ಪ್ರಕಾಶಕರು ಮತ್ತು ಬರಹಗಾರರ ಸಮಸ್ಯೆಗೆ ಪರಿಹಾರ; ಸಚಿವ ಮಧು ಬಂಗಾರಪ್ಪ ಭರವಸೆ

Date:

ಪ್ರಕಾಶನ ರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.

ಮಂಗಳವಾರ, ಬೆಂಗಳೂರಿನಲ್ಲಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನೇತೃತ್ವದಲ್ಲಿ ಪ್ರಕಾಶಕರ ನಿಯೋಗವು ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ, ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿತು.

2020ರಿಂದ ಮೂರು ವರ್ಷಗಳ ಪುಸ್ತಕಗಳನ್ನು ಖರೀದಿಸಿಲ್ಲ. ಇದರಿಂದಾಗಿ ರಾಜ್ಯದ ಎಲ್ಲೆಡೆ ಹೊಸ ಕೃತಿಗಳಿಂದ ಓದುಗರು ವಂಚಿತರಾಗಿದ್ದಾರೆ. ಬಿಬಿಎಂಪಿ ಗ್ರಂಥಾಲಯ ಕರ ಎಂದು 450 ಕೋಟಿ ರೂಗಳನ್ನು ಸಂಗ್ರಹಿಸಿದೆ. ಇದನ್ನು ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಿಲ್ಲ. ಇದರಿಂದಾಗಿ ಪ್ರಕಾಶನ ಉದ್ಯಮ ಕಂಗಾಲಾಗಿದೆ ಎಂದು ನಿಯೋಗವು ಸಚಿವರ ಗಮನಕ್ಕೆ ತಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪುಸ್ತಕ ಪ್ರಕಟನೆಯ ವೆಚ್ಚ ಇಂದು ಗಗನಕ್ಕೇರಿದೆ. ಆದರೆ ಸಗಟು ಖರೀದಿಯಲ್ಲಿ ಮಾತ್ರ ಹಳೆಯ ದರವನ್ನೇ ನಿಗದಿಪಡಿಸಿದ್ದಾರೆ. ಹೆಚ್ಚಿರುವ ಕಾಗದ, ಇಂಕು, ಮುದ್ರಣ ಬೆಲೆ, ಜಿ ಎಸ್ ಟಿ ಯಿಂದಾಗಿ ಪ್ರಕಾಶನ ರಂಗ ತತ್ತರಿಸಿದೆ. ಆದ್ದರಿಂದ ಒಂದು ಪುಟದ ಬೆಲೆಯನ್ನು ಇನ್ನೂ 40 ಪೈಸೆ ಹೆಚ್ಚಳ ಮಾಡಬೇಕು” ಎಂದು ಸಂಘ ಮನವಿ ಮಾಡಿತು.

ಮನವಿ ಸ್ವೀಕರಿಸಿ ಮಾತನಾಡಿದ ಮಧು ಬಂಗಾರಪ್ಪ, “ಪ್ರಕಾಶನ ರಂಗ ಇತರ ರಾಜ್ಯಗಳಲ್ಲಿ ಉತ್ತಮ ಸ್ಥಿತಿಯಲ್ಲಿದ್ದು ಕರ್ನಾಟಕದಲ್ಲಿ ಕಳೆದ ಕೆಲವು ವರ್ಷಗಳಿಂದ ದುಸ್ಥಿತಿಯಲ್ಲಿರುವ ಬಗ್ಗೆ ನಾನು ತಿಳಿದಿದ್ದೇನೆ. ಈ ಸಮಸ್ಯೆಗಳನ್ನು ನಾನು ಅಧ್ಯಯನ ಮಾಡಿ ಕ್ರಮೇಣ ಓದು ಸಂಸ್ಕೃತಿಯನ್ನು ಬಲಪಡಿಸುವ ಈ ಮಹತ್ವವಾದ ಕ್ಷೇತ್ರಕ್ಕೆ ಆದ್ಯತೆಯ ಮೇಲೆ ಪರಿಹಾರ ಒದಗಿಸುತ್ತೇನೆ” ಎಂದು ಭವರಸೆ ನೀಡಿದರು.

ನಿಯೋಗದಲ್ಲಿ ಪ್ರಕಾಶಕರ ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟಸ್ವಾಮಯ್ಯ, ಕಾರ್ಯದರ್ಶಿ ಆರ್ ದೊಡ್ಡೇಗೌಡ, ಹಿರಿಯ ಪ್ರಕಾಶಕರುಗಳಾದ ನಿತಿನ್ ಶಾ, ಜಿ ಎನ್ ಮೋಹನ್, ಮಾನಸ, ಬಿ ಕೆ ಸುರೇಶ್, ನಿಡಸಾಲೆ ವಿಜಯ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...