ಸೊರಬ | ಸಾಮಾಜಿಕ ಕಾರ್ಯಕರ್ತರ ವೇದಿಕೆ ಹಾಗೂ ಮಾನವ ಬಂಧುತ್ವ ವೇದಿಕೆಯಿಂದ “ಬಸವ ಪಂಚಮಿ” ಕಾರ್ಯಕ್ರಮ

Date:

ಸೊರಬ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಸೊರಬ ಹಾಗೂ ಮಾನವ ಬಂಧುತ್ವ ವೇದಿಕೆ ಸೊರಬ ಇವರು ವತಿಯಿಂದ ಇಂದು ಸೊರಬ ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆ ಹೊಳೆಮರೂರು, ಅಲ್ಲಿ ಮಕ್ಕಳಿಗೇ ಹಾಲು ಹಾಗೂ ಸಿಹಿತಿನಿಸು ನೀಡಿ “ಬಸವ ಪಂಚಮಿ” ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ವಕೀಲರು ಹಾಗೂ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಸೊರಬದ ಅಧ್ಯಕ್ಷರಾದ ರಾಜೇಶ್ ಸಿ ಕಾನಡೆ ಅವರು ಮಾತನಾಡಿ, ಜನರಲ್ಲಿ ವೈಚಾರಿಕತೆಯನ್ನು ಮೂಡಿಸುವ ಕೆಲಸ ಮಾಡುವುದು ಅನಿವಾರ್ಯವಾಗಿದೇ ಏಕೆಂದರೆ ನಾಗರಹಾವು ಹಾಲು ಕುಡಿಯುವುದಿಲ್ಲ ಎಂದು ಗೊತ್ತಿದ್ದು ಕೂಡ ಹಾವಿಗೆ ಹಾಲು ನೀಡುವುದು ಕಲ್ಲಿಗೆ ಹಾಲು ಹಾಕುವುದು ಮೌಡ್ಯದ ಪರಮಾಧಿ ಪ್ರಮಾಣವರಿಯಾಗಿದೆ ಎಂದರೂ ಮುಂದುವರೆದು ಭಾರತದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಸಂಖ್ಯೆ ವಿಶ್ವದಲ್ಲೇ ಮೂರನೇ ಒಂದು ಭಾಗದಷ್ಟು ಇದ್ದು ಹಾಗೂ 20 21ನೇ ಸಾಲಿನ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ 33 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಅದರಲ್ಲಿ ಶೇಕಡ 54% ರಷ್ಟು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

1001974686

ಆದ್ದರಿಂದ ಪೌಷ್ಟಿಕ ಯುಕ್ತ ಹಾಲನ್ನು ಕಲ್ಲಿಗೆ ಹುತ್ತಕ್ಕೆ ನೈವೇದ್ಯ ಮಾಡುವ ಬದಲು ಬಡ ಮಕ್ಕಳಿಗೆ ನೀಡೋಣ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾನವ ಬಂದುತ್ವ ವೇದಿಕೆ ಸೊರಬ ತಾಲೂಕು ಅಧ್ಯಕ್ಷರಾದಂತಹ ನಾಗಪ್ಪ ಮಾಸ್ಟರ್ ಅವರ ಮಾತನಾಡಿ ಜನರಲ್ಲಿ ವೈಚಾರಿಕತೆಯನ್ನು ಮೂಡಿಸುವ ಅನಿವಾರ್ಯವಾಗಿದೆ ಬುದ್ಧ ಬಸವ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜನರಲ್ಲಿ ತಿಳಿಸುವ ಕೆಲಸ ಮಾಡಬೇಕು ಈ ರೀತಿಯ ವೈಚಾರಿಕ ಹಬ್ಬವನ್ನು ಆಚರಿಸಬೇಕು ಬಸವ ಪಂಚಮಿ ಕಾರ್ಯಕ್ರಮ ತಮ್ಮ ಮನೆ ವಾರ್ಡ್ ಬೀದಿಗಳಲ್ಲಿ ಕೂಡ ಮಾಡಬೇಕು ವೈಚಾರಿಕತೆಯ ಮನಸ್ಸುಗಳು ಮಕ್ಕಳಲ್ಲಿ ಕೂಡ ಬರಬೇಕು ಎಂದು ಮಾತನಾಡಿದರು.

ನಂತರ ದಲಿತ ಸಂಘರ್ಷ ಸಮಿತಿ ಸಿದ್ದಾಪುರದ ಸಹ ಸಂಚಾಲಕರಾದ ಲಕ್ಷ್ಮಣ್ ಬೋರ್ಕರ್ ಮಾತನಾಡಿ ಹಾವು ಹಾಲು ಕುಡಿಯುವುದಿಲ್ಲ ಏಕೆಂದರೆ ಹಾವು ಮೊಟ್ಟೆ ಇಟ್ಟು ಮರಿ ಮಾಡುವ ಜೀವಿ.ಯಾವ ಪ್ರಾಣಿಗಳು ಮೊಟ್ಟೆ ಇಟ್ಟು ಮರಿ ಮಾಡುತವೆಯೋ ಆ ಪ್ರಾಣಿಗಳು ಹಾಲನ್ನು ಕುಡಿಯುವುದಿಲ್ಲ, ಎಂದು ಹೇಳಿದರು.

1001974685

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರಪ್ಪ ಎಸ್ ಸಾಗರಕರ್ ರ್ವಹಿಸಿದರು ಈ ಸಮಯದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಹೊಳೆಮರೂರು ಮುಖ್ಯೋಪಾದಾಯರಾದ ಪ್ರಭಾಕರ್, ಶಾಲೆಯ ಅಧ್ಯಕ್ಷರಾದ ಎ ಕೆ ಗಂಗಾಧರ್, ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಮೋಹನ್ ಕಾನಡೆ, ಡಾಕ್ಟರ್ ಸುಮಂತ್, ಡಾಕ್ಟರ್ ರಚನಾ,ಶಾಲೆಯ ಎಸ್ ಡಿ ಎಂ ಸಿ ಸದಸ್ಯರು ಆಶಕರ್ಯಕರ್ತೆಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...