ಬೆಂಗಳೂರು | ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ

Date:

ಮಕ್ಕಳಿಗೆ ಪೂರ್ತಿಯಾಗಿ ಬೇಸಿಗೆ ರಜೆ ನೀಡದೆ, ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ ಮಾಡಿವೆ.

ಶಿಕ್ಷಣ ಇಲಾಖೆಯ ಕಟ್ಟುನಿಟ್ಟಿನ ಆದೇಶವಿದ್ದರೂ, ಕೆಲವು ಶಾಲೆಗಳು ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಇಲಾಖೆಯ ಆದೇಶದಂತೆ ಮೇ 29ರಿಂದ ಶಾಲೆಗಳು ಪುನರಾರಂಭವಾಗಬೇಕು. ಆದರೆ, ಕೆಲವು ಖಾಸಗಿ ಶಾಲೆಗಳು ಈಗಾಗಲೇ ಆರಂಭಗೊಂಡಿದ್ದು, ತರಗತಿಗಳನ್ನೂ ಸಹ ಆರಂಭಿಸಿವೆ.

ಈ ಬಗ್ಗೆ ಕೆಲವು ಷೋಷಕರು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ರಾಜಾಜಿನಗರದಲ್ಲಿ ಪ್ರತಿಷ್ಠಿತ ಶಾಲೆಗಳು, ಎಸ್​​​ಜೆಆರ್ ಶಾಲೆ, ವೆಂಕಟ್ ಇಂಟರ್‌ ನ್ಯಾಷನಲ್ ಶಾಲೆ, ವಿದ್ಯಾವರ್ತಕ ಶಾಲೆ, ಕಾರ್ಮೆಲ್ ಸ್ಕೂಲ್ ಸೇರಿದಂತೆ ಹಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಕಳೆಯುವ ಮುನ್ನವೇ ಕಾರ್ಯಾರಂಭ ಮಾಡಿವೆ ಎಂಬ ಬಗ್ಗೆ ತಿಳಿದುಬಂದಿದೆ.

ಈ ಆರೋಪದ ಕುರಿತು ತಪಾಸಣೆಗಾಗಿ ಖಾಸಗಿ ಶಾಲೆಗಳ ಮೇಲೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗನಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತರಗತಿ ಆರಂಭ ಮಾಡಿರುವ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸಲಾಗಿದೆ. ಜತೆಗೆ, ಮಕ್ಕಳ ಅಭಿಪ್ರಾಯ ಪಡೆದಿದ್ದಾರೆ ಎನ್ನಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳು ಬೇಕಾಬಿಟ್ಟಿಯಾಗಿ ಶುಲ್ಕ ಹೆಚ್ಚಳ ಮಾಡುತ್ತಿರುವ ಬಗ್ಗೆ ಕೆಲ ದಿನಗಳ ಹಿಂದಷ್ಟೇ ವರದಿಯಾಗಿತ್ತು. ಶಾಲಾ ಮಕ್ಕಳ ಮರುಪ್ರವೇಶಾತಿ ನಡೆಯುತ್ತಿದ್ದು, ಖಾಸಗಿ ಶಾಲೆಗಳಲ್ಲಿ ಶುಲ್ಕ ದೊಡ್ಡ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆ ಶಾಲಾ ಮಕ್ಕಳ ಪಾಲಕರು ಚಿಂತಿತರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

ಸಿಬಿಎಸ್‌ಇ, ಐಸಿಎಸ್‌ಇ ಮತ್ತು ಎಸ್‌ಎಸ್‌ಎಲ್‌ಸಿ ಬೋರ್ಡ್‌ಗೆ ಸಂಯೋಜಿತವಾಗಿರುವ ಖಾಸಗಿ ಶಾಲೆಗಳಲ್ಲಿ, ಒಂದೇ ಕಂತಿನಲ್ಲಿ ಶುಲ್ಕ ಪಾವತಿಸುವಂತೆ ಪಾಲಕರ ಮೇಲೆ ಆಡಳಿತ ಮಂಡಳಿಗಳು ಒತ್ತಡ ಹೇರುತ್ತಿರುವುದು ವರದಿಯಾಗಿದೆ.

ಕಳೆದ ಶೈಕ್ಷಣಿಕ ವರ್ಷದವರೆಗೆ, ಮೂರು ಕಂತುಗಳಲ್ಲಿ ಶುಲ್ಕವನ್ನು ಪಾವತಿಸುವ ಅವಕಾಶ ಇತ್ತು. ಕೆಲವು ವಿಶೇಷ ಸಂದರ್ಭ ಎಂದು ಪರಿಗಣಿಸಿ ಹೆಚ್ಚುವರಿ ಕಂತುಗಳನ್ನೂ ಪಾಲಕರಿಗೆ ಆಡಳಿತ ಮಂಡಳಿಗಳು ಕೊಡುತ್ತಿದ್ದವು. ಆದರೆ ಈ ಬಾರಿ ಬಹುತೇಕ ಎಲ್ಲ ಖಾಸಗಿ ಶಾಲೆಗಳಲ್ಲಿ ಕನಿಷ್ಠ ಶೇಕಡ 30 ರಿಂದ 40 ರಷ್ಟು ಶುಲ್ಕವನ್ನು ಹೆಚ್ಚಿಸಲಾಗಿದೆ. ಇದರಿಂದ ಕಳವಳಗೊಂಡಿರುವ ಅನೇಕ ಪಾಲಕರು ತಮ್ಮ ಶಾಲಾ ವ್ಯಾಪ್ತಿಯ ಬ್ಲಾಕ್ ಶಿಕ್ಷಣ ಅಧಿಕಾರಿಗಳನ್ನು (ಬಿಇಒ) ಸಂಪರ್ಕಿಸಿ, ಪರಿಹಾರ ಒದಿಸುವಂತೆ ಕೋರಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷ ಕೂಡ ಅನೇಕ ಖಾಸಗಿ ಶಾಲೆಗಳು ಅವೈಜ್ಞಾನಿಕವಾಗಿ ಶುಲ್ಕ ಹೆಚ್ಚಳ ಮಾಡುತ್ತಿರುವುದು ಪೋಷಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...