆ ಸ್ವಾಗತಿಸಿದರು. ಮಲ್ಲಿಕಾರ್ಜುನ, ಸಂಗಮಕರ್ ನಿರೂಪಿಸಿದರು. ವಿದ್ಯಾವತಿ ಸಿದ್ದಣ್ಣಾ ಮರಪಳ್ಳೆ ಭಕ್ತಿ ದಾಸೋಹಗೈದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...