ಸೌಜನ್ಯ ಪ್ರಕರಣ | ಓದುಗರಿಗೆ ದ್ರೋಹ ಬಗೆಯದಿರಿ: ‘ಉದಯವಾಣಿ’ಗೆ ನಾಗರಿಕ ಸೇವಾ ಟ್ರಸ್ಟ್ ಪತ್ರ

Date:

ಸೌಜನ್ಯ ಪ್ರಕರಣ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಹಲವಾರು ಸುದ್ದಿಗಳನ್ನು ದಾಖಲೆ ಸಮೇತವಾಗಿ ಕಳುಹಿಸಿದರೂ ‘ಉದಯವಾಣಿ’ ಪತ್ರಿಕೆ ಒಂದೂ ಸುದ್ದಿಯನ್ನೂ ಪ್ರಕಟಿಸಿಲ್ಲ ಎಂದು ನಾಗರಿಕ ಸೇವಾ ಟ್ರಸ್ಟ್‌ ಆರೋಪಿಸಿದೆ. ‘ಉದಯವಾಣಿ’ ಪತ್ರಿಕೆಯು ಓದುಗರಿಗೆ ದ್ರೋಹ ಬಗೆಯುತ್ತಿದೆ. ಪತ್ರಿಕೆಯ ಹೆಸರ ಪಕ್ಕದಲ್ಲೇ ‘ಹೆಗ್ಗಡೆವಾಣಿ’ ಎಂದೂ ಬರೆದುಕೊಳ್ಳಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಧರ್ಮಸ್ಥಳದಲ್ಲಿ ನಡೆಯುವ ಅಕ್ರಮಗಳಿಗೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸದೆ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಆರೋಪಿಸಿರುವ ಟ್ರಸ್ಟ್‌, ‘ಉದಯವಾಣಿ’ಗೆ ಪತ್ರ ಬರೆದಿದೆ. ಪತ್ರದಲ್ಲಿ:

“ದಕ್ಷಿಣ ಕನ್ನಡ ಮತ್ತು ಉಡುಪಿ – ಎರಡು ಜಿಲ್ಲೆ ಪ್ರಮುಖ ದೈನಿಕ ಉದಯವಾಣಿ. ಪತ್ರಿಕೆಯು ತನ್ನ ಓದುಗರಿಗೆ ಎಲ್ಲ ಸುದ್ದಿಗಳನ್ನು ನೀಡಬೇಕಾದ್ದು ಪತ್ರಿಕಾ ಧರ್ಮ. ಅದೇನೂ ನಿಮ್ಮ ಉಪಕಾರ ಅಲ್ಲ. ಹೆಗ್ಗಡೆಯವರ ಸುದ್ದಿಗಳನ್ನು ಕಾಲಂಗಟ್ಟಲೆ ಫೋಟೋಸಹಿತ ರಾಜ್ಯಮಟ್ಟದ ವರದಿಯಾಗಿ ಪ್ರಕಟಿಸುವ ನೀವು ನಾಗರಿಕ ಸೇವಾ ಟಸ್ಟ್‌ ಕಳಿಸುವ ವರದಿಗಳನ್ನು, ನಾವು ಹೆಗ್ಗಡೆಯವರ ಅಕ್ರಮಗಳನ್ನು ದಾಖಲೆಸಹಿತ ಬಯಲಿಗೆಳೆಯುತ್ತಿದ್ದರೂ ನೀವು ಪ್ರಕಟಿಸುತ್ತಿಲ್ಲ. ಹೆಗ್ಗಡೆಯವರು ನಿಮಗೆ ಕೋಟಿಗಟ್ಟಲೆ ರೂಪಾಯಿಯ ಜಾಹೀರಾತು ನೀಡುವ ಕಾರಣಕ್ಕಾಗಿ ನೀವು ನಮ್ಮ ಸುದ್ದಿಗಳನ್ನು ಪ್ರಕಟಿಸದಿರುವುದು, ಪದೇಪದೇ ನೆನಪಿಸಿದಾಗ ಯಾವಾಗಲೋ ಒಂದು ಚಿಕ್ಕ ವರದಿಯನ್ನು ಬೆಳ್ತಂಗಡಿ-ಬಂಟ್ವಾಳಕ್ಕೆ ಸೀಮಿತವಾದ ಸುದಿನದಲ್ಲಿ ಪಕಟಿಸುವುದು ನಡೆಯುತ್ತಿದೆ. ನಮ್ಮನ್ನು ನೀವು ಹಗುರವಾಗಿ ಪರಿಗಣಿಸುತ್ತಿದ್ದೀರಿ” ಎಂದು ಕಿಡಿಕಾರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 47

“ನಿಮ್ಮ ಪತಿಕೆಯಲ್ಲಿ ವರದಿ ಬಂದರೆ ನಮಗೆ ಕಿರೀಟ ಬರುವುದಿಲ್ಲ. ಆದರೆ, ನೀವು ಸುದ್ದಿ ಪ್ರಕಟಿಸದೆ, ಓದುಗರಿಗೆ ದೋಹ ಮಾಡಿದಂತಾಗುತ್ತದೆ. ನಿಮ್ಮ ಪತಿಕೆಗೆ ಬೇಕೆಟ್‌ನಲ್ಲಿ ‘ಹೆಗ್ಗಡೆವಾಣಿ’ ಎಂದು ಹಾಕಿದರೆ ಸೂಕ್ತವಲ್ಲವೇ? ಧರ್ಮಾಧಿಕಾರಿಗಳ ಪರವಾಗಿ ಉಜಿರೆಯಿಂದ ಧರ್ಮಸ್ಥಳಕ್ಕೆ 4 ಸಾವಿರ ಮಂದಿ ನಡೆಸಿದ ಪಾದಯಾತ್ರೆಯನ್ನು 25 ಸಾವಿರ ಜನರ ಪಾದಯಾತ್ರೆಯೆಂದು ಬರೆಯುತ್ತೀರಿ. ಧರ್ಮಸ್ಥಳದ ದಲಿತರ ಮುರುಕು ಮನೆಗಳ ದುಃಸ್ಥಿತಿ ನಿಮ್ಮ ಕಣ್ಣಿಗೆ ಕಾಣುವುದಿಲ್ಲ. ಹೆಗ್ಗಡೆಯವರ ಬೀಡು ಚಿತ್ರೀಕರಿಸುವ ನಿಮಗೆ ಸೌಜನ್ಯಾಳ ಕುಟುಂಬದ ಗೋಳು ಕೇಳುವುದಿಲ್ಲ. ಧರ್ಮಸ್ಥಳದಲ್ಲಾದ ನೂರಾರು ಎಕರೆ ಅತಿಕ್ರಮಣ ಕಾಣುವುದಿಲ್ಲ. ಇವುಗಳ ಬಗ್ಗೆ ನಾವು ಆಧಾರಸಹಿತ ನಿಮಗೆ ಕಳಿಸಿದ ವರದಿ ಕಸದ ಬುಟ್ಟಿಗೆ ಹಾಕಿದ್ದೀರಿ! ನೀವು ಪಶ್ಚಾತ್ತಾಪ ಪಡಬೇಕಾದ ಕಾಲ ದೂರವಿಲ್ಲ-ನೆನಪಿರಲಿ” ಎಂದು ಎಚ್ಚರಿಕೆ ನೀಡಿದೆ.

“ಇನ್ನು ಮುಂದೆ ನಾವು ನಮ್ಮ ವರದಿ, ಪತ್ರಿಕಾ ಹೇಳಿಕೆಗಳನ್ನು ನಿಮಗೆ ಕಳಿಸುವುದಿಲ್ಲ. ನಿಮಗೆ ದುಂಬಾಲು ಬಿದ್ದು ವರದಿ ಹಾಕಿಸುವ ದರ್ದು ನಮಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...