ಸೊರಬ | ಸಚಿವ ಮಧು ಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ

Date:

‘ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಮಧುಬಂಗಾರಪ್ಪ ಹೇಳಿದರು.

ಸರ್ಕಾರದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಕುಬಟೂರು ಕೆರೆಗೆ ಬಾಗಿನ ಅರ್ಪಿಸಿ, ಬಳಿಕ ಕುಬಟೂರು ಸರ್ಕಾರಿ ಶಾಲಾಭಿವೃದ್ಧಿಗೆ ₹10 ಲಕ್ಷ ವೈಯಕ್ತಿಕವಾಗಿ ದೇಣಿಗೆ ನೀಡುವ ಕಾರ್ಯಕ್ರಮಕ್ಕೆ, ಪತ್ನಿ ಅನಿತಾ ಮಧುಬಂಗಾರಪ್ಪ ಅವರ ಜತೆಗೂಡಿ ಚಾಲನೆ ನೀಡಿ ಮಾತನಾಡಿದರು‌.

ಮಧು2

“ಶಾಲೆಗೆ ನೀಡಿದ ದೇಣಿಗೆ ಮೊತ್ತ ₹10 ಲಕ್ಷ ಇರಬಹುದು. ಆದರೆ, ಇದು ಮುಂದಿನ ದಿನದಲ್ಲಿ ಕೋಟಿಗೆ ವಿಸ್ತರಣೆ ಆಗಲಿದೆ. ಇದರಿಂದ, ಸರ್ಕಾರಿ ಶಾಲೆಗಳ ಏಳಿಗೆ ಸಾಧ್ಯವಾಗಲಿದೆ” ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಶಯ ಸಾಕಾರಗೊಂಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ನನ್ನ ತಂದೆಯವರಾದ ಎಸ್.ಬಂಗಾರಪ್ಪ ಅವರ ಭವಿಷ್ಯ ರೂಪಿಸಿದ್ದು, ಇದೇ ಕುಬಟೂರು ಸರ್ಕಾರಿ ಶಾಲೆ. ಆದರೆ, ಸರ್ಕಾರಿ ಶಾಲೆಯಲ್ಲಿ ಓದುವ ಸೌಭಾಗ್ಯ ನನಗೆ ಸಿಗದಿರುವ ಕುರಿತ ಬೇಸರವಿದೆ. ಇಲ್ಲಿ ಅಕ್ಷರ ಕಲಿತ ಬಂಗಾರಪ್ಪ ಅವರು ರಾಜ್ಯದ ಭವಿಷ್ಯ ರೂಪಿಸಲು ಸಾಕ್ಷಿಯಾದರು. ಜನಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾದರು. ಅವರ ಸ್ಮರಣಾರ್ಥ ಈ ಕಾರ್ಯಕ್ರಮ ಹೊಸ ರೂಪ ಪಡೆದುಕೊಂಡಿದೆ ಎಂದರು.

ಮಧು1

ಅಕ್ಷರ ಕಲಿಸಿದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸರ್ಕಾರದ ಜತೆಗೆ ಎಲ್ಲರೂ ಕೈಜೋಡಿಸಬೇಕು. ಇದರಿಂದ, ಸರ್ಕಾರಿ ಶಾಲೆಗಳ ಅಸ್ಥಿತ್ವ ಸುಧಾರಣೆ ಕಾಣಲು ಸಾಧ್ಯ. ಮುಂದಿನ ಒಂದು ವರ್ಷದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಒಂದು ಸಾವಿರ ಕೋಟಿ ದೇಣಿಗೆ ಹರಿದು ಬರುವ ನಿರೀಕ್ಷೆ ಇದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಕ್ಕಳಿಗೆ ಕನ್ನಡ ಕಲಿಸಬೇಕು. ಅದೇ, ರೀತಿ ಶಿಕ್ಷಕರು ಸಹ ಕನ್ನಡ ಭಾಷೆಯಲ್ಲಿ ಪಕ್ವವಾಗಬೇಕು. ಗ್ರಾಮಾಂತರ ಭಾಗ ಸೇರಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಜೆ ತರಗತಿ ನಡೆಸಲು ಶಿಕ್ಷಕರು ಮುಂದಾಗಬೇಕು. ಇದರಿಂದ, ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಸಚಿವ ಮಧುಬಂಗಾರಪ್ಪ ಹೇಳಿದರು.

ಮಧು4

ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಯಾವುದೇ ಹಕ್ಕು ಪೋಷಕರಿಗಿಲ್ಲ. ಆದ್ದರಿಂದ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಧುಬಂಗಾರಪ್ಪ ಹೇಳಿದರು.

ಕುಬಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುನಿತಾ ಮಾತನಾಡಿ, ಕುಬಟೂರು ಸರ್ಕಾರಿ ಶಾಲೆಗೆ 150 ವರ್ಷದ ಇತಿಹಾಸವಿದೆ. ಸ್ವಾತಂತ್ರ್ಯ ಬಳಿಕ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಗ್ರಾಮವನ್ನು ಅಗ್ರಸ್ಥಾನಕ್ಕೆ ಏರಿಸಿದರು. ತಂದೆ ಹಾಕಿ ಕೊಟ್ಟ ಮಾರ್ಗದಲ್ಲಿ ಮಧು ಬಂಗಾರಪ್ಪ ಅವರು ಸಾಗುತ್ತಿದ್ದಾರೆ. ಶಾಲೆಗೆ ಎರಡು ಟಿವಿ, ಕಂಪ್ಯೂಟರ್, ಮಕ್ಕಳಿಗೆ ಕೂರಲು ಕುರ್ಚಿ ಹಾಗೂ ಟೇಬಲ್, ಫ್ಯಾನ್ ಸೇರಿ ₹10 ಲಕ್ಷ ಮೌಲ್ಯದ ಪರಿಕರಗಳನ್ನು ದೇಣಿಗೆ ನೀಡಿದ್ದಾರೆ. ಈ ರೀತಿಯ ಮನೋಭಾವ ಎಲ್ಲರೂ ರೂಢಿಸಿಕೊಳ್ಳಬೇಕು ಎಂದರು.

ಇದನ್ನು ಓದಿದ್ದೀರಾ? ಸುರಪುರ | ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತೆ ಕಾಪಾಡಲು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ

ಶಾಲೆಯ ವಿದ್ಯಾರ್ಥಿಗಳು ಮಾತನಾಡಿ, ಮಧು ಅಂಕಲ್ ಶಾಲೆಗೆ ಟಿವಿ ಕೊಟ್ಟಿದ್ದಾರೆ. ಖುಷಿಯಾಗುತ್ತಿದೆ. ಟಿವಿಯ ಮೂಲಕ ಪಾಠಗಳನ್ನು ಕೇಳಿಸಿಕೊಳ್ಳುವ ಜತೆಗೆ ನೋಡಬಹುದು. ಮಧು ಅಂಕಲ್‌ಗೆ ಧನ್ಯವಾದ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

ಮಧು3

ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಎಸ್ ಡಿಎಂಸಿ ಅಧ್ಯಕ್ಷ ಮಲ್ಲೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ, ಬಎಂ.ಡಿ.ಶೇಖರ್, ದಯಾನಂದ ಕಲ್ಲೆ, ನಾಗರಾಜ ಗೌಡ, ಗಣಪತಿ, ನಾಗರಾಜ, ಅರುಣ್ ಕುಮಾರ್, ರಾಜಶೇಖರ, ಮಂಜುನಾಥ, ಹುಚ್ಚಪ್ಪ, ಪ್ರಕಾಶ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...