ಸೊರಬ | ತಳ ಸಮುದಾಯದ ಪರ ಹೋರಾಟ ಮಾಡುವುದು ಅವಿಭಾಜ್ಯ ಅಂಗ : ನಟ ಚೇತನ್ ಅಹಿಂಸ

Date:

ಸೊರಬ, ವ್ಯೆಯಕ್ತಿಕವಾಗಿ ನಮ್ಮ ಪರಿಶ್ರಮ ಹಾಗೂ ಬೆವರು ಸುರಿಸಿ ಉತ್ತಮ ಸ್ಥಾನಕ್ಕೆ ಏರಿದ್ದೇವೆ. ಆದರೆ ಸೈದ್ಧಾಂತಿಕ ನಿಲುವಿನೊಂದಿಗೆ ತಳ ಸಮುದಾಯದ ಪರವಾಗಿ ಹೋರಾಟ ಮಾಡುವುದು ಕೂಡ ಬದುಕಿನ ಅವಿಭಾಜ್ಯ ಅಂಗವಾಗಿದೆ ಎಂದು ಚಲನಚಿತ್ರ ನಟ ಚೇತನ್ ಹೇಳಿದರು.

ಪಟ್ಟಣದಲ್ಲಿ ದಲಿತ ಮುಖಂಡರು,ಸಮಾನ ಮನಸ್ಕರು ಹಾಗೂ ತಾಲ್ಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಸಮಾನತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾನತೆ ಎನ್ನುವುದು ಲಿಂಗದ ದೃಷ್ಟಿಯಿಂದ, ಶೈಕ್ಷಣಿಕ ಹಾಗೂ ಆರ್ಥಿಕ ದೃಷ್ಟಿಯಿಂದ ಪ್ರಮುಖವಾಗಿದೆ.ಆದರೆ ಪ್ರಭುತ್ವವು ಅಬಲರಿಗೆ ಸಿಗದಂತೆ ನೋಡಿಕೊಂಡಿದೆ. ಈ ವಿಚಾರಧಾರೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಅಸ್ತಿತ್ವಕ್ಕೆ ಧಕ್ಕೆ ಬಂದಾಗ ಪ್ರಶ್ನೆ ಮಾಡುವ ಮನಸ್ಥಿತಿ ಬೆಳೆಸುವಂತೆ ನೋಡಿಕೊಳ್ಳುವುದು ನಮ್ಮ ಹೊಣೆಗಾರಿಕೆ ಆಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜದಲ್ಲಿ ಬೇಕಿರುವುದು ಸಂಪೂರ್ಣವಾದ ಪರಿವರ್ತನೆ. ಅದು ಅಹಿಂಸವಾದದ ರೀತಿ ಆಗಿರಬೇಕು.ಆ ಕ್ರಾಂತಿಯೇ ಸಮ ಸಮಾಜ.ದಲಿತರ ಶತೃ ಅನ್ಯಾಯದ ವ್ಯವಸ್ಥೆ. ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಈ ಹೋರಾಟವನ್ನು ಮುನ್ನಡೆಸಲು ರಾಜ್ಯದ ೬ ಕೋಟಿ ಜನರು ಕೈಜೋಡಿಸಿದಾಗ ಸಮಾನತೆ ಕಾಣಲು ಸಾಧ್ಯವಿದೆ ಎಂದು ಪ್ರತಿಪಾದಿಸಿದರು.

ಸಮಾಜ ಚಿಂತಕ ರಾಜಪ್ಪ ಮಾಸ್ತರ್ ಮಾತನಾಡಿ, ಭಾರತ ದೇಶವು ಪ್ರತಿಯೊಬ್ಬ ಪ್ರಜೆಗೆ ಮನೆ ಇದ್ದಂತೆ. ನಾವು ಒಂದೇ ಕುಟುಂಬದ ಸದಸ್ಯರು. ಹೀಗಿರುವಾಗ ದೇಶದಲ್ಲಿನ ಆಸ್ತಿ,ಸಂಪತ್ತು ಮತ್ತು ಅಧಿಕಾರ ಸಮಾನವಾಗಿ ಹಂಚಿಕೆಯಾಗಬೇಕು. ಉಳ್ಳವರ ಪಾಲಾಗಿರುವ ಬಂಡವಾಳ ಎಲ್ಲರಿಗೂ ಸೇರಬೇಕು ಎಂದರು.

ಗುರುರಾಜ್,ನಾಗಪ್ಪ ಮೇಷ್ಟ್ರು, ಬಸವರಾಜಪ್ಪ, ಮೆಹಬೂಬ್, ರೆಹಮಾನ್ ಸಾಬ್, ಶ್ರೀಕಾಂತ್ ಚಿಕ್ಕಶಕುನ, ರತ್ನಮ್ಮ,ಶೇಖರಮ್ಮ,ರುದ್ರಪ್ಪ,ನಾಗರಾಜ್ ಸೇರಿದಂತೆ ಸಮಾನ ಮನಸ್ಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...