ಬಿಜೆಪಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಕೆಲವರು ಬಿಟ್ಟಿಲ್ಲ: ಎಸ್‌ ಟಿ ಸೋಮಶೇಖರ್‌

Date:

  • ‘ಪಕ್ಷದಲ್ಲಿ ಮೂಲ ಮತ್ತು ವಲಸಿಗ ಚಿಂತನೆ ಜಾಸ್ತಿಯಾಗುತ್ತಿದೆ’
  • ‘ಕಾಂಗ್ರೆಸ್‌ಗೆ ಹೋಗುವುದಾಗಿ ಪ್ರೊಪಗಾಂಡ ಸಿದ್ದಪಡಿಸಿದ್ದಾರೆ’

ಬಿಜೆಪಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಕೆಲವರು ಬಿಟ್ಟಿಲ್ಲ. ಅಂತವರ ಬಗ್ಗೆ ಕ್ರಮಕೈಗೊಳ್ಳಲು ಪಕ್ಷಕ್ಕೆ ತಿಳಿಸಿದ್ದೆ. ಆದರೆ, ಪಕ್ಷದಲ್ಲಿ ಮೂಲ ಮತ್ತು ವಲಸಿಗ ಚಿಂತನೆ ಜಾಸ್ತಿಯಾಗುತ್ತಿದೆ. ಇದು ಅವೈಡ್‌ ಆಗಬೇಕು ಎಂದು ಎಲ್ಲ ನಾಯಕರಿಗೂ ಹೇಳಿರುವೆ ಎಂದು ಯಶವಂತಪುರ ಶಾಸಕ ಎಸ್‌ ಟಿ ಸೋಮಶೇಖರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾನು ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಕೆಲವರು ಪ್ರೊಪಗಾಂಡ ಸಿದ್ದಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲೂ ಈ ವಿಚಾರ ಹರಿಬಿಟ್ಟರು. ಈ ಬಗ್ಗೆ ಯಡಿಯೂರಪ್ಪ, ಸಿಟಿ ರವಿ ಹಾಗೂ ಬೊಮ್ಮಾಯಿ ಅವರ ಗಮನಕ್ಕೆ ತಂದಿರುವೆ” ಎಂದರು.

“ಪಕ್ಷದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗಬೇಕು ಎಂದು ಎಲ್ಲರಿಗೂ ಮನವಿ ಮಾಡಿರುವೆ. ಯಡಿಯೂರಪ್ಪ ಅವರು ನನ್ನನ್ನು ಬಿಜೆಪಿಗೆ ಕರೆ ತಂದಿದ್ದಾರೆ. ಅವರನ್ನು ಮೀರಿ ಯಾವ ಕೆಲಸವನ್ನು ಮಾಡಲ್ಲ. ಭೇಟಿಯಾಗಲು ತಿಳಿಸಿದ್ದಾರೆ. ಇಂದು ಯಡಿಯೂರಪ್ಪ ಅವರನ್ನು ಭೇಟಿಯಾಗುತ್ತಿರುವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್‌ ಹಸ್ತದ ಚರ್ಚೆ: ನಿರ್ಲಜ್ಜ ರಾಜಕೀಯ ನಡೆಗಳು

“ನಾನು ಪ್ರಬಲ ನಾಯಕ ಅಲ್ಲ. ಯಶವಂತಪುರಕ್ಕೆ ಸೀಮಿತವಾದ ನಾಯಕ. 20 ವರ್ಷ ಕಾಂಗ್ರೆಸ್‌ನಲ್ಲಿ ಇದ್ದೆ. ಈ ಕಾರಣಕ್ಕಾಗಿ ಮರಳಿ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂದು ಕ್ರಿಯೇಟ್‌ ಮಾಡಲಾಗಿದೆ. ಯಾರೋ ಒಂದಿಬ್ಬರನ್ನು ಕ್ಷೇತ್ರದಲ್ಲಿ ವಜಾಮಾಡಿದರೆ ಸಾಲದು. ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸೃಷ್ಟಿಯಾಗಬೇಕು” ಎಂದರು.

ಸಿಎಂ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, “ನಮ್ಮ ಕ್ಷೇತ್ರದ ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತಂದಿದ್ದೆ. ನಿನ್ನೆ ಕಾಲ್‌ ಮಾಡಿ ನನ್ನನ್ನು ಕರೆಯಿಸಿಕೊಂಡು ವಿಚಾರಿಸಿ, ಮೂರು ಸಮಸ್ಯೆಗಳಿಗೆ ಸ್ಪಂದಿಸುವೆ ಎಂದಿದ್ದಾರೆ. ನಮ್ಮ ಮಧ್ಯೆ ರಾಜಕೀಯ ಮಾತುಗಳು ನಡೆದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...